ಅನುಪಮಾ ಶೆಣೈ 
ಪ್ರಧಾನ ಸುದ್ದಿ

ಕೂಡ್ಲಿಗಿ ಡಿವೈಎಸ್ಪಿಯಾಗಿ ಅನುಪಮಾ ಶೆಣೈ ಮರುನೇಮಕ

ಜನತೆಯ ಒತ್ತಡ ಹಾಗೂ ಮಾಜಿ ಸಂಸದೆ ನಟಿ ರಮ್ಯಾ ಅವರ ಮನವಿಗೆ ಮಣಿದಿರುವ ರಾಜ್ಯ ಸರ್ಕಾರ ಐಪಿಎಸ್ ಅಧಿಕಾರಿ ಅನುಪಮಾ ಶೆಣೈ ಅವರನ್ನು ಕೂಡ್ಲಿಗಿಗೆ...

ಬೆಂಗಳೂರು: ಜನತೆಯ ಒತ್ತಡ ಹಾಗೂ ಮಾಜಿ ಸಂಸದೆ ನಟಿ ರಮ್ಯಾ ಅವರ ಮನವಿಗೆ ಮಣಿದಿರುವ ರಾಜ್ಯ ಸರ್ಕಾರ ಐಪಿಎಸ್ ಅಧಿಕಾರಿ ಅನುಪಮಾ ಶೆಣೈ ಅವರನ್ನು ಕೂಡ್ಲಿಗಿಗೆ ಡಿವೈಎಸ್ಪಿಯಾಗಿ ಮರುನೇಮಕ ಮಾಡಿ ಆದೇಶ ಹೊರಡಿಸಿದೆ.

ಕಾರ್ಮಿಕ ಸಚಿವ ಪರಮೇಶ್ವರ್ ನಾಯಕ್ ಅವರಿಗೆ ತೀವ್ರ ಮುಖಭಂಗವಾಗಿದ್ದು, ಎಸ್ ಪಿ ಅನುಪಮಾ ಶೆಣೈ ವರ್ಗಾವಣೆಯನ್ನು ರದ್ದುಗೊಳಿಸಿರುವ ಸರ್ಕಾರ ಕೂಡ್ಲಿಗಿ ಡೈವೈಎಸ್ಪಿಯಾಗಿ ಮರುನೇಮಕ ಮಾಡಿ ಆದೇಶ ಹೊರಡಿಸಿದೆ.

ವಿಜಯಪುರದ ಇಂಡಿಗೆ ಡಿವೈಎಸ್ಪಿಯಾಗಿ ವರ್ಗಾವಣೆ ಮಾಡಿರುವುದನ್ನು ವಿರೋಧಿಸಿ ಕೂಡ್ಲಿಗಿ ಜನತೆ ಪ್ರತಿಭಟನೆ ನಡೆಸಿದ್ದು, ಬಂದ್ ಗೆ ಕರೆ ನೀಡಿದ್ದರು.

ಕಾರ್ಮಿಕ ಸಚಿವ ಪರಮೇಶ್ವರ್ ನಾಯಕ್ ಅವರ ಫೋನ್ ಕರೆ ಸ್ವೀಕರಿಸದ ಕಾರಣಕ್ಕೆ ಐಪಿಎಸ್ ಅಧಿಕಾರಿ ಅನುಪಮಾ ಶೆಣೈ ಅವರನ್ನು ವಿಜಯಪುರದ ಇಂಡಿಗೆ ಡಿವೈಎಸ್‌ಪಿಯಾಗಿ ವರ್ಗಾವಣೆ ಮಾಡಲಾಗಿತ್ತು. ಆದರೆ, ಅವರು ಅಲ್ಲಿ ಅಧಿಕಾರ ಸ್ವೀಕರಿಸುವ ಮೊದಲೇ ಅವರಿಗೆ 15 ದಿನಗಳ ಕಾಲ ಕಡ್ಡಾಯ ರಜೆ ಮೇಲೆ ತೆರಳುವಂತೆ ಸೂಚನೆ ನೀಡಲಾಗಿದೆ. ಇದು ಮತ್ತೊಂದು ವಿವಾದಕ್ಕೆ ಕಾರಣವಾಗಿತ್ತು.

ಅನುಪಮಾ ಶೆಣೈ ಪರ ನಿಂತ ಮಾಜಿ ಸಂಸದೆ ರಮ್ಯಾ
ಇನ್ನೊಂದೆಡೆ ಅನುಪಮಾ ಶೆಣೈ ಅವರನ್ನು ಮತ್ತೆ ಕೂಡ್ಲಿಗಿ ಡಿವೈಎಸ್ಪಿಯಾಗಿ ಮರುನೇಮಕ ಮಾಡುವಂತೆ ಮಾಜಿ ಸಂಸದೆ ರಮ್ಯಾ ಅವರು ಗೃಹ ಸಚಿವ ಡಾ.ಜಿ ಪರಮೇಶ್ವರ ಅವರೊಂದಿಗೆ ಮಾತನಾಡಿದ್ದು, ಅನುಪಮಾ ಅವರನ್ನು ಮರು ವರ್ಗಾವಣೆ ಮಾಡಿ ಕೂಡ್ಲಿಗಿಗೆ ಮತ್ತೆ ಡಿವೈಎಸ್ಪಿಯಾಗಿ ನೇಮಕ ಮಾಡುವ ಭರವಸೆ ನೀಡಿದ್ದಾರೆ ಎಂದು ರಮ್ಯಾ ಟ್ವೀಟ್ ಮಾಡಿದ್ದರು. ಇದಾದ ಕೆಲ ಗಂಟೆಗಳ ನಂತರ ಶೆಣೈ ಅವರ ವರ್ಗಾವಣೆ ಆದೇಶದ ಬಗ್ಗೆ ಅಧಿಕೃತ ಹೇಳಿಕೆ ಪ್ರಕಟವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT