ಪ್ರತಿಭಟನಾನಿರತ ವಿದ್ಯಾರ್ಥಿಗಳು 
ಪ್ರಧಾನ ಸುದ್ದಿ

ರೋಹಿತ ಆತ್ಮಹತ್ಯೆ ಕೇಸ್: 4 ದಲಿತ ವಿದ್ಯಾರ್ಥಿಗಳ ಅಮಾನತು ಆದೇಶ ಹಿಂಪಡೆದ ಹೈದರಾಬಾದ್ ವಿವಿ

ಆತ್ಮಹತ್ಯೆ ಮಾಡಿಕೊಂಡ ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ಜೊತೆ ಅಮಾನತುಗೊಂಡಿದ್ದ...

ಹೈದರಾಬಾದ್: ಆತ್ಮಹತ್ಯೆ ಮಾಡಿಕೊಂಡ ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ಜೊತೆ ಅಮಾನತುಗೊಂಡಿದ್ದ ನಾಲ್ವರು ದಲಿತ ಸಂಶೋಧನಾ ವಿದ್ಯಾರ್ಥಿಗಳ ಅಮಾನತು ಆದೇಶವನ್ನು ಗುರುವಾರ ವಿವಿ ಹಿಂಪಡೆದಿದೆ. 
ಸೊಂಥಾ ಪ್ರಶಾಂತ್, ಪೆಪಾಪುಡಿ ವಿಜಯಕುಮಾರ್, ಶೇಷಯ್ಯ ಚೆಮುಡುಗುಂಟ ಮತ್ತು ವೆಲ್​ಪುಲ ಸುಂಕಣ್ಣ ಈ ನಾಲ್ವರು ವಿದ್ಯಾರ್ಥಿಗಳಿಗೆ ತರಗತಿಗಳಿಗೆ ಹಾಜರಾಗಲು ಅವಕಾಶ ನೀಡಿದ್ದರೂ, ವಸತಿಗೃಹ, ಗ್ರಂಥಾಲಯ, ಭೋಜನಾಲಯ ಮತ್ತು ವಿಶ್ವ ವಿದ್ಯಾಲಯದ ಇತರ ಸಾಮಾನ್ಯ ಪ್ರದೇಶಗಳಿಗೆ ಪ್ರವೇಶ ನಿರಾಕರಿಸಿ ವಿಶ್ವವಿದ್ಯಾಲಯ ಕಳೆದ ಡಿಸೆಂಬರ್​ನಲ್ಲಿ ಆದೇಶ ಹೊರಡಿಸಿತ್ತು. ಅಂಬೇಡ್ಕರ್ ಸ್ಟೂಡೆಂಟ್ಸ್ ಅಸೋಸಿಯೇಶನ್​ಗೆ ಸೇರಿದ ಈ ನಾಲ್ವರು ಪಿಎಚ್​ಡಿ ವಿದ್ಯಾರ್ಥಿಗಳು ತನ್ನ ಮೇಲೆ ಹಲ್ಲೆ ನಡೆಸಿರುವುದಾಗಿ ಎಬಿವಿಪಿ ವಿದ್ಯಾರ್ಥಿ ನಾಯಕ ಸುಶೀಲ್ ಕುಮಾರ್ ದೂರು ನೀಡಿದ್ದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿತ್ತು.
ವೇಮುಲಾ ಪ್ರಕರಣದಲ್ಲಿ ತಪ್ಪು ಹೇಳಿಕೆ ನೀಡಿದ್ದಕ್ಕಾಗಿ ಇಡೀ ರಾಷ್ಟ್ರದ ಕ್ಷಮೆ ಕೇಳುವಂತೆ ಕೇಂದ್ರ ಮಾನವ ಸಂಪನ್ಮೂಲ ಇಲಾಖಾ ಸಚಿವೆ ಸ್ಮೃತಿ ಇರಾನಿ ಅವರನ್ನು ಆಗ್ರಹಿಸಿ, ವಿಶ್ವ ವಿದ್ಯಾಲಯ ಆವರಣಕ್ಕೆ ಭೇಟಿ ನೀಡಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಪ್ರಕಟಣೆ ಬಿಡುಗಡೆ ಮಾಡಿದ ಬೆನ್ನಲ್ಲೇ ‘ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ವಿದ್ಯಾರ್ಥಿಗಳಿಗೆ ವಿಧಿಸಲಾದ ಶಿಕ್ಷೆ ರದ್ದು ಪಡಿಸಲು ಎಕ್ಸಿಕ್ಯೂಟಿವ್ ಕೌನ್ಸಿಲ್ ನಿರ್ಧರಿಸಿದೆ ಎಂದು ಕೌನ್ಸಿಲ್ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT