ವಿಜಯ ಕಾಂತ್ 
ಪ್ರಧಾನ ಸುದ್ದಿ

ಮಾನನಷ್ಟ ಮೊಕದ್ದಮೆಗಳಿಂದ ವಿಜಯ ಕಾಂತ್ ಗೆ ಸಂಕಷ್ಟ

ಡಿಎಂ ಡಿಕೆ ಮುಖ್ಯಸ್ಥ ವಿಜಯ್ ಕಾಂತ್ ಮತ್ತು ಅವರ ಪತ್ನಿ ಪ್ರೇಮಲತಾ ಗೆ ಮಾನನಷ್ಟ ಮೊಕದ್ದಮೆಯಿಂದಾಗಿ ಸಂಕಷ್ಟ ಎದುರಾಗಿದೆ...

ತ್ರಿಪುರ್: ಡಿಎಂ ಡಿಕೆ ಮುಖ್ಯಸ್ಥ ವಿಜಯ್ ಕಾಂತ್ ಮತ್ತು ಅವರ ಪತ್ನಿ ಪ್ರೇಮಲತಾ ಗೆ ಮಾನನಷ್ಟ ಮೊಕದ್ದಮೆಯಿಂದಾಗಿ ಸಂಕಷ್ಟ ಎದುರಾಗಿದೆ.

ನವೆಂಬರ್ 2015 ರಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಮುಖ್ಯಮಂತ್ರಿ ಜಯಲಲಿತಾ ವಿರುದ್ಧ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದ ಆರೋಪದ ಮೇಲೆ ಫೆಬ್ರವರಿ 29 ರಂದು ವಿಜಯ ಕಾಂತ್ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಾಗಿತ್ತು.

ಈ ಸಂಬಂಧ ಕೋರ್ಟ್ ಗೆ ಹಾಜರಾಗುವಂತೆ ಸ್ಥಳೀಯ ನ್ಯಾಯಾಲಯ ಸಮನ್ಸ್ ನೀಡಿತ್ತು. ಆದರೆ ದಂಪತಿ ಯಾವ ನೋಟಿಸ್ ಗೂ ಉತ್ತರಿಸಿರಲಿಲ್ಲ, ಇದರಿಂದ ಅಸಮಾಧಾನ ಗೊಂಡಿರುವ ನ್ಯಾಯಾಲಯ ದಂಪತಿ ವಿರುದ್ಧ ವಾರೆಂಟ್ ಜಾರಿ ಮಾಡಿದೆ.

ನ್ಯಾಯಮೂರ್ತಿ ಅಲಮೇಲು ನಟರಾಜನ್ ದಂಪತಿ ವಿರುದ್ಧ ವಾರೆಂಟ್ ಜಾರಿಗೊಳಿಸಿ ಆಗಸ್ಚ್ 8 ಕ್ಕೆ ವಿಚಾರಣೆ ಮುಂದೂಡಿದ್ದಾರೆ.

ಇನ್ನು ವಿಜಯ್ ಕಾಂತ್ ಪತ್ನಿ ಪ್ರೇಮಲತಾ ಅವರ ವಿರುದ್ಧ ಇದ್ದ ಮಾನನಷ್ಟ ಮೊಕದ್ದಮೆ ಪ್ರಕರಣ ಸಂಬಂಧ ಅವರು ಸ್ಥಳೀಯ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಲೋಕಭವನಕ್ಕೆ ಆಗಮಿಸಿದ ಸಿದ್ದರಾಮಯ್ಯ, ಶೀಘ್ರದಲ್ಲೇ ರಾಜೀನಾಮೆ

ಮುಂದಿನ CM ಡಿಕೆ.ಶಿವಕುಮಾರ್: ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ, ಅಂದು-ಇಂದು-ಎಂದೆಂದೂ ಒಗ್ಗಟ್ಟೇ ನಮ್ಮ ಶಕ್ತಿ- ಕಾಂಗ್ರೆಸ್

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಕಣ್ಣೀರು ಹಾಕಿದ ಸಚಿವ ಸಂತೋಷ್ ಲಾಡ್; Video

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ನಿರ್ಗಮನ: ಕರ್ನಾಟಕದಲ್ಲಿ ಕಾಂಗ್ರೆಸ್‌ನ 'ಅಹಿಂದ ಮತಬ್ಯಾಂಕ್' ಮೇಲೆ ಪರಿಣಾಮ?

SCROLL FOR NEXT