ವನ್ಯ ಜೀವಿಗಳ ಸಾವು ತಪ್ಪಿಸಲು ಕ್ರಮ: ಸ್ಪೀಡ್ ಬ್ರೇಕರ್ ಗಳಿಗಾಗಿ ಎನ್ ಟಿಸಿಎ ಯಿಂದ 10 ಲಕ್ಷ ರೂ. ಬಿಡುಗಡೆ 
ಪ್ರಧಾನ ಸುದ್ದಿ

ವನ್ಯ ಜೀವಿಗಳ ಸಾವು ತಪ್ಪಿಸಲು ಕ್ರಮ: ಸ್ಪೀಡ್ ಬ್ರೇಕರ್ ಗಳಿಗಾಗಿ ಎನ್ ಟಿಸಿಎ ಯಿಂದ 10 ಲಕ್ಷ ರೂ. ಬಿಡುಗಡೆ

ರಸ್ತೆ ಅಪಘಾತಗಳ ಬಗ್ಗೆ ನಡೆದಿರುವ ಸಂಶೋಧನೆ ಈಗ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ(ಎನ್ ಟಿಸಿಎ) ವನ್ನು ಎಚ್ಚೆತ್ತುಕೊಳ್ಳುವಂತೆ ಮಾಡಿದೆ.

ದಾಂಡೇಲಿ: ರಸ್ತೆ ಅಪಘಾತಗಳ ಬಗ್ಗೆ ನಡೆದಿರುವ ಸಂಶೋಧನೆ ಈಗ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ(ಎನ್ ಟಿಸಿಎ) ವನ್ನು ಎಚ್ಚೆತ್ತುಕೊಳ್ಳುವಂತೆ ಮಾಡಿದೆ.  ದಾಂಡೇಲಿ ಅಣಶಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಸ್ಪೀಡ್  ಬ್ರೇಕರ್ ಗಳನ್ನು ಅಳವಡಿಸಲು ಎನ್ ಟಿಎ ಅನುದಾನ ಬಿಡುಗಡೆ ಮಾಡಿದೆ.  

ಡಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿಯ ಪ್ರಕಾರ 10 ಲಕ್ಷ ರೂಪಾಯಿಯನ್ನು ಎನ್ ಟಿಎ ಬಿಡುಗಡೆ ಮಾಡಿದ್ದು, ದಾಂಡೇಲಿ ಅಣಶಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರೋಡ್ ಹಂಪ್ ಗಳನ್ನು ನಿರ್ಮಾಣ ಮಾಡಲಾಗುತ್ತದೆ. ಈ ಪ್ರದೇಶದಲ್ಲಿ ಒಂದು ರಾಷ್ಟ್ರೀಯ ಹೆದ್ದಾರಿ ಹಾಗೂ ನಾಲ್ಕು ರಾಜ್ಯ ಹೆದ್ದಾರಿಗಳಿದ್ದು, ಅಪಘಾತಗಳಿಂದಾಗಿ ವನ್ಯ ಜೀವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಾವಿಗೀಡಾಗಿವೆ. ಚಿರತೆ, ಮುಳ್ಳುಹಂದಿ, ಸಾಂಬಾರ್ ನಂತಹ ಪ್ರಾಣಿಗಳು ಸಾವಿಗೀಡಾಗಿರುವುದು ವರದಿಯಾದರೆ, ಕೆಲವೊಮ್ಮೆ  ಕಾಳಿಂಗ ಸರ್ಪ, ಮಾನಿಟರ್ ಹಲ್ಲಿ ಯಂತಹ ಸಣ್ಣ ಪ್ರಾಣಿಗಳು ಅಪಘಾತದಲ್ಲಿ ಮೃತಪಟ್ಟಿರುವುದು ವರದಿಯಾಗುವುದೇ ಇಲ್ಲ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ರಸ್ತೆ ಅಪಘಾತದಲ್ಲಿ ವನ್ಯ ಜೀವಿಗಳು ಸಾವನ್ನಪ್ಪುವುದನ್ನು ತಡೆಗಟ್ಟಲು ಸ್ಪೀಡ್ ಬ್ರೇಕರ್ ಗಳನ್ನು ನಿರ್ಮಿಸಲು 10 ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT