ಜವಳಿ ಖಾತೆ ಸಚಿವೆ ಸ್ಮೃತಿ ಇರಾನಿ 
ಪ್ರಧಾನ ಸುದ್ದಿ

ಸಂಸತ್ ವ್ಯವಹಾರಗಳ ಸಂಪುಟ ಸಮಿತಿ ಪುನರ್ರಚನೆ; ಸ್ಮೃತಿ ಹೊರಕ್ಕೆ

ಸಂಸತ್ ವ್ಯವಹಾರಗಳ ಸಂಪುಟ ಸಮಿತಿಯನ್ನು (ಸಿಸಿಪಿಎ) ಪುನರ್ರಚಿಸಿದ್ದು ಸಚಿವೆ ಸ್ಮೃತಿ ಇರಾನಿ ಅವರನ್ನು ಸಂಪುಟದಿಂದ ಕೈಬಿಡಲಾಗಿದ್ದು, ಮಾನವ ಸಂಪನ್ಮೂಲ ಸಚಿವಾಲಯದ

ನವದೆಹಲಿ: ಸಂಸತ್ ವ್ಯವಹಾರಗಳ ಸಂಪುಟ ಸಮಿತಿಯನ್ನು (ಸಿಸಿಪಿಎ) ಪುನರ್ರಚಿಸಿದ್ದು ಸಚಿವೆ ಸ್ಮೃತಿ ಇರಾನಿ ಅವರನ್ನು ಸಂಪುಟದಿಂದ ಕೈಬಿಡಲಾಗಿದ್ದು, ಮಾನವ ಸಂಪನ್ಮೂಲ ಸಚಿವಾಲಯದ ಅವರ ಉತ್ತರಾಧಿಕಾರಿ ಪ್ರಕಾಶ್ ಜಾವಡೇಕರ್ ಅವರಿಗೆ ಸ್ಥಾನ ನೀಡಲಾಗಿದೆ. ಸ್ಮೃತಿ ಇರಾನಿ ಅವರನ್ನು ಸಮಿತಿಯ ವಿಶೇಷ ಆಹ್ವಾನಿತರಾಗಿ ಹಿಂಬಡ್ತಿ ನೀಡಲಾಗಿದೆ. ಈ ವಾರದ ಪ್ರಾರಂಭದಲ್ಲಿ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆಯಾಗಿ ರಾಜೀನಾಮೆ ನೀಡಿದ್ದ ನಜ್ಮಾ ಹೆಫ್ತುಲ್ಲಾ ಕೂಡ ಸಮಿತಿಯಿಂದ ಕೈಬಿಡಲಾಗಿದೆ. 
ಇತ್ತೀಚೆಗೆ ನಡೆದ ಸಂಪುಟ ಪುನರ್ರಚನೆಯಲ್ಲಿ ಸ್ಮೃತಿ ಇರಾನಿ ಅವರಿಗೆ ಎಚ್ ಆರ್ ಡಿ ಬದಲಿಗೆ ಜವಳಿ ಖಾತೆ ನೀಡಲಾಗಿತ್ತು. 
ಇದಕ್ಕೂ ಮೊದಲು ಈ ಸಮಿತಿಗೆ ಪ್ರಕಾಶ್ ಜಾವಡೇಕರ್ ವಿಶೇಷ ಆಹ್ವಾನಿತರಾಗಿದ್ದರು. ನೂತನ ಕಾನೂನು ಮಂತ್ರಿ ರವಿಶಂಕರ್ ಪ್ರಸಾದ್ ಈ ಸಮಿತಿಯಲ್ಲಿ ಡಿ ವಿ ಸದಾನಂದ ಗೌಡ ಅವರನ್ನು ಬದಲಿಸಿದ್ದಾರೆ. 
ಹಾಗೆಯೇ ರಾಜೀವ್ ಪ್ರತಾಪ್ ರೂಡಿ ಅವರನ್ನು ಎಸ್ ಎಸ್ ಅಹ್ಲುವಾಲಿಯಾ ಬದಲಿಸಿದ್ದಾರೆ. ನೂತನವಾಗಿ ಸಚಿವರಾಗಿರುವ ಪಿ ಪಿ ಚೌಧರಿ ವಿಶೇಷ ಆಹ್ವಾನಿತರಾಗಿದ್ದಾರೆ. 
ಗೃಹ ಸಚಿವ ರಾಜನಾಥ್ ಸಿಂಗ್ ಸಿಸಿಪಿಎ ಮುಂದಾಳತ್ವ ವಹಿಸಿದ್ದು ಮೂವರು ವಿಶೇಷ ಆಹ್ವಾನಿತರು ಸೇರಿದಂತೆ ಈ ಸಮಿತಿಯಲ್ಲಿ 11 ಜನ ಸದಸ್ಯರಿದ್ದಾರೆ. ಸಂಸತ್ ಸದನಗಳ ದಿನಾಂಕ ಗೊತ್ತುಪಡಿಸಲು ಶಿಫಾರಸ್ಸು ಮಾಡುವುದು ಈ ಸಮಿತಿಯೇ. 
ಸುಶ್ಮಾ ಸ್ವರಾಜ್, ಅರುಣ್ ಜೇಟ್ಲಿ, ಎಂ ವೆಂಕಯ್ಯ ನಾಯ್ಡು, ರಾಮ್ ವಿಲಾಸ್ ಪಾಸ್ವಾನ್ ಮತ್ತು ಅನಂತ ಕುಮಾರ್ ಈ ಸಮಿತಿಯ ಇತರ ಸದಸ್ಯರು ಹಾಗೂ ಮುಕ್ತಾರ್ ಅಬ್ಬಾಸ್ ನಕ್ವಿ ಮತ್ತೊಬ್ಬ ವಿಶೇಷ ಆಹ್ವಾನಿತ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel