ಮಾಜಿ ಗೃಹ ಸಚಿವ ಕೆ.ಜೆ. ಜಾರ್ಜ್ 
ಪ್ರಧಾನ ಸುದ್ದಿ

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಹಿಂದೆ ನನ್ನ ಪಾತ್ರವಿಲ್ಲ: ಜಾರ್ಜ್ ಸ್ಪಷ್ಟನೆ

ಮಂಗಳೂರು ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಹಿಂದೆ ನನ್ನ ಪಾತ್ರವಿಲ್ಲ ಎಂದು ಮಾಜಿ ಗೃಹ ಸಚಿವ ಕೆ.ಜೆ. ಜಾರ್ಜ್ ಅವರು ಶುಕ್ರವಾರ ಸ್ಪಷ್ಟನೆ ನೀಡಿದ್ದಾರೆ...

ಬೆಂಗಳೂರು: ಮಂಗಳೂರು ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಹಿಂದೆ ನನ್ನ ಪಾತ್ರವಿಲ್ಲ ಎಂದು ಮಾಜಿ ಗೃಹ ಸಚಿವ ಕೆ.ಜೆ. ಜಾರ್ಜ್ ಅವರು ಶುಕ್ರವಾರ ಸ್ಪಷ್ಟನೆ ನೀಡಿದ್ದಾರೆ.

ತಮ್ಮ ವಿರುದ್ಧ ಕೇಳಿ ಬಂದಿರುವ ಆರೋಪಗಳ ಸಂಬಂಧ ಸ್ಪಷ್ಟನೆ ನೀಡಿರುವ ಅವರು, ನಾನು ಯಾರಿಗೂ ಯಾವುದೇ ರೀತಿಯ ಕಿರುಕುಳವನ್ನು ನೀಡಿಲ್ಲ. ಪ್ರಕರಣದಲ್ಲಿ ನನ್ನ ಹೆಸರು ಯಾವ ಕಾರಣಕ್ಕೆ ಬಂದಿದೆ ಎಂಬುದು ಅರ್ಥವಾಗುತ್ತಿಲ್ಲ. ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಹಿಂದೆ ನನ್ನ ಪಾತ್ರವಿಲ್ಲ. ನನ್ನ ವಿರುದ್ಧ ಪಿತೂರಿ ನಡೆಸಲಾಗಿದ್ದು, ಪ್ರತಿಪಕ್ಷಗಳ ಆರೋಪದಲ್ಲಿ ಸತ್ಯಾಂಶವಿಲ್ಲ ಎಂದು ಹೇಳಿದ್ದಾರೆ.

2008ರಲ್ಲಿ ನಡೆದ ಚರ್ಚ್ ದಾಳಿ ಸಂದರ್ಭದಲ್ಲಿ ಕೆಲ ಲೋಪವೆಸಗಿದ ಹಿನ್ನೆಲೆಯಲ್ಲಿ ಗಣಪತಿಯವರನ್ನು ವರ್ಗಾವಣೆ ಮಾಡಲಾಗಿತ್ತು. ವರ್ಗಾವಣೆ ಪ್ರಶ್ನಿಸಿ ಗಣಪತಿ ಅವರು ನನ್ನನ್ನು ಭೇಟಿ ಮಾಡಿ ಮಾತನಾಡಿದ್ದರು. ವರ್ಗಾವಣೆ ಹಿಂಪಡೆಯುವಂತೆ ಮನವಿ ಮಾಡಿದ್ದರು. ಆದರೆ, ತನಿಖೆ ಪ್ರಗತಿಯಲ್ಲಿರುವುದರಿಂದ ಪ್ರಸ್ತುತ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದೆ ಎಂದು ಹೇಳಿಕೊಂಡಿದ್ದಾರೆ.

ಇದೇ ವೇಳೆ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡುವುದಾಗಿ ಹೇಳಿರುವ ಅವರು, ಪ್ರಕರಣ ಸಂಬಂಧ ಮುಖ್ಯಮಂತ್ರಿಯವರಿಗೆ ವಿವರಣೆ ನೀಡುತ್ತೇನೆಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT