ಎಎಪಿ ಮುಖಂಡ ಅರವಿಂದ್ ಕೇಜ್ರಿವಾಲ್ 
ಪ್ರಧಾನ ಸುದ್ದಿ

'ಧಾರ್ಮಿಕ ಭಾವನೆಗಳಿಗೆ ಧಕ್ಕೆ'; ಪಂಜಾಬ್ ನಲ್ಲಿ ಎಎಪಿ ವಿರುದ್ಧ ಬಿಜೆಪಿ ಆರೋಪ, ಧರಣಿ

ಪಂಜಾಬ್ ನಲ್ಲಿ "ಕೋಮು ಸೌಹಾರ್ದವನ್ನು ಹದಗೆಡಿಸುತ್ತಿರುವುದಕ್ಕೆ" ಹಾಗೂ "ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಿರುವುದಕ್ಕೆ" ಆಮ್ ಆದ್ಮಿ ಪಕ್ಷದ ವಿರುದ್ಧ ಬಿಜೆಪಿ ಪಕ್ಷದ ನಾಯಕರು ಗುರುವಾರ

ನವದೆಹಲಿ: ಪಂಜಾಬ್ ನಲ್ಲಿ "ಕೋಮು ಸೌಹಾರ್ದವನ್ನು ಹದಗೆಡಿಸುತ್ತಿರುವುದಕ್ಕೆ" ಹಾಗೂ "ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಿರುವುದಕ್ಕೆ" ಆಮ್ ಆದ್ಮಿ ಪಕ್ಷದ ವಿರುದ್ಧ ಬಿಜೆಪಿ ಪಕ್ಷದ ನಾಯಕರು ಗುರುವಾರ ಧರಣಿ ನಡೆಸಿದ್ದಾರೆ. 
ಎಎಪಿ ಮುಖಂಡರಾದ ನರೇಶ್ ಯಾದವ್ ಮತ್ತು ಆಶಿಶ್ ಕೇತನ್ ಅವರನ್ನು ಉಚ್ಚಾಟಿಸಿ, ಪಂಜಾಬ್ ಜನತೆಯ ಭಾವನೆಗಳಿಗೆ ಘಾಸಿ ಮಾಡಿದ್ದಕ್ಕೆ ಕ್ಷಮೆ ಕೋರುವಂತೆ ಬಿಜೆಪಿ ಆಗ್ರಹಸಿದೆ. 
"ಪಂಜಾಬ್ ನಲ್ಲಿ ಕೋಮು ಸೌಹಾರ್ದವನ್ನು ಹಾಳುಮಾಡಲು ಎಎಪಿ ನಾಯಕರು ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ. ನರೇಶ್ ಯಾದವ್ ಮತ್ತು ಆಶಿಶ್ ಕೇತನ್ ಅವರನ್ನು ಅರವಿಂದ್ ಕೇಜ್ರಿವಾಲ್ ಕೂಡಲೇ ಉಚ್ಛಾಟಿಸಿ ಪಂಜಾಬ್ ಜನತೆಯ ಕ್ಷಮೆ ಕೋರಬೇಕು" ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಆರ್ ಪಿ ಸಿಂಗ್ ಹೇಳಿದ್ದಾರೆ. 
ಪಂಜಾಬ್ ನ ಮಲೆರ್ಕೊಟ್ಟಲಾದಲ್ಲಿ ಜೂನ್ 24 ರಂದು ಕುರಾನ್ ಅನ್ನು ಹಾನಿ ಮಾಡಿದ್ದ ಆರೋಪದ ಮೇಲೆ ಎಎಪಿ ಶಾಸಕ ಯಾದವ್ ಅವರನ್ನು ಪಂಜಾಬ್ ಪೊಲೀಸರು ಗುರುವಾರ ಪ್ರಶ್ನಿಸಿದ್ದರು. 
ಪಕ್ಷದ ಪಂಜಾಬ್ ಚುನಾವಣಾ ಪ್ರನಾಳಕೆಯನ್ನು ಪವಿತ್ರ ಸಿಖ್ ಗ್ರಂಥ ಗುರು ಗ್ರಂಥ ಸಾಹಿಬ್ ಗೆ ಹೋಲಿಸಿದ್ದಕ್ಕೆ ಎಎಪಿ ನಾಯಕ ಆಶಿಶ್ ಕೇತನ್ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

2nd PUC exam 2026-ಇಂದಿನಿಂದ ದ್ವಿತೀಯ ಪಿಯು ಪರೀಕ್ಷೆ-1: 7 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ, ಸಾವಿರಕ್ಕೂ ಅಧಿಕ ಮಕ್ಕಳಿಗೆ ನಿರಾಕರಣೆ

ಹಣ ಸಾಗಿಸುತ್ತಿದ್ದ ಕಾರ್ಗೊ ವಿಮಾನ ಪತನ; 15 ಮಂದಿ ಸಾವು, ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ನೋಟುಗಳು, ಮುಗಿಬಿದ್ದ ಜನರು: Video

'ನೀವೇ CM ಆಗಿ, ಇಲ್ಲದಿದ್ದರೇ ದಲಿತರನ್ನು ಮುಖ್ಯಮಂತ್ರಿ ಮಾಡಿ: ಅಧಿಕಾರವಿದ್ದರೂ ಅವಕಾಶ ನೀಡದಿದ್ದರೇ ಇತಿಹಾಸ ನಿಮ್ಮನ್ನು ಶಪಿಸುತ್ತೆ'

ರಂಜಾನ್ ಉಪವಾಸದ ಸಮಯದಲ್ಲಿ ಆರೋಗ್ಯಕರ ಆಹಾರ ಸೇವನೆ

ಅಹಿಂದ ಉತ್ತರಾಧಿಕಾರಕ್ಕೆ ಜಾರಕಿಹೊಳಿ ಸಿದ್ದತೆ: ಹಿಂದುಳಿದ ವರ್ಗಗಳ ಚ್ಯಾಂಪಿಯನ್ ಪಟ್ಟಕ್ಕೆ 'ಸಾಹುಕಾರ್' ಸಮರ್ಥರೇ?

SCROLL FOR NEXT