ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಎಐಡಿಎಂಕೆ ಸಭಾ ಪ್ರದೇಶದಿಂದ ನಾಲ್ಕು ಬಾಂಬ್ ಗಳ ವಶ

ತಮಿಳುನಾಡಿನ ಆಡಳಿತ ಪಕ್ಷ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ ಆಯೋಜಿಸಿದ್ದ ಸಭೆಯ ಪ್ರದೇಶದಲ್ಲಿ ಎರಡು ನಾಡ ಬಾಂಬ್ ಗಳು ಮತ್ತೆರಡು ಪೆಟ್ರೋಲ್

ಮಧುರೈ: ತಮಿಳುನಾಡಿನ ಆಡಳಿತ ಪಕ್ಷ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ ಆಯೋಜಿಸಿದ್ದ ಸಭೆಯ ಪ್ರದೇಶದಲ್ಲಿ ಎರಡು ನಾಡ ಬಾಂಬ್ ಗಳು ಮತ್ತೆರಡು ಪೆಟ್ರೋಲ್ ಬಾಂಬ್ ಗಳನ್ನು ಪತ್ತೆ ಹಚ್ಚಿ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಜೈಹಿಂದ್ ಪುರಂ ನಲ್ಲಿ ನೆನ್ನೆ ರಾತ್ರಿ ಸಭೆ ಪ್ರಾರಂಭಕ್ಕೆ ಮುಂಚಿತವಾಗಿಯೇ ಎರಡು ಬಾಂಬ್ ಗಳನ್ನು ಪತ್ತೆ ಮಾಡಲಾಗಿದ್ದರೆ ಕಾರ್ಯಕ್ರಮದ ನಂತರ ಇನ್ನೆರಡು ಬಾಂಬ್ ಗಳನ್ನು ಪತ್ತೆ ಹಚ್ಚಲಾಗಿದೆ.  ಆದರೆ ಯಾವುದೂ ಸ್ಫೋಟಗೊಂಡಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಭಾನುವಾರವಷ್ಟೇ ಎಐಡಿಎಂಕೆ ಮತ್ತು ತಮಿಳು ನಾಡು ಸಚಿವ ಸೆಲ್ಲುರು ಕೆ ರಾಜು ಅವರ ಕಛೇರಿಗಳ ಮೇಕೆ ಎರಡು ಪ್ರತ್ಯೇಕ ಘಟನೆಗಳಲ್ಲಿ ನಾಡ ಬಾಂಬ್ ಗಳನ್ನು ಎಸೆಯಲಾಗಿತ್ತು. ಈ ಘಟನೆಗಳಲ್ಲಿ ಯಾರೂ ಗಾಯಗೊಂಡಿರಲಿಲ್ಲ.

ಮಧುರೈ ಪಶ್ಚಿಮ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ನೆನ್ನೆಯ ಸಭೆಯನ್ನು ಕೂಡ ಆಯೋಜಿಸಿದ್ದ ರಾಜು ಅವರು ಈ ಕೃತ್ಯಗಳಿಗೆ ರಾಜಕೀಯ ವಿರೋಧಿಗಳ ಮೇಲೆ ಆರೋಪ ಹೊರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

SCROLL FOR NEXT