ಪ್ರಣಬ್ ಮುಖರ್ಜಿ 
ಪ್ರಧಾನ ಸುದ್ದಿ

ದೂರು, ಬೇಡಿಕೆ,ಪ್ರತಿಭಟನೆ ಮುಂದುವರಿಸೋಣ: ಪ್ರಣಬ್ ಮುಖರ್ಜಿ

ಭಯೋತ್ಪಾದನೆಯಲ್ಲಿ ಒಳ್ಳೆಯದ್ದು, ಕೆಟ್ಟದ್ದು ಎಂಬುದಿಲ್ಲ, ಭಯೋತ್ಪಾದನೆಯಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳೋಣ ಎಂದು ರಾಷ್ಟ್ರಪತಿ ಪ್ರಣಬ್ ...

ನವದೆಹಲಿ: ಭಯೋತ್ಪಾದನೆಯಲ್ಲಿ ಒಳ್ಳೆಯದ್ದು, ಕೆಟ್ಟದ್ದು ಎಂಬುದಿಲ್ಲ, ಭಯೋತ್ಪಾದನೆಯಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳೋಣ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಕರೆ ನೀಡಿದ್ದಾರೆ.

67ನೇ ಗಣರಾಜ್ಯೋತ್ಸವದ ಅಂಗವಾಗಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ ಪ್ರಣಬ್ ಮುಖರ್ಜಿ, ಗುಂಡಿನ ಸುರಿಮಳೆ ಕೆಳಗೆ ಶಾಂತಿ ಮಾತುಕತೆ ಸಾಧ್ಯವಿಲ್ಲ ಎಂದು ಹೇಳಿದರು. 2015 ರಲ್ಲಿ ಭಾರತಕ್ಕೆ ಅನೇಕ ಸವಾಲುಗಳು ಎದುರಾದವು, ಎಲ್ಲ ಸಮಸ್ಯೆಗಳನ್ನು ಎದುರಿಸಿ ಭಾರತ ವಿಶ್ವ ನಾಯಕನಾಗಿ ಹೊರಹೊಮ್ಮಿದೆ ಎಂದು ಅವರು ಹೇಳಿದರು.

ಯಾವುದೇ ಕಾರಣಕ್ಕೂ ದೇಶದಲ್ಲಿ ಬೇಧ ಭಾವವಿಲ್ಲ, ಎಲ್ಲರೂ ಒಂದೇ ಎಂದು ಹೇಳಿದ ಪ್ರಣಬ್ ಮುಖರ್ಜಿ, ಮೇಕ್ ಇನ್ ಇಂಡಿಯಾ, ಸ್ಟಾರ್ಟ್ ಅಫ್ ಇಂಡಿಯಾದಿಂದ ಸಂಶೋಧನೆಯಲ್ಲಿ ಪ್ರಗತಿ ಹೊಂದಲಾಗಿದೆ. ಇದೇ ರೀತಿ ಅಭಿವೃದ್ಧಿ ಮುಂದುವರಿದರೇ ಇನ್ನು 20 ವರ್ಷದಲ್ಲಿ ದೇಶದ ಬಚತನ ನಿರ್ಮೂವಲನೆಯಾಗುತ್ತದೆ ಎಂದು ಪ್ರಣಬ್ ಮುಖರ್ಜಿ ತಿಳಿಸಿದರು.

2015 ರಲ್ಲಿ ದೇಶ ಅನೇಕ ಪ್ರಾಕೃತಿಕ ವಿಕೋಪಗಳನ್ನು ಎದರಿಸಿದೆ. ಈ ಎಲ್ಲಾ ಸವಾಲುಗಳನ್ನು ಮೆಟ್ಟಿ ನಿಂತಿದೆ ಎಂದು ಹೇಳಿದ ಪ್ರಣಬ್ ಮುಖರ್ಜಿ, ದೂರು, ಬೇಡಿಕೆ, ಪ್ರತಿಭಟನೆ ಗಳನ್ನು ಮುಂದುವರಿಸೋಣ ಎಂದು ಹೇಳಿದರು. ದೇಶಕ್ಕಾಗಿ ಹೋರಾಟ ನಡೆಸುತ್ತಿರುವ ಸೈನಿಕರಿಗೆ ರಾಷ್ಟ್ರಪತಿಗಳು ನಮನ ಸಲ್ಲಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT