ಅರುಣಾಚಲ ಪ್ರದೇಶ ಮುಖ್ಯಮಂತ್ರಿ ನಬಾಮ್ ತೂಕಿ 
ಪ್ರಧಾನ ಸುದ್ದಿ

ಕೇಂದ್ರಕ್ಕೆ ಮುಖಭಂಗ; ಅರುಣಾಚಲದಲ್ಲಿ ಕಾಂಗ್ರೆಸ್ ಸರ್ಕಾರ ಮರುಕಳಿಸಲು ಸುಪ್ರೀಂ ಕೋರ್ಟ್ ಆದೇಶ

ನರೇಂದ್ರ ಮೋದಿ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿರುವ ಆದೇಶದಲ್ಲಿ, ರಾಜ್ಯಪಾಲ ಜ್ಯೋತಿ ಪ್ರಸಾದ್ ರಾಜಕೋವಾ ಅವರ ನಿರ್ಣಯವನ್ನು (ರಾಷ್ಟ್ರಪತಿ ಆಳ್ವಿಕೆ) ರದ್ದುಗೊಳಿಸಿ ಅರುಣಾಚಲ ಪ್ರದೇಶ ಮುಖ್ಯಮಂತ್ರಿ

ನವದೆಹಲಿ: ನರೇಂದ್ರ ಮೋದಿ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿರುವ ಆದೇಶದಲ್ಲಿ, ರಾಜ್ಯಪಾಲ ಜ್ಯೋತಿ ಪ್ರಸಾದ್ ರಾಜಕೋವಾ ಅವರ ನಿರ್ಣಯವನ್ನು (ರಾಷ್ಟ್ರಪತಿ ಆಳ್ವಿಕೆ) ರದ್ದುಗೊಳಿಸಿ ಅರುಣಾಚಲ ಪ್ರದೇಶ ಮುಖ್ಯಮಂತ್ರಿ ನಬಾಮ್ ತೂಕಿ ಹಿಂದಿರುಗಲು ಅವಕಾಶ ನೀಡುವಂತೆ ಪರಮೋಚ್ಛ ನ್ಯಾಯಾಲಯ ಆದೇಶಿಸಿದೆ. 
ನ್ಯಾಯಾಧೀಶ ಜೆ ಎಸ್ ಖೇಕರ್ ಮುಂದಾಳತ್ವದ ವಿಭಾಗೀಯ ಪೀಠ ಕೈಗೊಂಡ ಒಮ್ಮತದ ನಿರ್ಣಯದಲ್ಲಿ ಡಿಸೆಂಬರ್ 15, 2015 ಕ್ಕೆ ಮುಂಚಿತವಾಗಿ ಇದ್ದ ಸ್ಥಿತಿಯನ್ನು ಮರುಸ್ಥಾಪಿಸುವಂತೆ ಆದೇಶಿಸಿದೆ. 
ಖೇಕರ್ ಆದೇಶವನ್ನು ಒಪ್ಪಿ ನ್ಯಾಯಾಧೀಶರಾದ ದೀಪಕ್ ಮಿಶ್ರಾ ಮತ್ತು ಮದನ್ ಬಿ ಲೋಕುರ್ ಹೆಚ್ಚುವರಿ ಕಾರಣಗಳನ್ನು ನೀಡಿ ಮುಖ್ಯಮಂತ್ರಿ ಹಿಂದಿರುಗಲು ಹಾದಿ ಸುಗಮಗೊಳಿಸಿದ್ದಾರೆ. 
ಸುಪ್ರೀಂ ಕೋರ್ಟ್ ತೀರ್ಪು ಐತಿಹಾಸಿಕ, ಪ್ರಜಾಪ್ರಭುತ್ವವನ್ನು ರಕ್ಷಿಸಿದೆ: ತೂಕಿ
ಸುಪ್ರೀಂ ಕೋರ್ಟ್ ತೀರ್ಪಿಗೆ ಹರ್ಷ ವ್ಯಕ್ತಪಡಿಸಿರುವ  ಅರುಣಾಚಲ ಪ್ರದೇಶ ಮುಖ್ಯಮಂತ್ರಿಯಾಗಿ ಹಿಂದಿರುಗಲಿರುವ ನಬಾಮ್ ತೂಕಿ ಇದು ಐತಿಹಾಸಿಕ ತೀರ್ಪು ಎಂದಿದ್ದಾರೆ. "ಇಂದಿನ ಸುಪ್ರೀಂ ಕೋರ್ಟ್ ತೀರ್ಪು ಐತಿಹಾಸಿಕ. ದೇಶದಲ್ಲಿ ಆರೋಗ್ಯಕರ ಪ್ರಜಾಪ್ರಭುತ್ವ ಉಳಿಸಲು ಇದು ಮಾರ್ಗದರ್ಶನ ನೀಡಿದೆ" ಎಂದು ಸರ್ಕಾರವನ್ನು ಕೆಳಗಿಳಿಸುವ ಮುಂಚಿತವಾಗಿ ಮುಖ್ಯಮಂತ್ರಿಯಾಗಿದ್ದ ತೂಕಿ ಹೇಳಿದ್ದಾರೆ. 
"ಬಿಜೆಪಿ ಮುಖಂಡರು ಕಾನೂನುಬಾಹಿರವಾಗಿ ಚುನಾಯಿತ ಸರ್ಕಾರವನ್ನು ಕೆಳಗಿಳಿಸಲು ಪ್ರಯತ್ನಿಸಿದರು... ಅಪೆಕ್ಸ್ ಕೋರ್ಟ್ ತೀರ್ಪು ಅದನ್ನು ಅಮಾನ್ಯಗೊಳಿಸಿದೆ" ಎಂದು ತೂಕಿ ಹೇಳಿದ್ದಾರೆ. 
ಈ ಹಿಂದೆ ಉತ್ತರಾಖಾಂಡ್ ನಲ್ಲೂ ಸರ್ಕಾರವನ್ನು ವಜಾಗೊಳಿಸಿದ್ದ ಕೇಂದ್ರ ಸರ್ಕಾರದ ನಡೆಯನ್ನು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಗಳು ಖಂಡಿಸಿ ಅಲ್ಲಿನ ಸರ್ಕಾರ ಹಿಂದಿರುಗಲು ಆದೇಶ ನೀಡಿದ್ದವು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT