ಮಾಜಿ ಭದ್ರತಾ ಸಚಿವ ಎ ಕೆ ಆಂಟನಿ 
ಪ್ರಧಾನ ಸುದ್ದಿ

ಪಠಾನ್ ಕೋಟ್ ದಾಳಿಯ ಬಗ್ಗೆ ಮೌನ ಮುರಿಯಿರಿ: ಮೋದಿಗೆ ಆಂಟನಿ ಆಗ್ರಹ

ಪಂಜಾಬಿನ ಪಠಾನ್ ಕೋಟ್ ನ ಭಾರತೀಯ ವಾಯುನೆಲೆಯ ಮೇಲೆ ನಡೆದ ದಾಳಿಯ ಬಗ್ಗೆ ಮೌನ ಮುರಿಯುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ

ತಿರುವನಂತಪುರಮ್: ಪಂಜಾಬಿನ ಪಠಾನ್ ಕೋಟ್ ನ ಭಾರತೀಯ ವಾಯುನೆಲೆಯ ಮೇಲೆ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ಮೌನ ಮುರಿಯುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಜಿ ಭದ್ರತಾ ಸಚಿವ ಎ ಕೆ ಆಂಟನಿ ಗುರುವಾರ ಆಗ್ರಹಿಸಿದ್ದಾರೆ.

"ಇದು ಗಂಭೀರ ಭದ್ರತಾ ಲೋಪ ಮತ್ತು ಇದರ ಬಗ್ಗೆ ಬಹಳಷ್ಟು ಸುಳಿವುಗಳಿದ್ದವು.. ಆದರೆ ಯಾವುದೂ ಕ್ರಮಗಳನ್ನು ಕೈಗೊಂಡಿರಲಿಲ್ಲ. ಆದುದರಿಂದ ಏನು ನಡೆಯಿತು ಎಂದು ದೇಶಕ್ಕೆ ಮೋದಿ ತಿಳಿಸಬೇಕು" ಎಂದು ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಆಂಟನಿ ಹೇಳಿದ್ದಾರೆ.

ಆರೋಗ್ಯ ತಪಾಸಣೆಗೆ ಅಮೆರಿಕಾಕ್ಕೆ ತೆರಳಿದ್ದ ಹಿರಿಯ ಕಾಂಗ್ರೆಸ್ ಮುಖಂಡ ದೇಶಕ್ಕೆ ಮರಳಿದ ನಂತರ ಮೊದಲ ಬಾರಿಗೆ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡಿದ್ದಾರೆ.

"ಮೋದಿ ಪಾಕಿಸ್ತಾನಕ್ಕೆ ಭೇಟಿ ನೀಡಿದ ಮೇಲೆ ಈ ದಾಳಿ ನಡೆದಿದೆ. ಈ ದಾಳಿ ಹೇಗಾಯಿತು ಎಂದು ದೇಶಕ್ಕೆ ಗೊತ್ತಾಗಬೇಕಿದೆ. ಇದು ಗಂಭೀರ ವಿಷಯ. ಪ್ರಧಾನಿ ಇನ್ನೂ ಮೌನವಾಗಿ ಕೂರುವುದು ಸಮ್ಮತವಲ್ಲ ಬದಲಾಗಿ ಅವರು ಏನಾಯಿತು ಎಂದು ದೇಶಕ್ಕೆ ವಿವರಿಸಬೇಕು" ಎಂದು ಆಂಟನಿ ಹೇಳಿದ್ದಾರೆ.

ಶನಿವಾರ ಬೆಳಗ್ಗೆ ನಡೆದ ಈ ದಾಳಿಯಲ್ಲಿ ಏಳು ಜನ ಭದ್ರತಾ ಸಿಬ್ಬಂದಿ ಮೃತಪಟಿದ್ದರು ಹಾಗು ದಾಳಿಗೈದ ಎಲ್ಲಾ ಆರು ಉಗ್ರಗಾಮಿಗಳನ್ನು ಕೊಲ್ಲಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT