ಅಭಿಶೇಕ್ ಮುನು ಸಿಂಘ್ವಿ 
ಪ್ರಧಾನ ಸುದ್ದಿ

ಸೇನಾ ಕ್ಷಿಪ್ರಕ್ರಾಂತಿ: ಮನಿಶ್ ತಿವಾರಿ ಹೇಳಿಕೆಯಿಂದ 'ಕೈ' ದೂರ

2012ರಲ್ಲಿ ಸೇನಾ ಕ್ಷಿಪ್ರಕ್ರಾಂತಿ ಯತ್ನ ನಡೆದದ್ದು ನಿಜ ಎಂದಿದ್ದ ಕೇಂದ್ರ ಮಾಜಿ ಸಚಿವ ಮನಿಶ್ ತಿವಾರಿ ಅವರನ್ನು ಕೇಂದ್ರ ಸಚಿವ ವಿ ಕೆ ಸಿಂಗ್ ಅವರು ತರಾಟೆಗೆ...

ನವದೆಹಲಿ: 2012ರಲ್ಲಿ ಸೇನಾ ಕ್ಷಿಪ್ರಕ್ರಾಂತಿ ಯತ್ನ ನಡೆದದ್ದು ನಿಜ ಎಂದಿದ್ದ ಕೇಂದ್ರ ಮಾಜಿ ಸಚಿವ ಮನಿಶ್ ತಿವಾರಿ ಅವರನ್ನು ಕೇಂದ್ರ ಸಚಿವ ವಿ ಕೆ ಸಿಂಗ್ ಅವರು ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ, ತಿವಾರಿ ಹೇಳಿಕೆಯನ್ನು ಸಮರ್ಥಿಸಿಕೊಳ್ಳಲು ಕಾಂಗ್ರೆಸ್ ನಿರಾಕರಿಸಿದೆ.
ಮನಿಶ್ ತಿವಾರಿ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿರುವ ಕಾಂಗ್ರೆಸ್, ಸೇನಾಪಡೆಯ ಅಸಹಜ ಚಲನವಲನ ಕುರಿತಾದ ವರದಿ ತಪ್ಪು ಎಂದಿದೆ.
'ಕಾಂಗ್ರೆಸ್ ಪಕ್ಷದ ಪರವಾಗಿ ನಾನು ಆ ವರದಿಯನ್ನು ಸ್ಪಷ್ಟವಾಗಿ ತಳ್ಳಿ ಹಾಕುತ್ತೇನೆ. ಸರ್ಕಾರದ ಗಮನಕ್ಕೆ ಬಾರದೆ ಅಂತಹ ಯಾವುದೇ ಸೇನಾ ಚಲನವಲನ ನಡೆದಿಲ್ಲ' ಎಂದು ಕಾಂಗ್ರೆಸ್ ನಾಯಕ ಪಿ.ಸಿ.ಚಾಕೋ ಅವರು ಹೇಳಿದ್ದಾರೆ.
ಅಂದಿನ ಸೇನಾ ಮುಖ್ಯಸ್ಥ ವಿ.ಜೆ.ಸಿಂಗ್ ಅವರ ಅವಧಿಯಲ್ಲಿ ಸೈನಿಕರ ದಂಡೊಂದು ಹರಿಯಾಣದಿಂದ ದೆಹಲಿಯತ್ತ ಅಸಹಜವಾಗಿ ಹೊರಟಿತ್ತು ಎಂಬ ಇಂಡಿಯನ್ ಎಕ್ಸ್‌ಪ್ರೆಸ್ ವರದಿಯನ್ನು ಪಕ್ಷ ಅಧಿಕೃತವಾಗಿಯೇ ತಳ್ಳಿಹಾಕಿದೆ ಎಂದು ಚಾಕೋ ತಿಳಿಸಿದ್ದಾರೆ.
ಇನ್ನು ಹಿರಿಯ ಕಾಂಗ್ರೆಸ್ ನಾಯಕ ಅಭಿಶೇಕ್ ಮುನು ಸಿಂಘ್ವಿ ಅವರು ಈ ವರದಿಯನ್ನು ತಳ್ಳಿಹಾಕಿದ್ದು, ಆ ವರದಿಯಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Trump ಭಾಗಿಯಾಗಲಿರುವ ಗಾಜಾ ಶಾಂತಿ ಶೃಂಗಸಭೆಗೆ ಪ್ರಧಾನಿಗೆ ಈಜಿಪ್ಟ್‌ನ ಸಿಸಿ ಆಹ್ವಾನ: US ಅಧ್ಯಕ್ಷರೊಂದಿಗೆ ವೇದಿಕೆ ಹಂಚಿಕೊಳ್ತಾರಾ ಮೋದಿ?

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ಇದೆಂಥಾ ಕ್ರೌರ್ಯ: ಮದ್ಯ ಮಾರಾಟ ನಿಷೇಧ ಉಲ್ಲಂಘಿಸಿದ್ದ ಬ್ರಾಹ್ಮಣನ ಟೀಕಿಸಿ ಪೋಸ್ಟ್; OBC ವ್ಯಕ್ತಿಗೆ ಅದೇ ಬ್ರಾಹ್ಮಣನ ಪಾದ ತೊಳೆದು ನೀರು ಕುಡಿಯುವ ಶಿಕ್ಷೆ!

ಗುಜರಾತ್‌ನಲ್ಲಿ ಎಎಪಿ ರೈತರ ರ್ಯಾಲಿಯಲ್ಲಿ ಹಿಂಸಾಚಾರ; ಕಲ್ಲು ತೂರಿದ ರೈತರು, 3 ಪೊಲೀಸರಿಗೆ ಗಾಯ

SCROLL FOR NEXT