ಬೆಂಗಳೂರು ಬಾಂಬ್ ಸ್ಫೋಟದ ಶಂಕಿತ ವ್ಯಕ್ತಿ 
ಪ್ರಧಾನ ಸುದ್ದಿ

ಬೆಂಗಳೂರು ಬಾಂಬ್ ಸ್ಫೋಟ ಸುಳಿವು ಇನ್ನೂ ಇಲ್ಲ; ಶಂಕಿತನನ್ನು ಗುರುತಿಸಿದವರಿಗೆ 5 ಲಕ್ಷ ಇನಾಮು

ಡಿಸೆಂಬರ್ ೨೮, ೨೦೧೪ ರಲ್ಲಿ ನಡೆದ ಬೆಂಗಳೂರಿನ ಚರ್ಚ್ ಸ್ಟ್ರೀಟ್ ಬಾಂಬ್ ಸ್ಫೋಟದ ಸುಳಿವು ಪತ್ತೆ ಹಚ್ಚುವಲ್ಲಿ ಪೊಲೀಸರು ಇನ್ನೂ ಯಶಸ್ವಿಯಾಗಿಲ್ಲ.

ಬೆಂಗಳೂರು: ಡಿಸೆಂಬರ್ ೨೮, ೨೦೧೪ ರಲ್ಲಿ ನಡೆದ ಬೆಂಗಳೂರಿನ ಚರ್ಚ್ ಸ್ಟ್ರೀಟ್ ಬಾಂಬ್ ಸ್ಫೋಟದ ಸುಳಿವು ಪತ್ತೆ ಹಚ್ಚುವಲ್ಲಿ ಪೊಲೀಸರು ಇನ್ನೂ ಯಶಸ್ವಿಯಾಗಿಲ್ಲ. ಈ ಲಘು ಬಾಂಬ್ ಸ್ಫೋಟದಿಂದ ಒಬ್ಬ ಮೃತಪಟ್ಟು ಮೂರು ಜನರಿಗೆ ಗಾಯವಾಗಿತ್ತು. ಬೆಂಗಳೂರಿನ ಪೊಲೀಸರು ಮೊದಲಿಗೆ ತನಿಖೆ ನಡೆಸಿದರಾದರೂ ಇದನ್ನು ಬಗೆ ಹರಿಸುವುದಕ್ಕೆ ವಿಫಲರಾಗಿ ರಾಷ್ಟ್ರೀಯ ತನಿಖಾ ದಳಕ್ಕೆ (ಎನ್ ಐ ಎ) ಈ ಪ್ರಕರಣ ವಹಿಸಿಕೊಟ್ಟಿತ್ತು.

ಈಗ ಎನ್ ಐ ಎ, ಸ್ಫೋತಗೊಂಡ ದಿನ ರಾತ್ರಿ ೭ ಘಂಟೆಗೆ ತೆಗೆಯಗಾಗಿರುವ ಸಿಸಿಟಿವಿ ದೃಶ್ಯಾವಳಿಯನ್ನು ಬಿಡುಗಡೆ ಮಾಡಿದ್ದು, ಬಾಂಬ್ ಇಟ್ಟಿದ್ದಾನೆ ಎಂದು ಶಂಕಿಸಲಾಗಿರುವ ವ್ಯಕ್ತಿಯ ಗುರುತು ನೀಡಿದರೆ ಐದು ಲಕ್ಷ ಬಹುಮಾನ ನೀಡುವುದಾಗಿ ತಿಳಿಸಿದೆ.

ಬೇಸ್ ಬಾಲ್ ಟೋಪಿ ಹಾಕಿಕೊಂಡು ಪ್ಲಾಸ್ಟಿಕ್ ಚೀಲ ಹಿಡಿದ ಈ ವ್ಯಕ್ತ್ಯಿ ಬಾಂಬ್ ಇಟ್ಟಿದ್ದಾನೆ ಎಂದು ಶಂಕಿಸಲಾಗಿದೆ. ಈ ವ್ಯಕ್ತಿ ಈ ಸ್ಥಳಕ್ಕೆ ಇದಕ್ಕೂ ಮೊದಲು ಮೂರೂ ಬಾರಿಗೆ ಬಂದಿದ್ದ ಎನ್ನಲಾಗಿದೆ.

ಇದಕ್ಕೂ ಮೊದಲು ತನಿಖಾಧಿಕಾರಿಗಳು ನಿಷೇಧಿತ ಸಂಘಟನೆ ಸಿಮಿ ಈ ಕೃತ್ಯ ನಡೆಸಿರಬಹುದು ಎಂದು ಶಂಕಿಸಿದ್ದರು. ಆದರೆ ಯಾವುದೇ ಖಚಿತ ಸಾಕ್ಷ್ಯಗಳು ಸಿಗದೆ ಈ ಸ್ಫೋಟದ ಹಿಂದಿನ ಕಾರಣ ಏನಿರಬಹುದು ಎಂದು ತನಿಖೆ ನಡೆಸಲು ಸಾಧ್ಯವಾಗಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT