ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ 
ಪ್ರಧಾನ ಸುದ್ದಿ

ಬರಪೀಡಿತ ಬುಂದೇಲ್ ಖಂಡ್ ನಲ್ಲಿ ಪಾದಯಾತ್ರೆ ಮಾಡಲಿರುವ ರಾಹುಲ್ ಗಾಂಧಿ

ಉತ್ತರಪ್ರದೇಶದ ಬರಪೀಡಿತ ಬುಂದೇಲ್ ಖಂಡ್ ಪ್ರದೇಶದಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪಾದಯಾತ್ರೆ ನಡೆಸಿ ಬರದಿಂದ ತೊಂದರೆಗೊಳಗಾದ ರೈತರನ್ನು

ನವದೆಹಲಿ: ಉತ್ತರಪ್ರದೇಶದ ಬರಪೀಡಿತ ಬುಂದೇಲ್ ಖಂಡ್ ಪ್ರದೇಶದಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪಾದಯಾತ್ರೆ ನಡೆಸಿ ಬರದಿಂದ ತೊಂದರೆಗೊಳಗಾದ ರೈತರನ್ನು ಭೇಟಿ ಮಾಡಲಿದ್ದಾರೆ.

"೨೩ ಜನವರಿ ಶನಿವಾರ ಈಗ ಬುಂದೇಲ್ ಖಂಡ್ ಗೆ ಭೇಟಿ ನೀಡುತ್ತಿದ್ದೇನೆ. ಮಹೋಬಾ ಜಿಲ್ಲೆಯಲ್ಲಿ ಕಿಸಾನ್ ಪಾದಯಾತ್ರೆ ನಡೆಸಿ ಬರಪೀಡಿತ ರೈತರನ್ನು ಮತ್ತು ಅವರ ಕುಟುಂಬದವರನ್ನು ಭೇಟಿ ಮಾಡಲಿದ್ದೇನೆ" ಎಂದು ಕಾಂಗ್ರೆಸ್ ಉಪಾಧ್ಯಕ್ಷ ಟ್ವೀಟ್ ಮಾಡಿದ್ದಾರೆ.

ರಸ್ತೆಯ ಮೂಲಕ ಬುಂದೇಲ್ ಖಂಡ್ ಪ್ರದೇಶದ ಮಹೋಬಾ ಜಿಲ್ಲೆಗೆ ಬರಲಿರುವ ರಾಹುಲ್ ೬ ಕಿಲೋ ಮೀಟರ್ ಗಳ ಪಾದಯಾತ್ರೆ ನಡೆಸಿ ಸೂಪಾ ಗ್ರಾಮದ ರೈತರನ್ನು ಭೇಟಿ ಮಾಡಲಿದ್ದಾರೆ.

ಸೂಪಾ ರೈಲ್ವೇ ನಿಲ್ದಾಣದ ಮಹಿಳಾ ಸ್ವಸಹಾಯ ಸಂಘದವರ ಜೊತೆ ಕೂಡ ಕಾಂಗ್ರೆಸ್ ಉಪಾಧ್ಯಕ್ಷ ಸಭೆ ನಡೆಸಲಿದ್ದಾರೆ.

೨೦೧೧ ರ ಜನಗಣತಿ ಪ್ರಕಾರ ೧೮.೩ ದಶಕಲಕ್ಷ ಜನ ವಾಸಿಸುವ ಬುಂದೇಲ್ ಖಂಡ್ ನಲ್ಲಿನ ಬರದಿಂದಾಗಿ ಹಲವಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರಿಗೆಲ್ಲ ಪರಿಹಾರ ನೀಡುವುದಾಗಿ ಉತ್ತರಪ್ರದೇಶ ಸರ್ಕಾರ ಘೋಷಿಸಿದ್ದರು, ಅದು ರೈತರಿಗಿನ್ನೂ ತಲುಪಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

Encounter: ಮಹಾರಾಷ್ಟ್ರ-ಛತ್ತೀಸ್‌ಗಢ ಗಡಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರ ಹತ್ಯೆ!

SCROLL FOR NEXT