ಲಕ್ಷಿಕಾಂತ್ ಪರ್ಸೆಕರ್ 
ಪ್ರಧಾನ ಸುದ್ದಿ

'ಬಿಗ್ ಬ್ರದರ್' ಕರ್ನಾಟಕ ಹಿಂಸೆ ನಿಲ್ಲಿಸಿ, ಮಹದಾಯಿ ತೀರ್ಪ ಒಪ್ಪಿಕೊಳ್ಳಿ: ಗೋವಾ

ಮಹದಾಯಿ ನ್ಯಾಯಾಧಿಕರಣ ಮಧ್ಯಂತರ ತೀರ್ಪು ವಿರೋಧಿ ರಾಜ್ಯದಲ್ಲಿ ತೀವ್ರ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಗೋವಾ ಸರ್ಕಾರ...

ಪಣಜಿ: ಮಹದಾಯಿ ನ್ಯಾಯಾಧಿಕರಣ ಮಧ್ಯಂತರ ತೀರ್ಪು ವಿರೋಧಿ ರಾಜ್ಯದಲ್ಲಿ ತೀವ್ರ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಗೋವಾ ಸರ್ಕಾರ ರಾಜ್ಯಕ್ಕೆ ಆಗಮಿಸುತ್ತಿದ್ದ ಗೋವಾ ಸಾರಿಗೆ ಸಂಸ್ಥೆಯ ಬಸ್ ಗಳ ಸಂಚಾರವನ್ನು ಮತ್ತೆ ಎರಡು ದಿನಗಳ ಕಾಲ ಸ್ಥಗಿತಗೊಳಿಸಿದೆ.
ಬಿಗ್ ಬ್ರದರ್ ಕರ್ನಾಟಕ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ನಿಲ್ಲಿಸಿ. ಮಹದಾಯಿ ನ್ಯಾಯಾಧಿಕರಣದ ತೀರ್ಪನ್ನು ಒಪ್ಪಿಕೊಳ್ಳಿ ಎಂದು ಗೋವಾ ಮುಖ್ಯಮಂತ್ರಿ ಲಕ್ಷಿಕಾಂತ್ ಪರ್ಸೆಕರ್ ಅವರು ಹೇಳಿದ್ದಾರೆ.
ನಾವು ಕರ್ನಾಟಕಕ್ಕೆ ಸಂಚರಿಸುತ್ತಿದ್ದ ಗೋವಾ ಸಾರಿಗೆ ಸಂಸ್ಥೆಯ ಬಸ್ ಗಳ ಸೇವೆಯನ್ನು ಸ್ಥಗಿತಗೊಳಿಸಿದ್ದೇವೆ. ಭಯದಿಂದ ಅಲ್ಲ. ಆದರೆ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪರ್ಸೆಕರ್ ಅವರು ಸ್ಪಷ್ಟಪಡಿಸಿದ್ದಾರೆ.
ಗೋವಾ ಚಿಕ್ಕ ಸಹೋದರನಿದ್ದಂತೆ. ಕರ್ನಾಟಕ ನಮಗೆ ಹಿರಿಯ ಸಹೋದರ. ಹೀಗಾಗಿ ಈ ಚಿಕ್ಕ ಸಹೋದರನ ಭಾವನೆಗಳನ್ನು ಕರ್ನಾಟಕ ಅರ್ಥ ಮಾಡಿಕೊಳ್ಳಬೇಕು ಎಂದು ಗೋವಾ ಸಿಎಂ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

SCROLL FOR NEXT