ಲಂಕಾನೌಕಾಪಡೆಯಿಂದ ಭಾರತೀಯ ಮೀನುಗಾರರ ಬಂಧನ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಲಂಕಾ ನೌಕಾಪಡೆಯಿಂದ 12 ಮಂದಿ ಭಾರತೀಯ ಮೀನುಗಾರರ ಬಂಧನ

ಶ್ರೀಲಂಕಾ ಸಮುದ್ರ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮೀನುಗಾರಿಕೆ ಮಾಡುತ್ತಿದ್ದ ಆರೋಪ ಮೇಲೆ ಲಂಕಾ ನೌಕಾಪಡೆ 12 ಮಂದಿ ಭಾರತೀಯ ಮೀನುಗಾರರನ್ನು ಬಂಧಿಸಿದೆ...

ಚೆನ್ನೈ: ಶ್ರೀಲಂಕಾ ಸಮುದ್ರ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮೀನುಗಾರಿಕೆ ಮಾಡುತ್ತಿದ್ದ ಆರೋಪ ಮೇಲೆ ಲಂಕಾ ನೌಕಾಪಡೆ 12 ಮಂದಿ ಭಾರತೀಯ ಮೀನುಗಾರರನ್ನು ಬಂಧಿಸಿದೆ.

ತಮಿಳುನಾಡು ಮೂಲದ ಸುಮಾರು 12 ಮಂದಿ ಮೀನುಗಾರರನ್ನು ಸಮುದ್ರ ಗಡಿ ನಿಯಮ ಉಲ್ಲಂಘನೆ ಆರೋಪದಡಿ ಶ್ರೀಲಂಕಾ ನೌಕಾಪಡೆ ಮಂಗಳವಾರ ಬೆಳ್ಳಂಬೆಳಗ್ಗೆ ಬಂಧಿಸಿದೆ ಎಂದು  ತಿಳಿದುಬಂದಿದೆ. ಲಂಕಾದ ಕಚ್ಛಾತೀವು ಸಮುದ್ರ ಗಡಿಯಲ್ಲಿ 12 ಮಂದಿ ಮೀನುಗಾರರು ಅಕ್ರಮವಾಗಿ ಮೀನುಗಾರಿಕೆ ಮಾಡುತ್ತಿದ್ದರು ಎಂದು ಲಂಕಾ ನೌಕಾಪಡೆ ಆರೋಪಿಸಿದೆ.

ಮೂಲಗಳ ಪ್ರಕಾರ ಬಂಧಿತ 12 ಮಂದಿಯ ಪೈಕಿ 8 ಮಂದಿ ರಾಮೇಶ್ವರಂ ಪ್ರದೇಶಕ್ಕೆ ಸೇರಿದವರಾಗಿದ್ದು, ಉಳಿದ ಇಬ್ಬರು ಪುದುಕೋಟೈನಲ್ಲಿರುವ ಜಗಡಪಟ್ಟಿನಂ ಜಿಲ್ಲೆಗೆ ಸೇರಿದವರು ಎಂದು  ಮೀನುಗಾರಿಕೆ ಸಹಾಯಕ ನಿರ್ದೇಶಕರಾದ ಗೋಪಿನಾಥ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಪ್ರಸ್ತುತ ಮೀನುಗಾರಿ ನಡೆಸುತ್ತಿದ್ದ ಮೂರು ಬೋಟ್ ಗಳನ್ನು ಮತ್ತು ಅದರಲ್ಲಿದ್ದ  ಸಿಬ್ಬಂದಿಗಳನ್ನು ಬಂಧಿಸಿದ್ದು, ತಲೈಮನ್ನೂರಿಗೆ ಕೊಂಡೊಯ್ದು ಅಲ್ಲಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸುವುದಾಗಿ ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT