ಕೆ ವಿ ಕೃಷ್ಣ ರಾವ್ ವಿಧಿವಶ 
ಪ್ರಧಾನ ಸುದ್ದಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಕೆ ವಿ ಕೃಷ್ಣ ರಾವ್ ವಿಧಿವಶ

1971 ರಲ್ಲಿ ಬಾಂಗ್ಲಾದೇಶ ವಿಮೋಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮಾಜಿ ಸೇನಾ ಮುಖ್ಯಸ್ಥ ಜನರಲ್ ಕೆ ವಿ ಕೃಷ್ಣ ರಾವ್( 92 ) ವಿಧಿವಶರಾಗಿದ್ದಾರೆ.

ನವದೆಹಲಿ: 1971 ರಲ್ಲಿ ಬಾಂಗ್ಲಾದೇಶ ವಿಮೋಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮಾಜಿ ಸೇನಾ ಮುಖ್ಯಸ್ಥ ಜನರಲ್ ಕೆ ವಿ ಕೃಷ್ಣ ರಾವ್( 92 ) ವಿಧಿವಶರಾಗಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆ ಹೆಚ್ಚಾಗಿದ್ದ ಸಂದರ್ಭದಲ್ಲಿ  ಕೃಷ್ಣರಾವ್ ಅವರು ಜಮ್ಮು ಕಾಶ್ಮೀರದ ರಾಜ್ಯಪಾಲರಾಗಿ ಸಹ ಕಾರ್ಯನಿರ್ವಹಿಸಿದ್ದರು. 1942 ರಲ್ಲಿ ಸೇನೆಗೆ ಸೇರಿದ್ದ ಕೃಷ್ಣ ರಾವ್ 4 ದಶಕಗಳ ಕಾಲ ಸೇನೆಯಲ್ಲಿದ್ದು  ಭಾರತೀಯ ಸೇನೆಯ 14 ನೇ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು.
ಎರಡನೇ ಮಹಾಯುದ್ಧದ ವೇಳೆ ಬರ್ಮಾ, ನಾರ್ತ್ ವೆಸ್ಟ್ ಫ್ರಾಂಟಿಯರ್, ಬಲೂಚಿಸ್ತಾನದಲ್ಲೂ ಕೃಷ್ಣಾ ರಾವ್ ಸೇವೆ ಸಲ್ಲಿಸಿದ್ದರು. ಭಾರತೀಯ ಸೇನೆಯ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದ ಕೃಷ್ಣ ರಾವ್ 1949 -51 ರಲ್ಲಿ ನ್ಯಾಷನಲ್ ಡಿಫೆನ್ಸ್ ಅಕಾಡಮಿಯನ್ನು ಸ್ಥಾಪಿಸಿ ಮಾರ್ಗದರ್ಶಕರಾಗಿದ್ದರು. ಕೃಷ್ಣರಾವ್ ಅವರ ನಿಧನಕ್ಕೆ ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ  ಓಮರ್  ಅಬ್ದುಲ್ಲ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ