ಸ್ವಾತಿ ಕೊಲೆ ಆರೋಪಿ ರಾಮ್ ಕುಮಾರ್ ನನ್ನು ಮೆಜೆಸ್ಟ್ರೇಟ್ ಮುಂದೆ ಹಾಜರು ಪಡಿಸುವಾಗ 
ಪ್ರಧಾನ ಸುದ್ದಿ

ರಾಮ್ ಕುಮಾರ್ ಕುತ್ತಿಗೆ ಇರಿದಿದ್ದು ಪೊಲೀಸರೇ; ಸ್ವಾತಿ ಕೊಲೆ ಆರೋಪಿ ತಂದೆ ಹೇಳಿಕೆ

ಚೆನೈ ಐ ಟಿ ಉದ್ಯೋಗಿ ಸ್ವಾತಿ ಕೊಲೆಯ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದ್ದು, ಕೊಲೆ ಆರೋಪಿ ರಾಮ್ ಕುಮಾರ್ ಅವರ ತಂದೆ ಪರಮಶಿವನ್ ತಿರುನೆಲ್ವೇಲಿಯ ಸೆಂಗೋಟ್ಟಿ ಪೊಲೀಸ್

ತಿರುನೆಲ್ವೇಲಿ: ಚೆನೈ ಐ ಟಿ ಉದ್ಯೋಗಿ ಸ್ವಾತಿ ಕೊಲೆಯ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದ್ದು, ಕೊಲೆ ಆರೋಪಿ ರಾಮ್ ಕುಮಾರ್ ಅವರ ತಂದೆ ಪರಮಶಿವನ್ ತಿರುನೆಲ್ವೇಲಿಯ ಸೆಂಗೋಟ್ಟಿ ಪೊಲೀಸ್ ಠಾಣೆಗೆ ಮಂಗಳವಾರ ಪೆಟಿಶನ್ ನೀಡಿದ್ದು, ತಮ್ಮ ಮಗನನ್ನು ಪೊಲೀಸರು ಹಿಡಿಯುವಾಗ ಅವನ ಕತ್ತು ಕೊಯ್ದರು ಎಂದು ಆರೋಪಿಸಿದ್ದಾರೆ. ಈ ಪೊಲೀಸರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ. 
ಈ ಅರ್ಜಿಯಲ್ಲಿ ಪರಮಶಿವನ್ ಹೇಳಿರುವಂತೆ, ಜುಲೈ 1 ರ ರಾತ್ರಿ ಸೆಂಗೋಟ್ಟೈ ಬಳಿಯ ಮೀನಾಕ್ಷಿಪುರಂನ ತಮ್ಮ ಮನೆಯ ಕದವನ್ನು ಟೀಶರ್ಟ್ ಹಾಕಿದ್ದ ಇಬ್ಬರು ಬಡಿದರು. ನಾನು ಕದ ತೆರೆದಾಗ ಅವರು ಪರಿಚಯಿಸಿಕೊಂಡು ಇದು ಮುತ್ತುಕುಮಾರ್ ಅವರ ಮನೆಯೇ ಎಂದು ಕೇಳಿದರು. ಆಗ ಪರಮಶಿವನ್ ತಮ್ಮ ಮಗನ ಹೆಸರು ರಾಮಕುಮಾರ್ ಎಂದು ತಿಳಿಸಿದಾಗ ಹಿಂಬದಿ ಬಾಗಿಲಿನಿಂದ ಬಂದ ಕೆಲವು ಪೊಲೀಸರು ನನ್ನ ಮಗ ಕತ್ತು ಕೊಯ್ದುಕೊಂಡಿದ್ದಾನೆ ಎಂದು ತಿಳಿಸಿದರು ಎಂದು ಹೇಳಿದ್ದಾರೆ. 
ಆಗ ತಮ್ಮ ಕುಟುಂಬ ಸದಸ್ಯರು ಹಿಂಭಾಗಕ್ಕೆ ತೆರಳಿದಾಗ ರಾಮ್ ಕುಮಾರ್ ಕತ್ತಿಗೆ ಗಾಯವಾಗಿತ್ತು ಹಾಗೂ ಪೊಲೀಸ್ ಒಬ್ಬರು ಅವನನ್ನು ಹಿಡಿದಿದ್ದರು ಎಂದು ತಿಳಿಸಿದ್ದಾರೆ. "ಪೊಲೀಸ್ ಒಬ್ಬರ ಕೈಮೇಲೆ ರಕ್ತದ ಕಲೆ ಇತ್ತು" ಎಂದು ಕೂಡ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮನ್ರೇಗಾ ಹೆಸರು ಬದಲಾವಣೆಗೆ ವಿರೋಧ: ನಾಳೆ ಕಾಂಗ್ರೆಸ್​ನಿಂದ ರಾಜಭವನ ಚಲೋ- DCM ಡಿಕೆ ಶಿವಕುಮಾರ್

T20 ವಿಶ್ವಕಪ್‌ಗೂ ಮುನ್ನ PAK ಹೊಸ ಆಟ: ಭಾರತದ ವಿರುದ್ಧದ ಪಂದ್ಯ ಬಹಿಷ್ಕರಿಸುವ ಬೆದರಿಕೆ!

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ಸಿದ್ದರಾಮಯ್ಯ ಆಕ್ರೋಶ ಬೆನ್ನಲ್ಲೇ​ ರಾಜೀವ್ ಗೌಡ ಬಂಧಿಸಿದ ಪೊಲೀಸರು!

News headlines 26-01-2026| R-Day: ಸರ್ಕಾರದ ಭಾಷಣ ಸಂಪೂರ್ಣ ಓದಿದ ರಾಜ್ಯಪಾಲರು; ಶತಾವಧಾನಿ ಗಣೇಶ್ ಸೇರಿ ರಾಜ್ಯದ 8 ಸಾಧಕರಿಗೆ ಪದ್ಮ ಪ್ರಶಸ್ತಿ; ಶಿವಮೊಗ್ಗ-ಭದ್ರಾವತಿ ರಸ್ತೆಯಲ್ಲಿ ಭೂಕುಸಿತ: ಬದಲಿ ಸಂಚಾರ ಮಾರ್ಗ

ಭಾರತದಲ್ಲಿ ಹಿಂದೂಗಳಿಂದಾಗಿ ಮುಸ್ಲಿಮರು ಸುರಕ್ಷಿತವಾಗಿದ್ದಾರೆ: ಅಸ್ಸಾಂ ಚುನಾವಣೆಗೂ ಮುನ್ನ ಮೌಲಾನಾ ಬದ್ರುದ್ದೀನ್ ಹೇಳಿಕೆ!

SCROLL FOR NEXT