ನರೇಂದ್ರ ಮೋದಿ- ಸಿಎನ್ ಆರ್ ರಾವ್ 
ಪ್ರಧಾನ ಸುದ್ದಿ

ಮೋದಿ ದೂರದೃಷ್ಟಿಯುಳ್ಳ ನಾಯಕ, ಅವರು ಹೇಳುವ ವಿಚಾರಗಳು ಸರಿ ಇವೆ: ವಿಜ್ಞಾನಿ ಪ್ರೊ.ಸಿಎನ್ಆರ್ ರಾವ್

ರಾಜಕಾರಣಿಗಳನ್ನು ಈಡಿಯೆಟ್ಸ್ ಎಂದಿದ್ದ ಭಾರತ ರತ್ನ ಪ್ರಶಸ್ತಿ ಪುರಸ್ಕೃತ ವಿಜ್ಞಾನಿ ಸಿಎನ್ ಆರ್ ರಾವ್, ಈಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ದೂರದೃಷ್ಟಿಯುಳ್ಳ ನಾಯಕ ಎಂದು ಬಣ್ಣಿಸಿದ್ದಾರೆ.

ಬೆಂಗಳೂರು: ವೈಜ್ಞಾನಿಕ ಸಂಶೋಧನೆಗಳಿಗೆ ಸರ್ಕಾರ ಕಡಿಮೆ ಸಂಪನ್ಮೂಲಗಳನ್ನು ಮೀಸಲಿಡುತ್ತಿದೆ ಎಂಬ ಕಾರಣಕ್ಕೆ ರಾಜಕಾರಣಿಗಳನ್ನು ಈಡಿಯೆಟ್ಸ್ ಎಂದಿದ್ದ ಭಾರತ ರತ್ನ ಪ್ರಶಸ್ತಿ ಪುರಸ್ಕೃತ ವಿಜ್ಞಾನಿ ಸಿಎನ್ ಆರ್ ರಾವ್, ಈಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ದೂರದೃಷ್ಟಿಯುಳ್ಳ ನಾಯಕ ಎಂದು ಬಣ್ಣಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ಕನಸುಗಳನ್ನು ನನಸಾಗಿಸಲು ಸೂಕ್ತ ವೈಜ್ಞಾನಿಕ ಸಲಹೆ ಅಗತ್ಯವಿದೆ ಎಂದಿದ್ದು, ಮಿಷನ್ ಮೋಡ್ ಯೋಜನೆಗಳನ್ನು ಪ್ರಾರಂಭಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿರುವ ಪ್ರೊ.ಸಿಎನ್ಆರ್ ರಾವ್,  ಪ್ರಧಾನಿ ಮೋದಿ ಅವರ ನೀತಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಅವರು ದೂರದೃಷ್ಟಿಯುಳ್ಳ ನಾಯಕ, ಒಳಿತನ್ನು ಮಾಡಲು ಬಯಸುತ್ತಿರುವ ನಾಯಕ ಎಂಬುದರಲ್ಲಿ ಸಂಶಯವಿಲ್ಲ, ಅವರು ಹೇಳುವ ವಿಷಯಗಳಲ್ಲಿ ಯಾವುದೇ ತಪ್ಪಿಲ್ಲ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಅವರು ಉತ್ತಮ ಸಲಹೆಗಳನ್ನು ಸ್ವೀಕರಿಸುತ್ತಾರೆ. ವಿಜ್ಞಾನ ಅಥವಾ ಸಮಾಜಕ್ಕೆ ಸಂಬಂಧಿಸಿದಂತೆ ಹಲವು ಸಮಸ್ಯೆಗಳನ್ನು ಒಬ್ಬ ವ್ಯಕ್ತಿಯಾಗಲಿ  ಅಥವಾ ಒಂದೇ ಇಲಾಖೆಯಾಗಲಿ ನಿರ್ವಹಿಸುವುದು ಕಷ್ಟ ಸಾಧ್ಯ. ವಿಜ್ಞಾನವನ್ನು ಬಳಸಿಕೊಂಡು ಒಂದೆಡೆ ವಿಶ್ವದ ಅನೇಕ ದೇಶಗಳಿಗೆ ಪೈಪೋಟಿ ನೀಡಬೇಕಾದರೆ ಮತ್ತೊಂದೆಡೆ ಬಡತನದಂತಹ ಸಮಸ್ಯೆಗಳನ್ನು ನಿರ್ಮೂಲನೆ ಮಾಡಲು ಯತ್ನಿಸಬೇಕು, ಅದಕ್ಕಾಗಿ ಪ್ರಧಾನಿ ಮೋದಿ ಅವರಿಗೆ ಸೂಕ್ತ ಸಲಹೆಯ ಅಗತ್ಯವಿದೆ ಎಂದು ಸಿಎನ್ ಆರ್ ರಾವ್ ಹೇಳಿದ್ದಾರೆ.    
ಪ್ರಧಾನಿ ಮೋದಿ ಅವರು ಸೂಕ್ತ ಸಲಹೆ ಪಡೆದು ಉತ್ತಮ ಫಲಿತಾಂಶ ನೀಡುವ ಕೆಲಸಗಳನ್ನು  ಮಾಡಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಸಿಎನ್ ಆರ್ ರಾವ್ ಅಭಿಪ್ರಾಯಪಟ್ಟಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT