ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಒಳಾಂಗಣ ಪ್ರದೇಶಗಳಲ್ಲಿ ಉಳಿಯುವಂತೆ ಭಾರತೀಯರಿಗೆ ಟರ್ಕಿ ಭಾರತೀಯ ರಾಯಭಾರಿ ಕಚೇರಿ ಸಲಹೆ

ಟರ್ಕಿಯಲ್ಲಿ ಸೇನಾ ದಂಗೆಯಿಯಿಂದ ಎದ್ದಿರುವ ಗಲಭೆಯಲ್ಲಿ ಅಲ್ಲಿ ನೆಲೆಸಿರುವ ಭಾರತೀಯರ ಸುರಕ್ಷತೆಗೆ ಟರ್ಕಿ ರಾಯಭಾರ ಕಚೇರಿ ಮುಂದಾಗಿದೆ. ಸೇನಾ ದಂಗೆಯ ಪರಿಸ್ಥಿತಿ

ಆಂಕಾರ/ನವದೆಹಲಿ: ಟರ್ಕಿಯಲ್ಲಿ ಸೇನಾ ದಂಗೆಯಿಯಿಂದ ಎದ್ದಿರುವ ಗಲಭೆಯಲ್ಲಿ ಅಲ್ಲಿ ನೆಲೆಸಿರುವ ಭಾರತೀಯರ ಸುರಕ್ಷತೆಗೆ ಟರ್ಕಿ ರಾಯಭಾರ ಕಚೇರಿ ಮುಂದಾಗಿದೆ. ಸೇನಾ ದಂಗೆಯ ಪರಿಸ್ಥಿತಿ ತಿಳಿಯಾಗುವವರೆಗೆ ಸಾರ್ವಜನಿಕ ಪ್ರದೇಶಗಳಿಗೆ ಬರದಂತೆ ಹಾಗೂ ಒಳಾಂಗಣ ಪ್ರದೇಶಗಳಲ್ಲಿ ಉಳಿಯುವಂತೆ ಭಾರತೀಯರಿಗೆ ರಾಯಭಾರ ಕಚೇರಿ ಸಲಹೆ ನೀಡಿದೆ. ಅಲ್ಲದೆ ಸಹಾಯಕ್ಕಾಗಿ ತುರ್ತು ಸಹಾಯವಾಣಿಯನ್ನು ಕೂಡ ಸ್ಥಾಪಿಸಲಾಗಿದೆ. 
"ಆಂಕಾರದಲ್ಲಿರುವ ನಮ್ಮ ರಾಯಭಾರಿ ಕಚೇರಿ ಟರ್ಕಿಯಲ್ಲಿರುವ ಎಲ್ಲ ಭಾರತೀಯರಿಗೆ ಸೂಚಿಸುವುದೇನೆಂದರೆ ಪರಿಸ್ಥಿತಿ ತಿಳಿಯಾಗುವವರೆಗೆ ಸಾರ್ವಜನಿಕ ಪ್ರದೇಶಗಳಿಂದ ದೂರವಿರಿ ಮತ್ತು ಒಳಾಂಗಣ ಪ್ರದೇಶಗಳಲ್ಲಿ ಉಳಿಯಿರಿ" ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ವಿಕಾಸ್ ಸ್ವರೂಪ್ ಟ್ವೀಟ್ ಮಾಡಿದ್ದಾರೆ. 
ಭಾರತೀಯರಿಗಾಗಿ ಸ್ಥಾಪಿಸಲಾಗಿರುವ ಸಹಾಯವಾಣಿ ಇಂತಿವೆ. 
ಆಂಕಾರದಲ್ಲಿ: +905303142203
ಇಸ್ತಾನಬುಲ್ ನಲ್ಲಿ: +905305671095
ಶುಕ್ರವಾರ ರಾತ್ರಿ ಹೇಳಿಕೆ ಬಿಡುಗಡೆ ಮಾಡಿರುವ ಟರ್ಕಿ ಸೇನೆ ರಾಷ್ಟ್ರವನ್ನು ಸೇನಾಡಳಿತಕ್ಕೆ ಒಳಪಡಿಸಿರುವುದಾಗಿ ಹೇಳಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT