ಪ್ರಣಬ್ ಮುಖರ್ಜಿ 
ಪ್ರಧಾನ ಸುದ್ದಿ

ದೂರು, ಬೇಡಿಕೆ,ಪ್ರತಿಭಟನೆ ಮುಂದುವರಿಸೋಣ: ಪ್ರಣಬ್ ಮುಖರ್ಜಿ

ಭಯೋತ್ಪಾದನೆಯಲ್ಲಿ ಒಳ್ಳೆಯದ್ದು, ಕೆಟ್ಟದ್ದು ಎಂಬುದಿಲ್ಲ, ಭಯೋತ್ಪಾದನೆಯಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳೋಣ ಎಂದು ರಾಷ್ಟ್ರಪತಿ ಪ್ರಣಬ್ ...

ನವದೆಹಲಿ: ಭಯೋತ್ಪಾದನೆಯಲ್ಲಿ ಒಳ್ಳೆಯದ್ದು, ಕೆಟ್ಟದ್ದು ಎಂಬುದಿಲ್ಲ, ಭಯೋತ್ಪಾದನೆಯಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳೋಣ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಕರೆ ನೀಡಿದ್ದಾರೆ.

67ನೇ ಗಣರಾಜ್ಯೋತ್ಸವದ ಅಂಗವಾಗಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ ಪ್ರಣಬ್ ಮುಖರ್ಜಿ, ಗುಂಡಿನ ಸುರಿಮಳೆ ಕೆಳಗೆ ಶಾಂತಿ ಮಾತುಕತೆ ಸಾಧ್ಯವಿಲ್ಲ ಎಂದು ಹೇಳಿದರು. 2015 ರಲ್ಲಿ ಭಾರತಕ್ಕೆ ಅನೇಕ ಸವಾಲುಗಳು ಎದುರಾದವು, ಎಲ್ಲ ಸಮಸ್ಯೆಗಳನ್ನು ಎದುರಿಸಿ ಭಾರತ ವಿಶ್ವ ನಾಯಕನಾಗಿ ಹೊರಹೊಮ್ಮಿದೆ ಎಂದು ಅವರು ಹೇಳಿದರು.

ಯಾವುದೇ ಕಾರಣಕ್ಕೂ ದೇಶದಲ್ಲಿ ಬೇಧ ಭಾವವಿಲ್ಲ, ಎಲ್ಲರೂ ಒಂದೇ ಎಂದು ಹೇಳಿದ ಪ್ರಣಬ್ ಮುಖರ್ಜಿ, ಮೇಕ್ ಇನ್ ಇಂಡಿಯಾ, ಸ್ಟಾರ್ಟ್ ಅಫ್ ಇಂಡಿಯಾದಿಂದ ಸಂಶೋಧನೆಯಲ್ಲಿ ಪ್ರಗತಿ ಹೊಂದಲಾಗಿದೆ. ಇದೇ ರೀತಿ ಅಭಿವೃದ್ಧಿ ಮುಂದುವರಿದರೇ ಇನ್ನು 20 ವರ್ಷದಲ್ಲಿ ದೇಶದ ಬಚತನ ನಿರ್ಮೂವಲನೆಯಾಗುತ್ತದೆ ಎಂದು ಪ್ರಣಬ್ ಮುಖರ್ಜಿ ತಿಳಿಸಿದರು.

2015 ರಲ್ಲಿ ದೇಶ ಅನೇಕ ಪ್ರಾಕೃತಿಕ ವಿಕೋಪಗಳನ್ನು ಎದರಿಸಿದೆ. ಈ ಎಲ್ಲಾ ಸವಾಲುಗಳನ್ನು ಮೆಟ್ಟಿ ನಿಂತಿದೆ ಎಂದು ಹೇಳಿದ ಪ್ರಣಬ್ ಮುಖರ್ಜಿ, ದೂರು, ಬೇಡಿಕೆ, ಪ್ರತಿಭಟನೆ ಗಳನ್ನು ಮುಂದುವರಿಸೋಣ ಎಂದು ಹೇಳಿದರು. ದೇಶಕ್ಕಾಗಿ ಹೋರಾಟ ನಡೆಸುತ್ತಿರುವ ಸೈನಿಕರಿಗೆ ರಾಷ್ಟ್ರಪತಿಗಳು ನಮನ ಸಲ್ಲಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್