ಸಿದ್ದರಾಮಯ್ಯ 
ಪ್ರಧಾನ ಸುದ್ದಿ

ಕಲ್ಲಪ್ಪ ಹಂಡಿಭಾಗ್ ಕುಟುಂಬಕ್ಕೆ ಸರ್ಕಾರದಿಂದ ಸಹಾಯ: ಸಿಎಂ

ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣವನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ ಸಹಾಯ...

ಬೆಂಗಳೂರು: ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣವನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ ಸಹಾಯ ಮಾಡುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಭರವಸೆ ನೀಡಿದ್ದಾರೆ.
ಇಂದು ವಿಧಾನಸಭೆಯಲ್ಲಿ ಕಲ್ಲಪ್ಪ ಹಂಡಿಭಾಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಿಎಂ, ವಿಶೇಷ ಪ್ರಕರಣ ಅಂತ ಪರಿಗಣಿಸಿ ಕಲ್ಲಪ್ಪ ಕುಟುಂಬಕ್ಕೆ ಸಹಾಯ ಮಾಡುತ್ತೇವೆ ಮತ್ತು ಅವರ ಪತ್ನಿಗೆ ಸರ್ಕಾರಿ ಕೆಲಸ ನೀಡುವ ಬಗ್ಗೆ ಪರಿಶೀಲಿಸುವುದಾಗಿ ತಿಳಿಸಿದರು,
ಇನ್ನು ಈ ವೇಳೆ ಮಾತನಾಡಿದ ಕಾಂಗ್ರೆಸ್ ಶಾಸಕ ಎಎಸ್ ಪಾಟೀಲ್ ನಡಹಳ್ಳಿ ಅವರು, ಕಲ್ಪಪ್ಪ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವರು ಹಾಗೂ ಹಾಲಿ ಶಾಸಕರೊಬ್ಬರ ಕೈವಾಡ ಇದೆ ಎಂದು ಆರೋಪಿಸಿದರು, 
ನಡಹಳ್ಳಿ ಆರೋಪ ಕಲಾಪದಲ್ಲಿ ಕೆಲಕಾಲ ಬಿಸಿ, ಬಿಸಿ ಚರ್ಚೆಗೆ ಕಾರಣವಾಯ್ತು. ಈ ರೀತಿ ಹೇಳಬಾರದು..ಇದು ಬಹಳ ಕಷ್ಟ ಆಗುತ್ತೆ. ಎಲ್ಲರ ಮೇಲೂ ಸಂಶಯ ಬರೋ ಹಾಗೆ ಆಗುತ್ತೆ ಎಂದು ಸಚಿವ ರಮೇಶ್ ಕುಮಾರ್ ಆತಂಕ ವ್ಯಕ್ತಪಡಿಸಿ. ಯಾರು ಅಂತ ಹೆಸರು ಹೇಳಿಬಿಡಲಿ ಎಂದು ಸಲಹೆ ನೀಡಿದರು. 
ಈ ಬಗ್ಗೆ ಮತ್ತೆ ಪ್ರಸ್ತಾಪ ಆದಾಗ ನಡಹಳ್ಳಿ ಅವರು ಇಂಡಿಯನ್ ಎಕ್ಸ್ ಪ್ರೆಸ್ ನಲ್ಲಿ ಪ್ರಕಟವಾದ ವರದಿಯನ್ನು ಓದಿ...ತನಿಖಾಧಿಕಾರಿಗಳು ತನಿಖೆ ನಡೆಸಲಿ. ನನ್ನ ಬಳಿ ದಾಖಲೆ ಇದೆ. ಸಮಯ ಬಂದಾಗ ಬಹಿರಂಗ ಪಡಿಸುತ್ತೇನೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT