ಕೆ ವಿ ಕೃಷ್ಣ ರಾವ್ ವಿಧಿವಶ 
ಪ್ರಧಾನ ಸುದ್ದಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಕೆ ವಿ ಕೃಷ್ಣ ರಾವ್ ವಿಧಿವಶ

1971 ರಲ್ಲಿ ಬಾಂಗ್ಲಾದೇಶ ವಿಮೋಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮಾಜಿ ಸೇನಾ ಮುಖ್ಯಸ್ಥ ಜನರಲ್ ಕೆ ವಿ ಕೃಷ್ಣ ರಾವ್( 92 ) ವಿಧಿವಶರಾಗಿದ್ದಾರೆ.

ನವದೆಹಲಿ: 1971 ರಲ್ಲಿ ಬಾಂಗ್ಲಾದೇಶ ವಿಮೋಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮಾಜಿ ಸೇನಾ ಮುಖ್ಯಸ್ಥ ಜನರಲ್ ಕೆ ವಿ ಕೃಷ್ಣ ರಾವ್( 92 ) ವಿಧಿವಶರಾಗಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆ ಹೆಚ್ಚಾಗಿದ್ದ ಸಂದರ್ಭದಲ್ಲಿ  ಕೃಷ್ಣರಾವ್ ಅವರು ಜಮ್ಮು ಕಾಶ್ಮೀರದ ರಾಜ್ಯಪಾಲರಾಗಿ ಸಹ ಕಾರ್ಯನಿರ್ವಹಿಸಿದ್ದರು. 1942 ರಲ್ಲಿ ಸೇನೆಗೆ ಸೇರಿದ್ದ ಕೃಷ್ಣ ರಾವ್ 4 ದಶಕಗಳ ಕಾಲ ಸೇನೆಯಲ್ಲಿದ್ದು  ಭಾರತೀಯ ಸೇನೆಯ 14 ನೇ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು.
ಎರಡನೇ ಮಹಾಯುದ್ಧದ ವೇಳೆ ಬರ್ಮಾ, ನಾರ್ತ್ ವೆಸ್ಟ್ ಫ್ರಾಂಟಿಯರ್, ಬಲೂಚಿಸ್ತಾನದಲ್ಲೂ ಕೃಷ್ಣಾ ರಾವ್ ಸೇವೆ ಸಲ್ಲಿಸಿದ್ದರು. ಭಾರತೀಯ ಸೇನೆಯ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದ ಕೃಷ್ಣ ರಾವ್ 1949 -51 ರಲ್ಲಿ ನ್ಯಾಷನಲ್ ಡಿಫೆನ್ಸ್ ಅಕಾಡಮಿಯನ್ನು ಸ್ಥಾಪಿಸಿ ಮಾರ್ಗದರ್ಶಕರಾಗಿದ್ದರು. ಕೃಷ್ಣರಾವ್ ಅವರ ನಿಧನಕ್ಕೆ ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ  ಓಮರ್  ಅಬ್ದುಲ್ಲ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

SCROLL FOR NEXT