ಜಿ.ಟಿ.ದೇವೇಗೌಡ, ಮಲ್ಲಕಾರ್ಜುನ್ ಖೂಬಾ, ವರ್ತೂರ್ ಪ್ರಕಾಶ್, ಬಿ.ಆರ್.ಪಾಟೀಲ್ 
ಪ್ರಧಾನ ಸುದ್ದಿ

ರಾಜ್ಯಸಭೆ ಚುನಾವಣೆ: 1 ಮತಕ್ಕೆ 5 ಕೋಟಿ ಡಿಮಾಂಡ್, ಸ್ಟಿಂಗ್ ಆಪರೇಷನ್ ನಲ್ಲಿ ಸಿಕ್ಕಿಬಿದ್ದ ರಾಜ್ಯದ ಶಾಸಕರು

ರಾಜ್ಯಸಭೆ ಚುನಾವಣೆಗೆ ಭರ್ಜರಿ ಕುದುರೆ ವ್ಯಾಪಾರ ನಡೆಯುತ್ತಿದ್ದು, ಕರ್ನಾಟಕದ ಶಾಸಕರು ತಮ್ಮ ಮತವನ್ನು ಮಾರಾಟಕ್ಕಿಟ್ಟಿರುವುದು ರಾಷ್ಟ್ರೀಯ...

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಭರ್ಜರಿ ಕುದುರೆ ವ್ಯಾಪಾರ ನಡೆಯುತ್ತಿದ್ದು, ಕರ್ನಾಟಕದ ಶಾಸಕರು ತಮ್ಮ ಮತವನ್ನು ಮಾರಾಟಕ್ಕಿಟ್ಟಿರುವುದು ರಾಷ್ಟ್ರೀಯ ಸುದ್ದಿವಾಹಿನಿಯೊಂದು ನಡೆಸಿದ ಕುಟುಕು ಕಾರ್ಯಾಚರಣೆಯಿಂದ ಬಹಿರಂಗವಾಗಿದೆ.
ಇಂಡಿಯಾ ಟುಡೇ ನಡೆಸಿದ ಕುಟುಕು ಕಾರ್ಯಾಚರಣೆಯಲ್ಲಿ ರಾಜ್ಯದ ನಾಲ್ವರು ಶಾಸಕರು ರಾಜ್ಯಸಭೆಯ ಅಭ್ಯರ್ಥಿಯೊಬ್ಬರಿಗೆ ಮತ ಹಾಕಲು ತಲಾ ಐದು ಕೋಟಿ ರುಪಾಯಿ ಡಿಮಾಂಡ್ ಮಾಡಿದ್ದಾರೆ.
ಕುಟುಕು ಕಾರ್ಯಾಚರಣೆಯಲ್ಲಿ ಕೋಲಾರ ಪಕ್ಷೇತರ ಶಾಸಕ ವರ್ತೂರ್ ಪ್ರಕಾಶ್, ಆಳಂದ್ ಕೆಜೆಪಿ ಶಾಸಕ ಬಿ.ಆರ್.ಪಾಟೀಲ್, ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹಾಗೂ ಬಸವಕಲ್ಯಾಣ ಜೆಡಿಎಸ್ ಶಾಸಕ ಮಲ್ಲಕಾರ್ಜುನ್ ಖೂಬಾ ಮತ ಹಾಕಲು ಐದು ಕೋಟಿ ರುಪಾಯಿ ಕೇಳುತ್ತಿರುವ ದೃಶ್ಯ ಸೆರೆಯಾಗಿದೆ.
ಇನ್ನು ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ವರ್ತೂರ್ ಪ್ರಕಾಶ್, ಸ್ಟಿಂಗ್ ಆಪರೇಷನ್ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದಿದ್ದಾರೆ.
ರಾಜ್ಯ ವಿಧಾನಸಭೆಯಿಂದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಜೂನ್ 11ರಂದು ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್ ಮೂರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೆ, ಜೆಡಿಎಸ್ ಬಿಜೆಪಿ ತಲಾ ಒಂದು ಅಭ್ಯರ್ಥಿಯನ್ನು ಕಣಕ್ಕಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT