ಉಗ್ರರ ದಾಳಿಗೊಳಗಾಗಿದ್ದ ಪಠಾಣ್ ಕೋಟ್ ಸೇನಾ ವಾಯುನೆಲೆ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಪಠಾಣ್ ಕೋಟ್ ವಾಯುನೆಲೆಯಲ್ಲಿ ಮತ್ತೆ ಸ್ಫೋಟ ಸದ್ದು..!

ಸತತ 3 ದಿನಗಳ ಕಾಲ ಉಗ್ರರ ದಾಳಿಯಿಂದ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಪಂಜಾಬ್ ನ ಪಠಾಣ್ ಕೋಟ್ ನಲ್ಲಿರುವ ಸೇನಾ ವಾಯುನೆಲೆಯಲ್ಲಿ ಮಂಗಳವಾರ ಮತ್ತೆ ಬಾಂಬ್ ಸ್ಫೋಟದ ಸದ್ದು ಕೇಳಿಬಂದಿದೆ...

ಪಠಾಣ್ ಕೋಟ್: ಸತತ 3 ದಿನಗಳ ಕಾಲ ಉಗ್ರರ ದಾಳಿಯಿಂದ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಪಂಜಾಬ್ ನ ಪಠಾಣ್ ಕೋಟ್ ನಲ್ಲಿರುವ ಸೇನಾ ವಾಯುನೆಲೆಯಲ್ಲಿ ಮಂಗಳವಾರ ಮತ್ತೆ ಬಾಂಬ್ ಸ್ಫೋಟದ ಸದ್ದು ಕೇಳಿಬಂದಿದೆ.

ಮಂಗಳವಾರ ಮಧ್ಯಾಹ್ನ ಈ ಸ್ಫೋಟದ ಸದ್ದು ಕೇಳಿಬಂದಿದ್ದು, ವಾಯುನೆಲೆಯ ಸುತ್ತಮುತ್ತ ಮತ್ತೆ ಗಂಭೀರ ವಾತಾವರಣ ನಿರ್ಮಾಣವಾಗಿತ್ತು. ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಭಾರತೀಯ ಸೇನೆಯ ಮೂಲಗಳು ಇದೊಂದು ನಿಯಂತ್ರಿತ ಸ್ಫೋಟವಾಗಿದೆ ಎಂದು ಸ್ಪಷ್ಟಪಡಿಸಿದೆ. ಉಗ್ರ ನಿಗ್ರಹ ಕಾರ್ಯಾಚರಣೆ ವೇಳೆ ಕೆಳಗೆ ಬಿದ್ದಿದ್ದ ಜೀವಂತ ಗ್ರೆನೇಡ್ ಗಳನ್ನು ಇಂದು ಭಾರತೀಯ ಸೇನೆ ನಾಶಪಡಿಸಿದೆ. ಈ ವೇಳೆ ಉಂಟಾದ ಸ್ಫೋಟದಿಂದಲೇ ಭಾರಿ ಶಬದ್ಧ ಉಂಟಾಗಿದೆ ಎಂದು ಹೇಳಲಾಗುತ್ತಿದೆ.

ಇದೇ ವೇಳೆ ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಪಠಾಣ್ ಕೋಟ್ ಗೆ ತೆರಳಿದ್ದು, ಘಟನಾ ಸ್ಥಳದಿಂದ ನೇರವಾಗಿ ಮಾಹಿತಿ ಪಡೆಯಲಿದ್ದಾರೆ. ಅಲ್ಲದೆ ಘಟನೆಗೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ದಾಳಿ ಸಂಬಂಧ ಆಂತರಿಕ ತನಿಖೆ

ಪಠಾಣ್ ಕೋಟ್ ವಾಯುನೆಲೆ ಉಗ್ರ ದಾಳಿಗೆ ಸಂಬಂಧಿಸಿದಂತೆ ಈಗಾಗಲೇ ಭಾರತೀಯ ಸೇನೆ ಆಂತರಿಕ ತನಿಖೆ ನಡೆಸುತ್ತಿದ್ದು, ಹಿರಿಯ ಅಧಿಕಾರಿಗಳ ಪಾತ್ರದ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಉಗ್ರರ ಕುರಿತಂತೆ ಸ್ಥಳೀಯ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಉಗ್ರರಿಂದ ಅಪಹರಣಕ್ಕೊಳಗಾಗಿದ್ದ ಸಲ್ವಿಂದರ್ ಸಿಂಗ್ ಅವರ ಹೇಳಿಕೆಯನ್ನು ಸೈನಾಧಿಕಾರಿಗಳು ಹಗುರವಾಗಿ ಅಥವಾ ಸಾಮಾನ್ಯ ಎಂಬಂತೆ ಪರಿಗಣಿಸಿದರೆ ಎಂಬ ಹಲವು ಅಂಶಗಳ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT