ಲೋಕಸಭೆಯಲ್ಲಿ ಕರ್ನಾಟಕದ ಸಂಸದರು (ಚಿತ್ರಕೃಪೆ: ಲೋಕಸಭಾ ಟಿವಿ) 
ಪ್ರಧಾನ ಸುದ್ದಿ

ಲೋಕಸಭೆಯಲ್ಲೂ "ಮಹದಾಯಿ" ಕೋಲಾಹಲ: ವಿವಾದಕ್ಕೆ ಸೋನಿಯಾ ಕಾರಣ ಎಂದ ಸುರೇಶ್ ಅಂಗಡಿ

ಕರ್ನಾಟಕದಾದ್ಯಂತ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿರುವ ಮಹದಾಯಿ ಮಧ್ಯಂತರ ಆದೇಶ ಇದೀಗ ಸಂಸತ್ತ್ ಕಲಾಪದಲ್ಲೂ ಕೋಲಾಹಲಕ್ಕೆ ಕಾರಣವಾಗಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ಸಂಸದರ ಕೆಸರೆರಚಾಟಕ್ಕೆ ಕಾರಣವಾಗಿದೆ.

ನವದೆಹಲಿ: ಕರ್ನಾಟಕದಾದ್ಯಂತ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿರುವ ಮಹದಾಯಿ ಮಧ್ಯಂತರ ಆದೇಶ ಇದೀಗ ಸಂಸತ್ತ್ ಕಲಾಪದಲ್ಲೂ ಕೋಲಾಹಲಕ್ಕೆ ಕಾರಣವಾಗಿದ್ದು, ಕಾಂಗ್ರೆಸ್  ಮತ್ತು ಬಿಜೆಪಿ ಸಂಸದರ ಕೆಸರೆರಚಾಟಕ್ಕೆ ಕಾರಣವಾಗಿದೆ.

ಲೋಕಸಭೆಯಲ್ಲಿ ಇಂದು ಈ ಬಗ್ಗೆ ವಿಷಯ ಪ್ರಸ್ತಾಪಿಸಿ ಮಾತನಾಡಿದ ಬಿಜೆಪಿ ಸಂಸದ ಸುರೇಶ್ ಅಂಗಡಿ ಅವರು, ನ್ಯಾಯಾಧಿಕರಣದ ತೀರ್ಪು ಕರ್ನಾಟಕಕ್ಕೆ ಮಾರಕವಾಗಿದೆ. ಹಲವು ಜಿಲ್ಲೆಗಳ  ಜನರು ಕುಡಿಯುವ ನೀರಿಲ್ಲದೆ ಪರಿತಪಿಸುತ್ತಿದ್ದಾರೆ. ಇಂತಹುದೊಂದು ಪರಿಸ್ಥಿಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಅವರೇ ಕಾರಣ. ಯುಪಿಎ ಆಡಳಿತವಿದ್ದ ಸಂದರ್ಭದಲ್ಲಿ ರಾಜ್ಯದ ಜನರ  ಬೇಡಿಕೆಯನ್ನು ಕಡೆಗಣಿಸಿದ್ದರು ಎಂದು ಆರೋಪಿಸಿದರು.

ಇದಕ್ಕೆ ಸದನದಲ್ಲೇ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್ ಸಂಸದರು ಸುರೇಶ್ ಅಂಗಡಿ ಹೇಳಿಕೆಯನ್ನು ಖಂಡಿಸಿದರು. ಅಲ್ಲದೆ ಬಿಜೆಪಿ ಸಂಸದರು ಪ್ರಕರಣದ ಹಾದಿ ತಪ್ಪಿಸಲು  ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು. ಈ ಬಗ್ಗೆ ಮಾತನಾಡಿದ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಂಸದ ಪ್ರಕಾಶ್ ಹುಕ್ಕೇರಿ ಅವರು, ಸುರೇಶ್ ಅಂಗಡಿ ಅವರ ಹೇಳಿಕೆ  ದುರುದ್ದೇಶಪೂರ್ವಕವಾಗಿದ್ದು, ವಿನಾಕಾರಣ ಸೋನಿಯಾ ಗಾಂಧಿ ಅವರ ಹೆಸರನ್ನು ತರಲಾಗಿದೆ. ಇದು ರಾಜ್ಯದ ಸಮಸ್ಯೆಯಾಗಿದ್ದು, ಇಲ್ಲಿ ಯಾವುದೇ ರಾಜಕೀಯ ಮಾಡದೇ ಕೇಂದ್ರ ಸರ್ಕಾರ  ಸಮಸ್ಯೆ ಬಗೆ ಹರಿಸಬೇಕು ಎಂದು ಹೇಳಿದರು.

ಈ ವೇಳೆ ಜೆಡಿಎಸ್ ಸಂಸದ ಪುಟ್ಟರಾಜು ಅವರು ಮಾತನಾಡಿ, ಸಮಸ್ಯೆ ತೀರ ಗಂಭೀರವಾಗಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕು  ಎಂದು ಆಗ್ರಹಿಸಿದರು. ಪುಟ್ಟರಾಜು ಅವರ ಆಗ್ರಹಕ್ಕೆ ಸಂಸದ ಶ್ರೀರಾಮುಲು, ಪ್ರಕಾಶ್ ಹುಕ್ಕೇರಿ ಸೇರಿದಂತೆ ಇತರೆ ಕರ್ನಾಟಕದ ಸಂಸದರು ಧನಿಗೂಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT