ಪ್ರಧಾನಿ ನರೇಂದ್ರ ಮೋದಿ 
ಪ್ರಧಾನ ಸುದ್ದಿ

ಭಾರತೀಯರ ಪಾಲಿಗೆ ಇದು ಮಹತ್ವದ ದಿನ: ಮೋದಿ

ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 119ನೇ ಜನ್ಮದಿನಾಚರಣೆಯ ವೇಳೆ ಬೋಸ್‌ಗೆ ಸಂಬಂಧಪಟ್ಟ ಮಹತ್ವದ...

ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 119ನೇ ಜನ್ಮದಿನಾಚರಣೆಯ ವೇಳೆ ಬೋಸ್‌ಗೆ ಸಂಬಂಧಪಟ್ಟ ಮಹತ್ವದ ದಾಖಲೆಗಳನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಬಿಡುಗಡೆ ಮಾಡಿದ್ದಾರೆ.
ನೇತಾಜಿ ದಾಖಲೆಗಳ ಡಿಜಿಟಲ್ ಪ್ರತಿ ಬಿಡುಗಡೆ ಮಾಡಿದ ಮೋದಿ. ಇಂದು ಎಲ್ಲ ಭಾರತೀಯರ ಪಾಲಿಗೆ ವಿಶೇಷವಾದ ದಿನ. ಇಂದಿನಿಂದ ನೇತಾಜಿಗೆ ಸಂಬಂಧಪಟ್ಟ ದಾಖಲೆಗಳು ಅಂತರ್ಜಾಲದಲ್ಲಿ ಲಭ್ಯವಾಗಲಿದೆ ಎಂದು ಟ್ವೀಟ್ ಮಾಡಿದ್ದಾರೆ.
ದಶಕಗಳಿಂದ ನಿಗೂಢವಾಗಿ ಉಳಿದಿರುವ ಸ್ವಾತಂತ್ರ್ಯ ಹೋರಾಟಗಾರ ಸುಭಾಷ್‌ಚಂದ್ರ ಬೋಸ್ ಕಣ್ಮರೆ ರಹಸ್ಯ ಇದೀಗ ಮತ್ತೆ ಚರ್ಚೆಯ ಮುನ್ನೆಲೆಗೆ ಬಂದಿದ್ದು, ನೇತಾಜಿ ಜನ್ಮದಿನವಾದ  ಜ.23ರಂದು ಅವರಿಗೆ ಸಂಬಂಧಿಸಿದ ಕಡತ ಬಿಡುಗಡೆ ಮಾಡುವುದಾಗಿ ಕಳೆದ ವರ್ಷ ಅ.14ರಂದು ಬೋಸ್ ಕುಟುಂಬದ ಸದಸ್ಯರಿಗೆ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದರು. 

ಅದರಂತೆ  ಶನಿವಾರ ಸರ್ಕಾರ ಕಡತ ಬಿಡುಗಡೆ ಪ್ರಕ್ರಿಯೆಗೆ ಚಾಲನೆ ನೀಡಲಿದೆ ಎಂದು ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಮಹೇಶ್ ಶರ್ಮಾ ತಿಳಿಸಿದ್ದರು.

"ರಾಷ್ಟ್ರೀಯ ದಾಖಲೆಗಳ ಕೇಂದ್ರ (ಎನ್ಐಎ) ನೇತಾಜಿಯವರಿಗೆ ಸಂಬಂಧಿಸಿದ 100 ಕಡತಗಳನ್ನು ಸಾರ್ವಜನಿಕರಿಗೆ ಬಿಡುಗಡೆ ಮಾಡಲಿದೆ. ಡಿಜಿಟಲೀಕರಣ ಮತ್ತು ಇತರ ಕ್ರಮಗಳ ಬಳಿಕ  ಅದು ಎಲ್ಲರಿಗೂ ಲಭ್ಯವಾಗಲಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.

1945ರಲ್ಲಿ ತೈವಾನ್‌ನಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿಯೇ ನೇತಾಜಿ ಮೃತಪಟ್ಟಿದ್ದಾಗಿ ಇತ್ತೀಚಿಗಷ್ಟೇ ಬ್ರಿಟನ್ನಿನ ವೆಬ್‌ಸೈಟ್ ವೊಂದು ವರದಿ ಮಾಡಿತ್ತು. ಈ ಸಂಬಂಧ ಅದು  ದಾಖಲೆಯನ್ನೂ ಕೂಡ ಬಿಡುಗಡೆ ಮಾಡಿತ್ತು. ಈ ಬೆಳವಣಿಗೆ ನಡುವೆಯೇ ಶನಿವಾರ ಕೇಂದ್ರ ಸರ್ಕಾರ ದಾಖಲೆ ಬಿಡುಗಡೆ ಮಾಡುತ್ತಿರುವುದು ಕುತೂಹಲ ಕೆರಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT