ಅರವಿಂದ್ ಕೇಜ್ರಿವಾಲ್ 
ಪ್ರಧಾನ ಸುದ್ದಿ

ಕೇಜ್ರಿವಾಲ್ ಮೇಲೆ ಮಸಿ ದಾಳಿ: ಭದ್ರತಾ ಪೊಲೀಸ್‌ರನ್ನು ವೇದಿಕೆಯಿಂದ ಕೆಳಗಿಳಿಸಿದ್ದೇಕೆ?

ಜನವರಿ 17 ರಂದು ಛಟ್ರಾಸಲ್ ನಲ್ಲಿ ಕೇಜ್ರಿವಾಲ್ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಿರುವಾಗ ಅವರ ರಕ್ಷಣೆಗಾಗಿ ನಿಯೋಜಿಸಿದ್ದ ಪೊಲೀಸ್ ಅಧಿಕಾರಿಯನ್ನು...

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮೇಲೆ ಮಸಿ ಎರಚಿದ ಪ್ರಕರಣದಲ್ಲೀಗ ಹೊಸ ತಿರುವುಗಳು ಕಾಣಿಸಿಕೊಂಡಿವೆ. ಆದಾಗ್ಯೂ, ಸಿಎಂ ಕೇಜ್ರಿವಾಲ್ ಅವರಿಗೆ ಸರಿಯಾದ ಭದ್ರತೆ ನೀಡಿಲ್ಲ ಎಂಬ ಆರೋಪವನ್ನು ದೆಹಲಿ ಪೊಲೀಸರು ತಳ್ಳಿ ಹಾಕಿದ್ದಾರೆ.
ಸುದ್ದಿ ಮಾಧ್ಯಮವೊಂದರ ಪ್ರಕಾರ, ಜನವರಿ 17 ರಂದು ಛಟ್ರಾಸಲ್ ನಲ್ಲಿ ಕೇಜ್ರಿವಾಲ್ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಿರುವಾಗ ಅವರ ರಕ್ಷಣೆಗಾಗಿ ನಿಯೋಜಿಸಿದ್ದ ಪೊಲೀಸ್ ಅಧಿಕಾರಿಯನ್ನು ವೇದಿಕೆಯಿಂದ ಕೆಳಗಿಳಿಯುವಂತೆ ಹೇಳಲಾಗಿದೆ.
ಈ ಬಗ್ಗೆ ಪೊಲೀಸ್ ಅಧಿಕಾರಿಯನ್ನು ಕೇಳಿದಾಗ ಸಿಎಂ ಅವರ ಪಿಎ ಅವರು ಯುನಿಫಾರ್ಮ್ ಧರಿಸಿರುವ ಯಾರೊಬ್ಬರೂ ವೇದಿಕೆಯ ಮೇಲೆ ಬೇಡ. ಎಲ್ಲರೂ ಕೆಳಗಿಳಿಯಿರಿ ಎಂದು ಆದೇಶಿಸಿ ವೇದಿಕೆಯಿಂದ ಕೆಳಗಿಳಿಸಿದ್ದರು ಎಂದು ಹೇಳಿದ್ದಾರೆ.
ಇಂಥಾ ಅನುಭವಗಳು ಇದೇ ಮೊದಲೇನಲ್ಲ. ಹಲವಾರು ಕಾರ್ಯಕ್ರಮಗಳಲ್ಲಿ ಕೇಜ್ರಿವಾಲ್ ರಕ್ಷಣೆಗೆ ನಿಂತಿದ್ದ ಪೊಲೀಸರನ್ನು ವೇದಿಕೆಯನ್ನೇರಲು ಬಿಡಲೇ ಇಲ್ಲ. ಅಷ್ಟೇ ಅಲ್ಲದೆ ಕೇಜ್ರಿವಾಲ್ ಅವರು ಭದ್ರತಾ ಅಧಿಕಾರಿಗಳಿಲ್ಲದೆ, ಲಾಗ್ ಬುಕ್ ನಲ್ಲಿ ಎಲ್ಲಿಗೆ ಹೋಗುತ್ತಿದ್ದೇನೆ ಎಂಬುದನ್ನು ದಾಖಲಿಸದೆ ಹೊರಗೆ ಹೋಗಿದ್ದೂ ಉಂಟು ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!