ಇರಾನ್ ನ ಅಧಿನಾಯಕ ಅಯಾತೊಲ್ಲಾ ಅಲಿ ಖಮೇನಿ 
ಪ್ರಧಾನ ಸುದ್ದಿ

ಪಶ್ಚಿಮ ರಾಷ್ಟ್ರಗಳು ಮುಸ್ಲಿಂ ಜಗತ್ತಿನಲ್ಲಿ ಭಯೋತ್ಪಾದನೆ ಹೆಚ್ಚಿಸುತ್ತಿವೆ: ಇರಾನ್

ಪಶ್ಚಿಮ ದೇಶಗಳು ಮುಸ್ಲಿಂ ಜಗತ್ತಿನಲ್ಲಿ ಭಯೋತ್ಪಾದನೆಯನ್ನು ಬೆಳೆಸುತ್ತಿವೆ ಎಂದು ಹೇಳಿ ಇರಾನ್ ನ ಅಧಿನಾಯಕ ಅಯಾತೊಲ್ಲಾ ಅಲಿ ಖಮೇನಿ ಬುಧವಾರ ವಾಗ್ದಾಳಿ ನಡೆಸಿದ್ದಾರೆ.

ತೆಹ್ರಾನ್: ಪಶ್ಚಿಮ ದೇಶಗಳು ಮುಸ್ಲಿಂ ಜಗತ್ತಿನಲ್ಲಿ ಭಯೋತ್ಪಾದನೆಯನ್ನು ಬೆಳೆಸುತ್ತಿವೆ ಎಂದು ಹೇಳಿ ಇರಾನ್ ನ ಅಧಿನಾಯಕ ಅಯಾತೊಲ್ಲಾ ಅಲಿ ಖಮೇನಿ ಬುಧವಾರ ವಾಗ್ದಾಳಿ ನಡೆಸಿದ್ದಾರೆ. 
"ನಿಜ ಇಸ್ಲಾಮ್ ನಲ್ಲಿ ನಕಲಿ ಇಸ್ಲಾಮ್ ಸೃಷ್ಟಿಸಲು ಪ್ರಯತ್ನಿಸಿಯುತ್ತಿರುವ ಭಯೋತ್ಪಾದಕರಿಂದ ದುರದೃಷ್ಟವಶಾತ್ ಈ ವರ್ಷದ ಈದ್ ಉಲ್-ಫಿತ್ರ್ ಹಲವು ಮುಸ್ಲಿಂ ದೇಶಗಳಲ್ಲಿ ಶೋಕಾಚರಣೆಯಾಗಿ ಪರಿಣಮಿಸಿದೆ" ಎಂದು ತೆಹ್ರಾನ್ ನಲ್ಲಿ ಬೆಳಗಿನ ಪ್ರಾರ್ಥನೆಯ ವೇಳೆಯಲ್ಲಿ ಮುಂದಾಳತ್ವ ವಹಿಸಿದ್ದ ಸಮಯದಲ್ಲಿ ಅಯಾತೊಲ್ಲಾ ಹೇಳಿದ್ದಾರೆ. 
"ಅಮೆರಿಕಾ, ಇಸ್ರೇಲ್ ಮತ್ತು ಬ್ರಿಟನ್ ದೇಶಗಳ ಬೇಹುಗಾರಿಕಾ ಸಂಸ್ಥೆಗಳು ಹೆಚ್ಚಿಸಿರುವ ಭಯೋತ್ಪಾದನೆಯಿಂದಲೇ ಇಂಹತ ಘೋರ ಹಿಂಸೆಯ ಅಪರಾಧಗಳು ಜರುಗುತ್ತಿರುವುದು" ಎಂದು ಅಯಾತೊಲ್ಲಾ ಹೇಳಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ. 
ಈ ಭಯೋತ್ಪಾದನೆಯ ಸೃಷ್ಟಿಕರ್ತರು ಈ ಭಯೋತ್ಪಾದಕರ ಅಪರಾಧಗಳಿಂದ ರಕ್ಷಣೆ ಪಡೆಯಲು ಹೆಚ್ಚಿನ ದಿನಗಳವರೆಗೆ ಸಾಧ್ಯವಿಲ್ಲ ಎಂದು ಕೂಡ ಅವರು ಎಚ್ಚರಿಸಿದ್ದಾರೆ. 
ಪವಿತ್ರ ತಿಂಗಳು ರಂಜಾನ್ ನ ಕೊನೆಯ ದಿನವಾದ ಈದ್ ಉಲ್-ಫಿತ್ರ್ ಆಚರಣೆಗಾಗಿ ಇರಾನ್ ನಾಗರಿಕರು ಬುಧವಾರ ಬೆಳಗ್ಗೆ ಮಸೀದಿಗಳಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT