ಸ್ಮೃತಿ ಇರಾನಿ 
ಪ್ರಧಾನ ಸುದ್ದಿ

ಸ್ಮೃತಿ ಇರಾನಿಗೆ ಜೆಎನ್ ಯು ವಿದ್ಯಾರ್ಥಿ ಪತ್ರ: ನಾನು ನಿಮ್ಮ ಮಗನಲ್ಲ, ರಾಜಕೀಯ ವಿರೋಧಿ

ಇಡೀ ದೇಶದ ಗಮನ ಸೆಳೆದಿರುವ ಜೆಎನ್ ಯು ವಿದ್ಯಾರ್ಥಿಗಳ ವಿರುದ್ಧದ ದೇಶದ್ರೋಹ ಪ್ರಕರಣ ಸಂಬಂಧ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಅವರಿಗೆ ...

ನವದೆಹಲಿ: ಇಡೀ ದೇಶದ ಗಮನ ಸೆಳೆದಿರುವ ಜೆಎನ್ ಯು ವಿದ್ಯಾರ್ಥಿಗಳ ವಿರುದ್ಧದ ದೇಶದ್ರೋಹ ಪ್ರಕರಣ ಸಂಬಂಧ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಅವರಿಗೆ ವಿದ್ಯಾರ್ಥಿಯೊಬ್ಬ ಬಹಿರಂಗ ಪತ್ರ ಬರೆದಿದ್ದಾರೆ.

ಆರು ಜೆಎನ್‌‌ಯು ವಿದ್ಯಾರ್ಥಿಗಳ ಪೈಕಿ ಓರ್ವ ವಿದ್ಯಾರ್ಥಿ ಇರಾನಿ ಅವರಿಗೆ ಬಹಿರಂಗ ಪತ್ರ ಬರೆದು ನಾನು ನಿಮ್ಮ ಮಗನಲ್ಲ, ಆದರೆ ನಿಮ್ಮ ರಾಜಕೀಯ ವಿರೋಧಿ ಎಂದು ತಿಳಿಸಿದ್ದಾನೆ.

ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ಸ್ಮೃತಿ ಇರಾನಿ ಮಾಡಿದ್ದ ಭಾವನಾತ್ಮಕ ಭಾಷಣಕ್ಕೆ ಪ್ರತಿಯಾಗಿ ಜೆಎನ್‌ಯು ವಿದ್ಯಾರ್ಥಿ ಅನಂತ್ ಪ್ರಕಾಶ್ ಈ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಸ್ಮೃತಿ ಅವರ ಭಾಷಣವನ್ನು ತೀವ್ರವಾಗಿ ಖಂಡಿಸಿರುವ ಅನಂತ್, ರೋಹಿತ್ ವೇಮುಲ ಸಾವಿಗೆ ಕಣ್ಣೀರಿಟ್ಟ ಸ್ಮೃತಿ ಅವರಿಗೆ ರೋಹಿತ್ ತಾಯಿಯ ನೋವು ಅರ್ಥವಾಗಲು ಸಾಧ್ಯವೇ ಇಲ್ಲ ಎಂದು ಕಿಡಿಕಾರಿದ್ದಾರೆ.

ತಮ್ಮನ್ನು ರೋಹಿತ್ ತಾಯಿ ಸ್ಥಾನದಲ್ಲಿ ಕಾಣುತ್ತಿರುವ ಸ್ಮೃತಿ ಇರಾನಿ ಮನುಸ್ಮೃತಿ ಓದಿದರೆ ಖಂಡಿತ ಬಿಜೆಪಿ ತೊರೆಯುತ್ತಾರೆ ಎಂದು ಹೇಳಿರುವ ಅನಂತ್, ದಲಿತರ ನೋವಿಗೆ ಮೊಸಳೆ ಕಣ್ಣೀರು ಸುರಿಸುವುದನ್ನು ಸ್ಮೃತಿ ಇರಾನಿ ಬಿಡಬೇಕು ಎಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT