ಜೆ ಎನ್ ಯು ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಕನ್ಹಯ್ಯ ಕುಮಾರ್ 
ಪ್ರಧಾನ ಸುದ್ದಿ

ಜೆ ಎನ್ ಯು ವಿವಾದ: ಕನ್ಹಯ್ಯ ಜಾಮೀನು ವಿಚಾರಣೆ ಹೈಕೋರ್ಟ್ ನಲ್ಲಿ ಮರು ಪ್ರಾರಂಭ

ದೇಶದ್ರೋಹಿ ಆರೋಪದ ಮೇಲೆ ಬಂಧಿತರಾಗಿರುವ ಜೆ ಎನ್ ಯು ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಕನ್ಹಯ್ಯ ಕುಮಾರ್ ಅವರ ಜಾಮೀನು ವಿಚಾರಣೆ ಸೋಮವಾರ ಮತ್ತೆ

ನವದೆಹಲಿ: ದೇಶದ್ರೋಹಿ ಆರೋಪದ ಮೇಲೆ ಬಂಧಿತರಾಗಿರುವ ಜೆ ಎನ್ ಯು ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಕನ್ಹಯ್ಯ ಕುಮಾರ್ ಅವರ ಜಾಮೀನು ವಿಚಾರಣೆ ಸೋಮವಾರ ಮತ್ತೆ ದೆಹಲಿ ಹೈಕೋರ್ಟ್ ನಲ್ಲಿ ಪ್ರಾರಂಭವಾಗಲಿದೆ.

ಫೆಬ್ರವರಿ ೨೪ರಂದು ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್, ದೆಹಲಿ ಪೊಲೀಸರು ಕನ್ಹಯ್ಯ ಅವರನ್ನು ಇನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಬೇಕೆಂದು ಕೋರಿದ್ದ ಮನವಿಗೆ ಮನ್ನಿಸಿ, ವಿಚಾರಣೆಯನ್ನು ೨೯ಕ್ಕೆ ಮುಂದೂಡಿತ್ತು.

ಫೆಬ್ರವರಿ ೨೫ ರಂದು ಕನ್ಹಯ್ಯ ಕುಮಾರ್ ಅವರನ್ನು ನ್ಯಾಯಾಂಗ ಬಂಧನದಿಂದ ವಶಕ್ಕೆ ಪಡೆದಿದ್ದ ಪೊಲೀಸರು, ಇನ್ನಿಬ್ಬರು ಜೆ ಎನ್ ಯು ವಿದ್ಯಾರ್ಥಿಗಳಾದ ಉಮರ್ ಖಲೀದ್ ಮತ್ತು ಅನಿರ್ಬಾನ್ ಭಟ್ಟಾಚಾರ್ಯ ಅವರೊಂದಿಗೆ ವಿಚಾರಣೆ ನಡೆಸಿದ್ದರು. ಈ ವಿಚಾರಣೆಯ ಪ್ರಗತಿಯ ವಿವರಗಳನ್ನು ಪೊಲೀಸರು ಇಂದು ಕೋರ್ಟಿಗೆ ಸಲ್ಲಿಸುವ ಸಾಧ್ಯತೆ ಇದೆ.

ನಂತರ ಫೆಬ್ರವರಿ 26 ರಂದು ಕನ್ಹಯ್ಯ ಅವರನ್ನು ನ್ಯಾಯಂಗ ಬಂಧನಕ್ಕೆ ಮತ್ತೆ ಒಪ್ಪಿಸಲಾಗಿತ್ತು. ಕನ್ಹಯ್ಯ ಅವರನ್ನು ದೆಹಲಿ ಪೊಲೀಸರು ಫೆಬ್ರವರಿ ೧೨ರಂದು ಬಂಧಿಸಿದ್ದರು.

ಫೆಬ್ರವರಿ ೨೩ರಂದು ಪೊಲೀಸರಿಗೆ ಶರಣಾಗಿದ್ದ ಉಮರ್ ಮತ್ತು ಅನಿರ್ಬಾನ್ ಇಂದಿಗೂ ಪೊಲೀಸರ ವಶದಲ್ಲಿದ್ದಾರೆ. ಈ ಮಧ್ಯೆ ಪೊಲೀಸರು ದೇಶದ್ರೋಹ ಆರೋಪ ಹೊರಿಸಿದ್ದ ಆರು ವಿದ್ಯಾರ್ಥಿಗಳ ಪೈಕಿ ಒಬ್ಬರಾದ ಅಶುತೋಶ್ ಕುಮಾರ್ ಅವರನ್ನು ಕೂಡ ನೆನ್ನೆ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

India vs Pakistan T20 World Cup 2026: ಪಂದ್ಯ ಬಹಿಷ್ಕರಿಸುವ​ ನಿರ್ಧಾರ, ನಮ್ಮ ನಿಲುವು ಸ್ಪಷ್ಟ ಎಂದ ಪಾಕ್ ಪ್ರಧಾನಿ

'ನಾನು ಜೀವನದ ಸಂಧ್ಯಾಕಾಲದಲ್ಲಿದ್ದೇನೆ: ಈ ವೃದ್ಧನ ಮನವಿಗೆ ಮಾನವೀಯತೆಯಿಂದ ಸ್ಪಂದಿಸಿ; ಕರ್ನಾಟಕವನ್ನು ರಕ್ಷಿಸಿ'

ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ 2026: "ಸಂಪಾಯಿತಲೇ ಪರಾಕ್' ಭವಿಷ್ಯವಾಣಿ ನುಡಿದ ಗೊರವಯ್ಯ, ಏನಿದರ ಅರ್ಥ..?

ನಾವು ಐದು ಜನ ಬಂದಿದ್ದರಿಂದ ನೀವು ಸರ್ಕಾರ ಮಾಡಿದ್ರಿ: ಮಂತ್ರಿಯಾಗಿ ಮಜಾ ಮಾಡಿ, ಖಾಲಿ ಮಾಡಿಕೊಂಡು ಹೋದ್ರಿ; ಅಶೋಕ್- ತಂಗಡಗಿ ಜಟಾಪಟಿ

Bengaluru-Pune ಹೈ–ಸ್ಪೀಡ್ ರೈಲು ಮಾರ್ಗಕ್ಕೆ ಕೇಂದ್ರದಿಂದ ಸಕರಾತ್ಮಕ ಸ್ಪಂದನೆ

SCROLL FOR NEXT