ಪ್ರೊ. ವಿಪಿನ್ ಶ್ರೀವಾಸ್ತವ 
ಪ್ರಧಾನ ಸುದ್ದಿ

ರೋಹಿತ್ ವೇಮುಲಾ ಉಚ್ಛಾಟನೆ ಮಾಡಿದ್ದ ಸಮಿತಿಯ ಅಧ್ಯಕ್ಷ ಈಗ ಉಪಕುಲಪತಿ

ಹೈದರಾಬಾದ್ ವಿಶ್ವವಿದ್ಯಾಲಯದ ದಲಿತ ವಿದ್ಯಾರ್ಥಿ ರೋಹಿತ್ ವೇಮುಲಾ ಆತ್ಮಹತ್ಯೆ ಮಾಡಿಕೊಂಡದ್ದಕ್ಕೆ ತೀವ್ರ ವಿರೋಧದ ಮಧ್ಯೆ ಉಪಕುಲಪತಿ ಅಪ್ಪ ರಾವ್ ಉಪಕುಲಪತಿ

ಹೈದರಾಬಾದ್: ಹೈದರಾಬಾದ್ ವಿಶ್ವವಿದ್ಯಾಲಯದ ದಲಿತ ವಿದ್ಯಾರ್ಥಿ ರೋಹಿತ್ ವೇಮುಲಾ ಆತ್ಮಹತ್ಯೆ ಮಾಡಿಕೊಂಡದ್ದಕ್ಕೆ ತೀವ್ರ ವಿರೋಧದ ಮಧ್ಯೆ ಉಪಕುಲಪತಿ ಅಪ್ಪ ರಾವ್ ಉಪಕುಲಪತಿ ಹುದ್ದೆಯಿಂದ ಬದಿಗೆ ಸರಿದಿದ್ದು, ಇನ್ನೂ ಹೆಚ್ಚಿನ ಪ್ರತಿಭಟನೆಗಳಿಗೆ ಎಡೆಮಾಡಿಕೊಡಬಹುದಾದ ನಡೆಯಲ್ಲಿ ದಲಿತ ವಿದ್ಯಾರ್ಥಿಗಳನ್ನು ವಿದ್ಯಾರ್ಥಿ ನಿಲಯದಿಂದ ಉಚ್ಛಾಟಿಸಲು ಶಿಫಾರಸ್ಸು ಮಾಡಿದ್ದ ಸಮಿತಿಯ ಅಧ್ಯಕ್ಷತೆ ವಹಿಸಿದ್ದ ವ್ಯಕ್ತಿ ಉಪಕುಲಪತಿ ಹುದ್ದೆಯನ್ನು ಅಲಂಕರಿಸಿದ್ದಾರೆ. 
ಪೋಲೀಸರು ದಾಖಲಿಸಿರುವ ಎಫ್ ಐ ಆರ್ ನಲ್ಲಿ ಸೇರಿರುವ ಪ್ರೊ. ಅಪ್ಪ ರಾವ್ ವೈಯಕ್ತಿಕ ಕಾರಣಗಳನ್ನು ನೀಡಿ ರಜೆಯ ಮೇಲೆ ಹೋಗಿದ್ದರೆ. ಅವರ ಸ್ಥಾನವನ್ನು ಪ್ರೊ. ವಿಪಿನ್ ಶ್ರೀವಾಸ್ತವ ಅಲಂಕರಿಸಿದ್ದಾರೆ. 
ಈಗಗಾಲೇ ಪ್ರತಿಭಟನೆಗೆ ಮಣಿದು ರೋಹಿತ್ ಗೆಳೆಯರನ್ನು ಮತ್ತೆ ವಿದ್ಯಾರ್ಥಿನಿಲಯಕ್ಕೆ ಹಿಂದಿರುಗುವ ಅವಕಾಶ ನೀಡಲಾಗಿದೆ ಹಾಗೂ ಈಗ ಉಪಕುಲಪತಿ ಅಪ್ಪ ರಾವ್ ಕೂಡ ಸ್ಥಾನವನ್ನು ತೆರವು ಮಾಡಿದ್ದು ವಿಶ್ವವಿದ್ಯಾಲಯ ಸಾಮಾನ್ಯ ಕಾರ್ಯಗಳನ್ನು ನಿರ್ವಹಿಸಲು ಸಾಧ್ಯವಾಗುವುದನ್ನು ನಿರೀಕ್ಷಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT