ರಾಜೀನಾಮೆ ಸಲ್ಲಿಸಿದ ಮಹಾರಾಷ್ಟ್ರ ಕಂದಾಯ ಸಚಿವ ಏಕನಾಥ್ ಖಾಡ್ಸೆ 
ಪ್ರಧಾನ ಸುದ್ದಿ

ಮಹಾರಾಷ್ಟ್ರ ಸಚಿವ ಏಕನಾಥ್ ಖಾಡ್ಸೆ ರಾಜೀನಾಮೆ

ಹಗರಣದ ಸುಳಿಯಲ್ಲಿ ಸಿಕ್ಕಿದ್ದ ಮಹಾರಾಷ್ಟ್ರ ಕಂದಾಯ ಸಚಿವ ಏಕನಾಥ್ ಖಾಡ್ಸೆ, ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಮುಂಬೈ: ಹಗರಣದ ಸುಳಿಯಲ್ಲಿ ಸಿಕ್ಕಿದ್ದ ಮಹಾರಾಷ್ಟ್ರ ಕಂದಾಯ ಸಚಿವ ಏಕನಾಥ್ ಖಾಡ್ಸೆ, ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಇತ್ತೀಚೆಗಷ್ಟೇ, ಖಾಡ್ಸೆ ಅವರ ಅಕ್ರಮ ಭೂ ವ್ಯವಹಾರ ಹಾಗೂ ಭೂಗತ ಪಾತಕಿ ದಾವೂದ್ ಇಬ್ರಾಹಿಂನೊಂದಿಗೆ ಸಂಪರ್ಕ ಹೊಂದಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಮಹಾ ಬಿಜೆಪಿಯಿಂದ ವರದಿ ಕೇಳಿದ್ದರು.

ಅಲ್ಲದೆ, ಭೂಗತ ಪಾತಕಿ ದಾವೂದ್ ಇಬ್ರಾಹಿಂನೊಂದಿಗೆ ಸಂಪರ್ಕ ಹೊಂದಿರುವ ಮಹಾರಾಷ್ಟ್ರದ ಕಂದಾಯ ಸಚಿವ ಏಕನಾಥ್ ಖಾಡ್ಸೆ ಅವರನ್ನು ಕೂಡಲೇ ಬಂಧಿಸದಿದ್ದರೆ,  ಉಪವಾಸ ಸತ್ಯಾಗ್ರಹ ಕೈಗೊಳ್ಳುವೆ ಎಂದು ಆಮ್ ಆದ್ಮಿ ಪಕ್ಷದ ಮಾಜಿ ಸದಸ್ಯೆ ಅಂಜಲಿ ದಮಾನಿಯಾ ಕೂಡ ಎಚ್ಚರಿಸಿದ್ದರು.

ಆದುದರಿಂದ ಖಾಡ್ಸೆ ಜೊತೆಗೆ ಮಾತುಕತೆ ನಡೆಸಿದ್ದ ಮುಖ್ಯಮಂತ್ರಿ, ರಾಜೀನಾಮೆಯೇ ಸೂಕ್ತ ಎಂದು ಮನವೊಲಿಸಿದ್ದರು ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT