ಅರವಿಂದ್ ಕೇಜ್ರಿವಾಲ್ 
ಪ್ರಧಾನ ಸುದ್ದಿ

ಕೇಜ್ರಿವಾಲ್ ಮೇಲೆ ಮಸಿ ದಾಳಿ: ಭದ್ರತಾ ಪೊಲೀಸ್‌ರನ್ನು ವೇದಿಕೆಯಿಂದ ಕೆಳಗಿಳಿಸಿದ್ದೇಕೆ?

ಜನವರಿ 17 ರಂದು ಛಟ್ರಾಸಲ್ ನಲ್ಲಿ ಕೇಜ್ರಿವಾಲ್ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಿರುವಾಗ ಅವರ ರಕ್ಷಣೆಗಾಗಿ ನಿಯೋಜಿಸಿದ್ದ ಪೊಲೀಸ್ ಅಧಿಕಾರಿಯನ್ನು...

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮೇಲೆ ಮಸಿ ಎರಚಿದ ಪ್ರಕರಣದಲ್ಲೀಗ ಹೊಸ ತಿರುವುಗಳು ಕಾಣಿಸಿಕೊಂಡಿವೆ. ಆದಾಗ್ಯೂ, ಸಿಎಂ ಕೇಜ್ರಿವಾಲ್ ಅವರಿಗೆ ಸರಿಯಾದ ಭದ್ರತೆ ನೀಡಿಲ್ಲ ಎಂಬ ಆರೋಪವನ್ನು ದೆಹಲಿ ಪೊಲೀಸರು ತಳ್ಳಿ ಹಾಕಿದ್ದಾರೆ.
ಸುದ್ದಿ ಮಾಧ್ಯಮವೊಂದರ ಪ್ರಕಾರ, ಜನವರಿ 17 ರಂದು ಛಟ್ರಾಸಲ್ ನಲ್ಲಿ ಕೇಜ್ರಿವಾಲ್ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಿರುವಾಗ ಅವರ ರಕ್ಷಣೆಗಾಗಿ ನಿಯೋಜಿಸಿದ್ದ ಪೊಲೀಸ್ ಅಧಿಕಾರಿಯನ್ನು ವೇದಿಕೆಯಿಂದ ಕೆಳಗಿಳಿಯುವಂತೆ ಹೇಳಲಾಗಿದೆ.
ಈ ಬಗ್ಗೆ ಪೊಲೀಸ್ ಅಧಿಕಾರಿಯನ್ನು ಕೇಳಿದಾಗ ಸಿಎಂ ಅವರ ಪಿಎ ಅವರು ಯುನಿಫಾರ್ಮ್ ಧರಿಸಿರುವ ಯಾರೊಬ್ಬರೂ ವೇದಿಕೆಯ ಮೇಲೆ ಬೇಡ. ಎಲ್ಲರೂ ಕೆಳಗಿಳಿಯಿರಿ ಎಂದು ಆದೇಶಿಸಿ ವೇದಿಕೆಯಿಂದ ಕೆಳಗಿಳಿಸಿದ್ದರು ಎಂದು ಹೇಳಿದ್ದಾರೆ.
ಇಂಥಾ ಅನುಭವಗಳು ಇದೇ ಮೊದಲೇನಲ್ಲ. ಹಲವಾರು ಕಾರ್ಯಕ್ರಮಗಳಲ್ಲಿ ಕೇಜ್ರಿವಾಲ್ ರಕ್ಷಣೆಗೆ ನಿಂತಿದ್ದ ಪೊಲೀಸರನ್ನು ವೇದಿಕೆಯನ್ನೇರಲು ಬಿಡಲೇ ಇಲ್ಲ. ಅಷ್ಟೇ ಅಲ್ಲದೆ ಕೇಜ್ರಿವಾಲ್ ಅವರು ಭದ್ರತಾ ಅಧಿಕಾರಿಗಳಿಲ್ಲದೆ, ಲಾಗ್ ಬುಕ್ ನಲ್ಲಿ ಎಲ್ಲಿಗೆ ಹೋಗುತ್ತಿದ್ದೇನೆ ಎಂಬುದನ್ನು ದಾಖಲಿಸದೆ ಹೊರಗೆ ಹೋಗಿದ್ದೂ ಉಂಟು ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT