(ಸಾಂದರ್ಭಿಕ ಚಿತ್ರ) 
ಪ್ರಧಾನ ಸುದ್ದಿ

ಸ್ಕಾರ್ಪಿಯೋ ಕಾರು ಪಲ್ಟಿ: ಬೆಂಗಳೂರಿನ 7 ಯುವಕರು ದುರ್ಮರಣ

ಪ್ರವಾಸಕ್ಕೆಂದು ತೆರಳಿದ್ದ ಯುವಕರ ಗುಂಪಿನ ಕಾರೊಂದು ಕೆರೆಗೆ ಪಲ್ಟಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 7 ಯುವಕರು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಶನಿವಾರ ನಡೆದಿದೆ...

ಬೆಂಗಳೂರು: ಪ್ರವಾಸಕ್ಕೆಂದು ತೆರಳಿದ್ದ ಯುವಕರ ಗುಂಪಿನ ಕಾರೊಂದು ಕೆರೆಗೆ ಪಲ್ಟಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 7 ಯುವಕರು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಶನಿವಾರ ನಡೆದಿದೆ.

ಸಾವನ್ನಪ್ಪಿದ್ದ ಯುವಕರು ಬೆಂಗಳೂರಿನ ಹೊರವಲಯದ ಬಿಡದಿಯಲ್ಲಿರುವ ಟೊಯೊಟಾ ಕಿರ್ಲೋಸ್ಕರ್ ಕಂಪನಿಗೆ ಸೇರಿದ ಉದ್ಯೋಗಿಗಳಾಗಿದ್ದು, ಯುವಕರ ಗುಂಪು ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಸ್ಕಾರ್ಪಿಯೋ ಕಾರಿನಲ್ಲಿ ಪ್ರವಾಸಕ್ಕೆಂದು ತೆರಳಿದ್ದರು. ನಿನ್ನೆ ತಡರಾತ್ರಿ ಯುವಕರಿದ್ದ ಕಾರು ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಇದ್ದಕ್ಕಿದ್ದಂತೆ ಜನಿವಾರ ಗ್ರಾಮದ ಕೆರೆಗೆ ಪಲ್ಟಿ ಹೊಡೆದಿದೆ.

ಪರಿಣಾಮ ಕಾರಿನಲ್ಲಿದ್ದ ಜನಾರ್ದನ್ (22), ಕಾರ್ತಿಕ್ (24), ಸತೀಶ್ (24), ದಿಲೀಪ್ (24), ಜಯಂತ್ (23), ಶಿವಸ್ವಾಮಿ (24), ರಾಜು (24) ಎಂಬುವವರು ಸಾವನ್ನಪ್ಪಿದ್ದಾರೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಮೂವರು ಯುವಕರು ಪಾರಾಗಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಚನ್ನರಾಯಪಟ್ಟಣ ಪೊಲೀಸರು ಸ್ಥಳ ಪರಿಶೀಲನೆ ನಡೆಸುತ್ತಿದ್ದು, ಕೆರೆಗೆ ಬಿದ್ದಿದ್ದ ಏಳು ಯುವಕರ ಮೃತದೇಹವನ್ನು ಹೊರತೆಗೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT