ಬಿಜೆಪಿ ಅಧ್ಯಕ್ಷ ಅಮಿತ್ ಷಾ 
ಪ್ರಧಾನ ಸುದ್ದಿ

೨೦೧೪ ಪ್ರಚೋದನಾಕಾರಿ ಭಾಷಣ ಪ್ರಕರಣದಿಂದ ಅಮಿತ್ ಷಾಗೆ ಕ್ಲೀನ್ ಚಿಟ್

ಏಪ್ರಿಲ್ ೨೦೧೪ ಲೋಕಸಭಾ ಚುನಾವಣಾ ಸಮಯದಲ್ಲಿ ಮುಜಫರ್ ನಗರದಲ್ಲಿ ಅಮಿತ್ ಷಾ ಪ್ರಚೋದನಕಾರಿ ಭಾಷಣ ಮಾಡಿದ್ದ ಪ್ರಕರಣದಲ್ಲಿ ಉತ್ತರ ಪ್ರದೇಶ ಪೊಲೀಸರು

ಮುಜಫರ್ ನಗರ್: ಏಪ್ರಿಲ್ ೨೦೧೪ ಲೋಕಸಭಾ ಚುನಾವಣಾ ಸಮಯದಲ್ಲಿ ಮುಜಫರ್ ನಗರದಲ್ಲಿ ಅಮಿತ್ ಷಾ ಪ್ರಚೋದನಕಾರಿ ಭಾಷಣ ಮಾಡಿದ್ದ ಪ್ರಕರಣದಲ್ಲಿ ಉತ್ತರ ಪ್ರದೇಶ ಪೊಲೀಸರು ಬಿಜೆಪಿ ಅಧ್ಯಕ್ಷ ಆರೋಪ ಮುಕ್ತ ಎಂದು ಕ್ಲೀನ್ ಚಿಟ್ ನೀಡಿದ್ದಾರೆ.

ಪ್ರಾದೇಶಿಕ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿರುವ ಪೊಲೀಸರು "ಅವರ (ಅಮಿತ್ ಷಾ) ವಿರುದ್ಧ ಈ ಪ್ರಕರಣದಲ್ಲಿ ಯಾವುದೇ ಸಾಕ್ಷ್ಯಗಳಿಲ್ಲ" ಎಂದು ತಿಳಿಸಿದ್ದಾರೆ.

ಈಗ ಈ ಅಂತಿಮ ವರದಿ ಮೆಜೆಸ್ಟ್ರೆಟ್ ಎದುರು ಬಂದಿದ್ದು ಅವರು ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ.

ಏಪ್ರಿಲ್ ೨೦೧೪ ಲೋಕಸಭಾ ಚುನಾವಣಾ ಸಮಯದಲ್ಲಿ  ಮುಜಫರ್ ನಗರದ ಬರ್ವಾರ್ ಗ್ರಾಮದಲ್ಲಿ ಪ್ರಚೋದನಕಾರಿ ಬಾಷಣ ಮಾಡಿದ್ದರು ಎಂದು ಆರೋಪಿಸಿ, ಕಕೋರ್ಲಿ ಪೊಲೀಸ್ ಠಾಣೆಯಲ್ಲಿ ಉತ್ತರ ಪ್ರದೇಶ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದರು. ಆ ಭಾಷಣದಲ್ಲಿ ಷಾ "ಮೋದಿ ಗೆದ್ದರೆ. 'ಮುಲ್ಲಾ' ಮುಲಾಯಂ ಸರ್ಕಾರ ಪತನವಾಗುತ್ತದೆ" ಎಂದಿದ್ದರು ಎಂದು ಆರೋಪಿಸಲಾಗಿತ್ತು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT