ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ದಲಿತ ರ್ಯಾಗಿಂಗ್ ಸಂತ್ರಸ್ತೆಗೆ ಸಹಾಯಹಸ್ತ ಮತ್ತು ಉದ್ಯೋಗ ಭರವಸೆ ನೀಡಿದ ಕೇರಳ

ಕರ್ನಾಟಕದ ನರ್ಸಿಂಗ್ ಕಾಲೇಜಿನ ರ್ಯಾಗಿಂಗ್ ನಿಂದ ತೀವ್ರ ಅಸ್ವಸ್ಥಳಾಗಿರುವ ದಲಿತ ಯುವತಿ ಕೆ ಪಿ ಅಶ್ವಥಿ ಅವರಿಗೆ ಧನ ಸಹಾಯ ಮಾಡಲು ಹಾಗೂ ಉದ್ಯೋಗ ಭರವಸೆ ನೀಡಲು ಕೇರಳ ಸರ್ಕಾರ

ಕ್ಯಾಲಿಕಟ್: ಕರ್ನಾಟಕದ ನರ್ಸಿಂಗ್ ಕಾಲೇಜಿನ ರ್ಯಾಗಿಂಗ್ ನಿಂದ ತೀವ್ರ ಅಸ್ವಸ್ಥಳಾಗಿರುವ ದಲಿತ ಯುವತಿ ಕೆ ಪಿ ಅಶ್ವಥಿ ಅವರಿಗೆ ಧನ ಸಹಾಯ ಮಾಡಲು ಹಾಗೂ ಉದ್ಯೋಗ ಭರವಸೆ ನೀಡಲು ಕೇರಳ ಸರ್ಕಾರ ನಿರ್ಣಯಿಸಿದೆ ಎಂದು ಸಚಿವರೊಬ್ಬರು ಶನಿವಾರ ಹೇಳಿದ್ದಾರೆ. 
"ಅವರಿಗೆ ಎರಡು ಲಕ್ಷ ರೂ ನೀಡಿದ್ದೇವೆ. ಅವರ ಆಸ್ಪತ್ರೆ ಖರ್ಚು ವೆಚ್ಚಗಳನ್ನು ನೋಡಿಕೊಂಡು ಅವರು ಇಲ್ಲಿಯೇ ನರ್ಸಿಂಗ್ ಓದಲು ಅನುವು ಮಾಡಿಕೊಡವುತ್ತೇವೆ" ಎಂದು ಪರಿಶಿಷ್ಟ ವರ್ಗ, ಪರಿಶಿಷ್ಟ ಪಂಗಡ ಮತ್ತಿ ಹಿಂದುಳಿದ ವರ್ಗದ ಕಲ್ಯಾಣ ಸಚಿವ ಎ ಕೆ ಬಾಲನ್ ವರದಿಗಾರರಿಗೆ ತಿಳಿಸಿದ್ದಾರೆ. 
"ಅವರು ಶಿಕ್ಷಣ ಯಶಸ್ವಿಯಾಗಿ ಮುಗಿಸಿದ ಮೇಲೆ ಉದ್ಯೋಗವನ್ನು ನೀಡಲಿದ್ದೇವೆ" ಎಂದು ರಾಜ್ಯ ಸರ್ಕಾರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಶ್ವಥಿ ಅವರನ್ನು ಭೇಟಿ ಮಾಡಿದ ಬಾಲನ್ ಹೇಳಿದ್ದಾರೆ. 
ಗುಲ್ಬರ್ಗಾದ ಆಲ್ ಕ್ವಮಾರ್ ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿದ್ದ 19 ವರ್ಷದ ಕೇರಳದ ಅಶ್ವಥಿ ಅವರನ್ನು ನಾಲ್ವರು ವಿದ್ಯಾರ್ಥಿನಿಯರು ರ್ಯಾಗಿಂಗ್ ನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು.
ಮೇ 9 ರಂದು ಕಾಲೇಜಿನ ವಿದ್ಯಾರ್ಥಿ ನಿಲಯದಲ್ಲಿ ನಡೆದ ಈ ಘಟನೆಯಲ್ಲಿ ಶೌಚಾಲಯ ಕ್ಲೀನರ್ ಕುಡಿಯುವಂತೆ ಮಾಡಿದ್ದಕ್ಕೆ ಅಶ್ವಥಿ ಅವರಿಗೆ ತೀವ್ರ ಅನಾರೋಗ್ಯವಾಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಲ್ಲಿಯವರಿಗೆ ಲಕ್ಷ್ಮಿ, ಅಥಿರಾ ಮತ್ತು ಕೃಷ್ಣಪ್ರಿಯ ಎಂಬ ಮೂವರು ಯುವತಿಯರನ್ನು ಬಂಧಿಸಿದ್ದಾರೆ. 
ಮತ್ತೊಬ್ಬ ಆರೋಪಿ ಶಿಲ್ಪಾ ಜೋಸ್ ತಲೆಮರೆಸಿಕೊಂಡಿದ್ದು, ಅವರ ನಿರೀಕ್ಷಣಾ ಜಾಮೀನು ಕೇರಳ ಹೈಕೋರ್ಟ್ ನಲ್ಲಿ ಜುಲೈ 8 ಕ್ಕೆ ವಿಚಾರಣೆಗೆ ಬರಲಿದೆ. 
ಕ್ಯಾಲಿಕಟ್ ನಲ್ಲೂ ಎಫ್ ಐ ಆರ್ ದಾಖಲಾಗಿದ್ದು ಕೇರಳ ಪೊಲೀಸರು ಕರ್ನಾಟಕ ಪೊಲೀಸರ ಸಹಾಯ ಕೇಳಿದ್ದಾರೆ. ಸಂತ್ರಸ್ತರ ಹೇಳಿಕೆ ಪಡೆದಿರುವ 9 ಜನರ ಕರ್ನಾಟಕ ಪೊಲೀಸ್ ತಂಡ ಗುಲ್ಬರ್ಗಾದಲ್ಲಿನ ಕೋರ್ಟ್ ಗೆ ವರದಿ ಸಲ್ಲಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT