ಲಕ್ಷಿಕಾಂತ್ ಪರ್ಸೆಕರ್ 
ಪ್ರಧಾನ ಸುದ್ದಿ

'ಬಿಗ್ ಬ್ರದರ್' ಕರ್ನಾಟಕ ಹಿಂಸೆ ನಿಲ್ಲಿಸಿ, ಮಹದಾಯಿ ತೀರ್ಪ ಒಪ್ಪಿಕೊಳ್ಳಿ: ಗೋವಾ

ಮಹದಾಯಿ ನ್ಯಾಯಾಧಿಕರಣ ಮಧ್ಯಂತರ ತೀರ್ಪು ವಿರೋಧಿ ರಾಜ್ಯದಲ್ಲಿ ತೀವ್ರ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಗೋವಾ ಸರ್ಕಾರ...

ಪಣಜಿ: ಮಹದಾಯಿ ನ್ಯಾಯಾಧಿಕರಣ ಮಧ್ಯಂತರ ತೀರ್ಪು ವಿರೋಧಿ ರಾಜ್ಯದಲ್ಲಿ ತೀವ್ರ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಗೋವಾ ಸರ್ಕಾರ ರಾಜ್ಯಕ್ಕೆ ಆಗಮಿಸುತ್ತಿದ್ದ ಗೋವಾ ಸಾರಿಗೆ ಸಂಸ್ಥೆಯ ಬಸ್ ಗಳ ಸಂಚಾರವನ್ನು ಮತ್ತೆ ಎರಡು ದಿನಗಳ ಕಾಲ ಸ್ಥಗಿತಗೊಳಿಸಿದೆ.
ಬಿಗ್ ಬ್ರದರ್ ಕರ್ನಾಟಕ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ನಿಲ್ಲಿಸಿ. ಮಹದಾಯಿ ನ್ಯಾಯಾಧಿಕರಣದ ತೀರ್ಪನ್ನು ಒಪ್ಪಿಕೊಳ್ಳಿ ಎಂದು ಗೋವಾ ಮುಖ್ಯಮಂತ್ರಿ ಲಕ್ಷಿಕಾಂತ್ ಪರ್ಸೆಕರ್ ಅವರು ಹೇಳಿದ್ದಾರೆ.
ನಾವು ಕರ್ನಾಟಕಕ್ಕೆ ಸಂಚರಿಸುತ್ತಿದ್ದ ಗೋವಾ ಸಾರಿಗೆ ಸಂಸ್ಥೆಯ ಬಸ್ ಗಳ ಸೇವೆಯನ್ನು ಸ್ಥಗಿತಗೊಳಿಸಿದ್ದೇವೆ. ಭಯದಿಂದ ಅಲ್ಲ. ಆದರೆ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪರ್ಸೆಕರ್ ಅವರು ಸ್ಪಷ್ಟಪಡಿಸಿದ್ದಾರೆ.
ಗೋವಾ ಚಿಕ್ಕ ಸಹೋದರನಿದ್ದಂತೆ. ಕರ್ನಾಟಕ ನಮಗೆ ಹಿರಿಯ ಸಹೋದರ. ಹೀಗಾಗಿ ಈ ಚಿಕ್ಕ ಸಹೋದರನ ಭಾವನೆಗಳನ್ನು ಕರ್ನಾಟಕ ಅರ್ಥ ಮಾಡಿಕೊಳ್ಳಬೇಕು ಎಂದು ಗೋವಾ ಸಿಎಂ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಪಾಕಿಸ್ತಾನದ ಪ್ರಧಾನಿ ಮತ್ತು ಸೇನಾಧಿಕಾರಿ ಶ್ರೇಷ್ಠ ನಾಯಕರು, ನನಗೆ ಪಾಕ್ ಜೊತೆ ಒಳ್ಳೆ ಬಾಂಧವ್ಯವಿದೆ': ಆಫ್ಘಾನಿಸ್ತಾನ ಉದ್ವಿಗ್ನತೆ ಮಧ್ಯೆ ಹಾಡಿಹೊಗಳಿದ Donald Trump-Video

'ನೀವೇ CM ಆಗಿ, ಇಲ್ಲದಿದ್ದರೇ ದಲಿತರನ್ನು ಮುಖ್ಯಮಂತ್ರಿ ಮಾಡಿ: ಅಧಿಕಾರವಿದ್ದರೂ ಅವಕಾಶ ನೀಡದಿದ್ದರೇ ಇತಿಹಾಸ ನಿಮ್ಮನ್ನು ಶಪಿಸುತ್ತೆ'

ನೇಪಾಳದಲ್ಲಿ 2ನೇ ದಿನವೂ ಲ್ಯಾಂಡ್ ಆಗದ ವಿಮಾನ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರತಿಭಟನೆ, ಆಕ್ರೋಶ!

2nd PUC exam 2026-ಇಂದಿನಿಂದ ದ್ವಿತೀಯ ಪಿಯು ಪರೀಕ್ಷೆ-1: 7 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ, ಸಾವಿರಕ್ಕೂ ಅಧಿಕ ಮಕ್ಕಳಿಗೆ ನಿರಾಕರಣೆ

ಅಹಿಂದ ಉತ್ತರಾಧಿಕಾರಕ್ಕೆ ಜಾರಕಿಹೊಳಿ ಸಿದ್ದತೆ: ಹಿಂದುಳಿದ ವರ್ಗಗಳ ಚ್ಯಾಂಪಿಯನ್ ಪಟ್ಟಕ್ಕೆ 'ಸಾಹುಕಾರ್' ಸಮರ್ಥರೇ?

SCROLL FOR NEXT