ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಮಹಾದಾಯಿ ವಿವಾದ: ಉಮಾಭಾರತಿ ಪತ್ರಕ್ಕೆ ಎಂಬಿ. ಪಾಟೀಲ್ ಅಸಮಾಧಾನ

ಬಹು ವಿವಾದಿತ ಮಹಾದಾಯಿ ನದಿ ನೀರು ಹಂಚಿಕೆ ವಿಚಾರ ಸಂಬಂಧ ಕೇಂದ್ರ ಸಚಿವೆ ಉಮಾಭಾರತಿ ಬರೆದಿರುವ ಪತ್ರ ದುರದೃಷ್ಟಕರವಾಗಿದೆ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅವರು ಶನಿವಾರ ಹೇಳಿದ್ದಾರೆ...

ಬೆಂಗಳೂರು: ಬಹು ವಿವಾದಿತ ಮಹಾದಾಯಿ ನದಿ ನೀರು ಹಂಚಿಕೆ ವಿಚಾರ ಸಂಬಂಧ ಕೇಂದ್ರ ಸಚಿವೆ ಉಮಾಭಾರತಿ ಬರೆದಿರುವ ಪತ್ರ ದುರದೃಷ್ಟಕರವಾಗಿದೆ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅವರು ಶನಿವಾರ ಹೇಳಿದ್ದಾರೆ.

ಮಹಾದಾಯಿ ವಿಚಾರ ಸಂಬಂಧ ರಾಜ್ಯಕ್ಕೆ ಉಮಾಭಾರತಿ ಬರೆದಿರುವ ಪತ್ರ ಸಂಬಂಧ ಸದಾಶಿವ ನಗರದಲ್ಲಿ ಪ್ರತಿಕ್ರಿಯೆ ನೀಡಿ ಮಾತನಾಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವೆ ಉಮಾಭಾರತಿಯವರು ಬರೆದಿರುವ ಪತ್ರ ನಿಜಕ್ಕೂ ದುರದೃಷ್ಟಕರವಾಗಿದ್ದು, ರಾಜ್ಯದ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವೆ ಉಮಾಭಾರತಿಯವರು ಮೋಸ ಮಾಡುತ್ತಿದ್ದಾರೆಂದು ಹೇಳಿದ್ದಾರೆ.

ಮಹಾದಾಯಿ ವಿಚಾರ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆಗ ಚರ್ಚೆ ನಡೆಸುತ್ತೇನೆ. ಈ ಕುರಿತಂತೆ ಮತ್ತೆ ಪ್ರಧಾನಿಯವರಿಗೆ ಪತ್ರ ಬರೆದು ಒತ್ತಡ ಹೇರಲಿದ್ದೇವೆ. ವಿವಾದ ಸಂಬಂಧ ಗೋವಾ ಮುಖ್ಯಮಂತ್ರಿಯವರ ಪತ್ರ ಕೂಡ ದುರದೃಷ್ಟಕರವಾಗಿದ್ದು, ಈ ಬಗ್ಗೆ ನಿಯೋಗ ಭೇಟಿಯನ್ನು ಅವರು ತಿರಸ್ಕರಿಸಿದ್ದಾರೆ. ನಿಯೋಗ ಭೇಟಿ ನೀಡಿದಾಗಾದರೂ ಕನಿಷ್ಟ ಪಕ್ಷ ಸೌಜನ್ಯವನ್ನಾದರೂ ತೋರಬೇಕಿತ್ತು. ಅದನ್ನು ಅವರು ಮಾಡಿಲ್ಲ. ಮಹಾದಾಯಿ ವಿಚಾರದಲ್ಲಿ ಬಿಜೆಪಿ ಬಣ್ಣ ಬಯಲಾಗಿದ್ದು, ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹಾಗೂ ಪ್ರಹ್ಲಾದ್ ಜೋಷಿಯವರು ರಾಜ್ಯದ ಜನತೆಯ ಕಣ್ಣಿಗೆ ಮಣ್ಣು ಎರಚುವ ಪ್ರಯತ್ನ ಮಾಡುತ್ತಿದ್ದಾರೆಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT