ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ 
ಪ್ರಧಾನ ಸುದ್ದಿ

ಬರಪೀಡಿತ ಬುಂದೇಲ್ ಖಂಡ್ ನಲ್ಲಿ ಪಾದಯಾತ್ರೆ ಮಾಡಲಿರುವ ರಾಹುಲ್ ಗಾಂಧಿ

ಉತ್ತರಪ್ರದೇಶದ ಬರಪೀಡಿತ ಬುಂದೇಲ್ ಖಂಡ್ ಪ್ರದೇಶದಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪಾದಯಾತ್ರೆ ನಡೆಸಿ ಬರದಿಂದ ತೊಂದರೆಗೊಳಗಾದ ರೈತರನ್ನು

ನವದೆಹಲಿ: ಉತ್ತರಪ್ರದೇಶದ ಬರಪೀಡಿತ ಬುಂದೇಲ್ ಖಂಡ್ ಪ್ರದೇಶದಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪಾದಯಾತ್ರೆ ನಡೆಸಿ ಬರದಿಂದ ತೊಂದರೆಗೊಳಗಾದ ರೈತರನ್ನು ಭೇಟಿ ಮಾಡಲಿದ್ದಾರೆ.

"೨೩ ಜನವರಿ ಶನಿವಾರ ಈಗ ಬುಂದೇಲ್ ಖಂಡ್ ಗೆ ಭೇಟಿ ನೀಡುತ್ತಿದ್ದೇನೆ. ಮಹೋಬಾ ಜಿಲ್ಲೆಯಲ್ಲಿ ಕಿಸಾನ್ ಪಾದಯಾತ್ರೆ ನಡೆಸಿ ಬರಪೀಡಿತ ರೈತರನ್ನು ಮತ್ತು ಅವರ ಕುಟುಂಬದವರನ್ನು ಭೇಟಿ ಮಾಡಲಿದ್ದೇನೆ" ಎಂದು ಕಾಂಗ್ರೆಸ್ ಉಪಾಧ್ಯಕ್ಷ ಟ್ವೀಟ್ ಮಾಡಿದ್ದಾರೆ.

ರಸ್ತೆಯ ಮೂಲಕ ಬುಂದೇಲ್ ಖಂಡ್ ಪ್ರದೇಶದ ಮಹೋಬಾ ಜಿಲ್ಲೆಗೆ ಬರಲಿರುವ ರಾಹುಲ್ ೬ ಕಿಲೋ ಮೀಟರ್ ಗಳ ಪಾದಯಾತ್ರೆ ನಡೆಸಿ ಸೂಪಾ ಗ್ರಾಮದ ರೈತರನ್ನು ಭೇಟಿ ಮಾಡಲಿದ್ದಾರೆ.

ಸೂಪಾ ರೈಲ್ವೇ ನಿಲ್ದಾಣದ ಮಹಿಳಾ ಸ್ವಸಹಾಯ ಸಂಘದವರ ಜೊತೆ ಕೂಡ ಕಾಂಗ್ರೆಸ್ ಉಪಾಧ್ಯಕ್ಷ ಸಭೆ ನಡೆಸಲಿದ್ದಾರೆ.

೨೦೧೧ ರ ಜನಗಣತಿ ಪ್ರಕಾರ ೧೮.೩ ದಶಕಲಕ್ಷ ಜನ ವಾಸಿಸುವ ಬುಂದೇಲ್ ಖಂಡ್ ನಲ್ಲಿನ ಬರದಿಂದಾಗಿ ಹಲವಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರಿಗೆಲ್ಲ ಪರಿಹಾರ ನೀಡುವುದಾಗಿ ಉತ್ತರಪ್ರದೇಶ ಸರ್ಕಾರ ಘೋಷಿಸಿದ್ದರು, ಅದು ರೈತರಿಗಿನ್ನೂ ತಲುಪಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT