ಹುತಾತ್ಮ ಲೆಫ್ಟಿನೆಂಟ್ ಕರ್ನಲ್ ಇ ಕೆ ನಿರಂಜನ್ ಶ್ರದ್ಧಾಂಜಲಿ ಸಭೆ 
ಪ್ರಧಾನ ಸುದ್ದಿ

ಪಠಾನ್ ಕೋಟ್ ಹುತಾತ್ಮ ನಿರಂಜನ್ ಅವಮಾನಿಸಿದ ಎಫ್ ಬಿ ಪ್ರತಿಕ್ರಿಯೆ; ವ್ಯಕ್ತಿಯ ಬಂಧನ

ಪಠಾನ್ ಕೋಟ್ ಭಯೋತ್ಪಾದನಾ ದಾಳಿಯಲ್ಲಿ ಹೋರಾಡಿ ಮಡಿದ ಹುತಾತ್ಮ ಲೆಫ್ಟಿನೆಂಟ್ ಕರ್ನಲ್ ಇ ಕೆ ನಿರಂಜನ್ ಅವರ ಬಗ್ಗೆ ಫೇಸ್ಬುಕ್ ನಲ್ಲಿ ಅವಮಾನಕಾರಿಯಾಗಿ ಪ್ರತಿಕ್ರಿಯಿಸಿದ್ದ

ಪಠಾನ್ ಕೋಟ್ ಭಯೋತ್ಪಾದನಾ ದಾಳಿಯಲ್ಲಿ ಹೋರಾಡಿ ಮಡಿದ ಹುತಾತ್ಮ ಲೆಫ್ಟಿನೆಂಟ್ ಕರ್ನಲ್ ಇ ಕೆ ನಿರಂಜನ್ ಅವರ ಬಗ್ಗೆ ಫೇಸ್ಬುಕ್ ನಲ್ಲಿ ಅವಮಾನಕಾರಿಯಾಗಿ ಪ್ರತಿಕ್ರಿಯಿಸಿದ್ದ ಕೇರಳದ ಮಲಪ್ಪುರಂನ ವ್ಯಕ್ತಿಯೊಬ್ಬನನ್ನು ದೇಶದ್ರೋಹದ ಆರೋಪದ ಮೇಲೆ ಬಂಧಿಸಲಾಗಿದೆ.

ಮಾಧ್ಯಮಂ ಪತ್ರಿಕೆಯ ಪತ್ರಿಕೋದ್ಯಮಿ ಎಂದು ಹೇಳಿಕೊಂಡಿದ್ದ ಅನ್ವರ್ "ಈಗ ಒಂದು ತೊಂದರೆ ಕಳೆಯಿತು. ಈಗ ಅವನ ಹೆಂಡತಿಗೆ ಹಣ ಮತ್ತು ಕೆಲಸ ದೊರೆಯಲಿದೆ. ನಮ್ಮಂತಹ ಸಾಮಾನ್ಯರಿಗೆ ಏನೂ ಸಿಗುವುದಿಲ್ಲ. ಕೊಳೆತು ನಾರುವ ಪ್ರಜಾಪ್ರಭುತ್ವಕ್ಕೆ ಧಿಕ್ಕಾರ" ಎಂದು ಅರ್ಥ ಬರುವಂತೆ ಮಲಯಾಳಂನಲ್ಲಿ ಬರೆದಿದ್ದ ಎಂದು ದೂರಲಾಗಿತ್ತು. ನಂತರ ಈ ಪ್ರತಿಕ್ರಿಯೆಯನ್ನು ತೆಗೆದಿದ್ದರು ಅದರ ಇಮೇಜ್ ರೂಪ ಫೇಸ್ಬುಕ್ ನಲ್ಲಿ ಓಡಾಡುತ್ತಿತ್ತು.

ಆದರೆ ಇದಕ್ಕೆ ಸ್ಪಷ್ಟೀಕರಣ ನೀಡಿದ ಮಾಧ್ಯಮಂ ಪತ್ರಿಕೆ, ಅಂತಹ ಯಾವ ವ್ಯಕ್ತಿಯೂ ನಮ್ಮ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿಲ್ಲ, ಇದು ನಮ್ಮ ಗೌರವಕ್ಕೆ ಧಕ್ಕೆ ತರುತ್ತದೆ ಎಂದು ಪೊಲೀಸ್ ದೂರು ನೀಡಿದ್ದರು.

ಈ ದೂರಿನ ಹಿನ್ನಲೆಯಲ್ಲಿ ಮಲಪ್ಪುರಂನ ರೇಶನ್ ಅಂಗಡಿಯೊಂದರಲ್ಲಿ ಸಹಾಯಕನಾಗಿ ಕೆಲಸ ಮಾಡುವ ೨೪ ವರ್ಷದ ಅನ್ವರ್ ನನ್ನು ಪೊಲೀಸರು ದೇಶದ್ರೋಹ ಆರೋಪದ ಮೇಲೆ ಬಂಧಿಸಿದ್ದಾರೆ. ಈ ಆರೋಪ ಸಾಬೀತಾದರೆ ಬಂಧಿತ ವ್ಯಕ್ತಿ ಜೀವಾವಧಿ ಶಿಕ್ಷೆಗೆ ಗುರಿಯಾಗುವ ಸಾಧ್ಯತೆ ಇರುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT