ರೋಹಿತ್ ವೇಮುಲಾ 
ಪ್ರಧಾನ ಸುದ್ದಿ

ರೋಹಿತ್ ವೇಮುಲಾ ಆತ್ಮಹತ್ಯೆ ಪತ್ರ ವಿಧಿವಿಜ್ಞಾನ ಪರೀಕ್ಷೆಗೆ ರವಾನೆ

ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ಅವರು...

ಹೈದರಾಬಾದ್: ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ಅವರು ಆತ್ಮಹತ್ಯೆಗೂ ಮುನ್ನ ಬರೆದಿಟ್ಟ ಪತ್ರವನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ರೋಹಿತ್ ಆತ್ಮಹತ್ಯೆ ಪ್ರಕರಣ ತೀವ್ರ ಕೋಲಾಹಲ ಉಂಟು ಮಾಡಿರುವುದರ ನಡುವೆಯೇ ಅವರು ಬರೆದಿಟ್ಟಿರುವ ಡೆತ್ ನೋಟ್ ನಲ್ಲಿ ಒಂದು ಪೂರ್ತಿ ಪ್ಯಾರಾವನ್ನು ಹೊಡೆದುಹಾಕಿರುವುದು ಕಂಡು ಬಂದಿದ್ದು, ಈ ಕೆಲಸವನ್ನು ಮಾಡಿದವರು ಯಾರು ಎಂದು ತಜ್ಞರು ಇದೀಗ ತನಿಖೆ ಆರಂಭಿಸಿದ್ದಾರೆ. ತನಿಖೆಯ ಭಾಗವಾಗಿ ಡೆತ್ ನೋಟ್ ಅನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ.
ರೋಹಿತ್ ನೇಣುಹಾಕಿಕೊಂಡಿದ್ದ ಹೈದರಾಬಾದ್ ಸೆಂಟ್ರಲ್ ವಿಶ್ವವಿದ್ಯಾಲಯದ ವಸತಿ ನಿಲಯದ ಕೊಠಡಿಯಿಂದ ಈ ಪತ್ರವನ್ನು ವಶಪಡಿಸಿಕೊಳ್ಳಲಾಗಿದ್ದು, ಇದೀಗ ಅದನ್ನು ವಿಧಿವಿಜ್ಞಾನ ವಿಶ್ಲೇಷಣೆಗೆ ಕಳುಹಿಸಲಾಗಿದೆ.
ಹೊಡೆದು ಹಾಕಲಾಗಿರುವ ಪ್ಯಾರಾದ ಕೆಳಭಾಗದಲ್ಲಿ ‘ನಾನೇ ಈ ಪದಗಳನ್ನು ಹೊಡೆದುಹಾಕಿದ್ದೇನೆ’ ಎಂಬುದಾಗಿ ಬರೆಯಲಾಗಿದ್ದು ಕೆಳಗೆ ರೋಹಿತ್ ಸಹಿ ಕಾಣುತ್ತಿರುವುದರಿಂದ ರೋಹಿತ್ ಅವರೇ ಈ ಪ್ಯಾರಾವನ್ನು ಹೊಡೆದುಹಾಕಿರುವ ಸಾಧ್ಯತೆ ಇದೆ. ಆದರೆ ಹೊಡೆದು ಹಾಕಿದ್ದೇಕೆ, ಅದರಲ್ಲಿ ಏನು ಬರೆಯಲಾಗಿತ್ತು ಎಂಬುದು ನಿಗೂಢವಾಗಿದೆ. ತಮ್ಮದೇ ಸಂಘಟನೆಯಾದ ಅಂಬೇಡ್ಕರ್ ಸ್ಟೂಡೆಂಟ್ಸ್ ಅಸೋಸಿಯೇಶನ್ ಬಗ್ಗೆ ರೋಹಿತ್​ಗೆ ಭ್ರಮನಿರಸನವಾಗಿದ್ದ ಬಗ್ಗೆ ಈ ಪ್ಯಾರಾದಲ್ಲಿ ಇದ್ದಿರಬಹುದು ಎಂಬ ಊಹಾಪೋಹಗಳು ಹರಡಿವೆ. ಏನಿದ್ದರೂ ವಿಧಿವಿಜ್ಞಾನ ಪ್ರಯೋಗಾಲಯದಿಂದ ವರದಿ ಬರಲು ಕೆಲವು ದಿನಗಳು ಬೇಕಾಗಬಹುದು, ಬಂದ ಬಳಿಕವಷ್ಟೇ ಈ ನಿಗೂಢ ಒಡೆಯಬಹುದು ಎಂದು ವರದಿಗಳು ಹೇಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಸಂಪುಟ ಸಲಹೆ ಮೇರೆಗೆ KPSC ಅಧ್ಯಕ್ಷ ಸಾಹುಕಾರ್ ರನ್ನು ಮತ್ತೆ ಅಮಾನತು ಮಾಡಿದ ರಾಜ್ಯಪಾಲ ಗೆಹ್ಲೋಟ್!

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!

ಕನಸು ಕೊನೆಗೂ ನನಸು: ಲಿಂಗ ಬದಲಿಸಿಕೊಂಡಿದ್ದ Anaya Bangarಗೆ ಕ್ರಿಕೆಟ್‌ಗೆ ಮರಳಲು ಗ್ರೀನ್ ಸಿಗ್ನಲ್!

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!