ಬಿಜೆಪಿ ಅಧ್ಯಕ್ಷ ಅಮಿತ್ ಷಾ 
ಪ್ರಧಾನ ಸುದ್ದಿ

೨೦೧೪ ಪ್ರಚೋದನಾಕಾರಿ ಭಾಷಣ ಪ್ರಕರಣದಿಂದ ಅಮಿತ್ ಷಾಗೆ ಕ್ಲೀನ್ ಚಿಟ್

ಏಪ್ರಿಲ್ ೨೦೧೪ ಲೋಕಸಭಾ ಚುನಾವಣಾ ಸಮಯದಲ್ಲಿ ಮುಜಫರ್ ನಗರದಲ್ಲಿ ಅಮಿತ್ ಷಾ ಪ್ರಚೋದನಕಾರಿ ಭಾಷಣ ಮಾಡಿದ್ದ ಪ್ರಕರಣದಲ್ಲಿ ಉತ್ತರ ಪ್ರದೇಶ ಪೊಲೀಸರು

ಮುಜಫರ್ ನಗರ್: ಏಪ್ರಿಲ್ ೨೦೧೪ ಲೋಕಸಭಾ ಚುನಾವಣಾ ಸಮಯದಲ್ಲಿ ಮುಜಫರ್ ನಗರದಲ್ಲಿ ಅಮಿತ್ ಷಾ ಪ್ರಚೋದನಕಾರಿ ಭಾಷಣ ಮಾಡಿದ್ದ ಪ್ರಕರಣದಲ್ಲಿ ಉತ್ತರ ಪ್ರದೇಶ ಪೊಲೀಸರು ಬಿಜೆಪಿ ಅಧ್ಯಕ್ಷ ಆರೋಪ ಮುಕ್ತ ಎಂದು ಕ್ಲೀನ್ ಚಿಟ್ ನೀಡಿದ್ದಾರೆ.

ಪ್ರಾದೇಶಿಕ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿರುವ ಪೊಲೀಸರು "ಅವರ (ಅಮಿತ್ ಷಾ) ವಿರುದ್ಧ ಈ ಪ್ರಕರಣದಲ್ಲಿ ಯಾವುದೇ ಸಾಕ್ಷ್ಯಗಳಿಲ್ಲ" ಎಂದು ತಿಳಿಸಿದ್ದಾರೆ.

ಈಗ ಈ ಅಂತಿಮ ವರದಿ ಮೆಜೆಸ್ಟ್ರೆಟ್ ಎದುರು ಬಂದಿದ್ದು ಅವರು ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ.

ಏಪ್ರಿಲ್ ೨೦೧೪ ಲೋಕಸಭಾ ಚುನಾವಣಾ ಸಮಯದಲ್ಲಿ  ಮುಜಫರ್ ನಗರದ ಬರ್ವಾರ್ ಗ್ರಾಮದಲ್ಲಿ ಪ್ರಚೋದನಕಾರಿ ಬಾಷಣ ಮಾಡಿದ್ದರು ಎಂದು ಆರೋಪಿಸಿ, ಕಕೋರ್ಲಿ ಪೊಲೀಸ್ ಠಾಣೆಯಲ್ಲಿ ಉತ್ತರ ಪ್ರದೇಶ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದರು. ಆ ಭಾಷಣದಲ್ಲಿ ಷಾ "ಮೋದಿ ಗೆದ್ದರೆ. 'ಮುಲ್ಲಾ' ಮುಲಾಯಂ ಸರ್ಕಾರ ಪತನವಾಗುತ್ತದೆ" ಎಂದಿದ್ದರು ಎಂದು ಆರೋಪಿಸಲಾಗಿತ್ತು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT