ಬುಲೆಟ್ ರೈಲು ಯೋಜನೆ 
ಪ್ರಧಾನ ಸುದ್ದಿ

ಭಾರತದ ಮೊದಲ ಬುಲೆಟ್ ರೈಲು ಯೋಜನೆಗೆ ಪ್ರಾರಂಭದಲ್ಲೇ ವಿಘ್ನ!

ಭಾರತದ ಮೊಲದ ಬುಲೆಟ್ ರೈಲು ಯೋಜನೆಗೆ ಪ್ರಾರಂಭದಲ್ಲೇ ವಿಘ್ನ ಎದುರಾಗಿದೆ.

ಮುಂಬೈ: ಭಾರತದ ಮೊಲದ ಬುಲೆಟ್ ರೈಲು ಯೋಜನೆಗೆ ಪ್ರಾರಂಭದಲ್ಲೇ ವಿಘ್ನ ಎದುರಾಗಿದೆ. ಮುಂಬೈ-ಅಹಮದಾಬಾದ್ ನದುವಿನ ಬುಲೆಟ್ ರೈಲು ಮಾರ್ಗ ನಿರ್ಮಾಣಕ್ಕಾಗಿ ಗುರುತಿಸಲಾಗಿರುವ ಪ್ರಮುಖ ಜಾಗವನ್ನು ನೀಡಲು ಮಹಾರಾಷ್ಟ್ರ ಸರ್ಕಾರ ತಕರಾರು ತೆಗೆದಿರುವುದೇ ಇದಕ್ಕೆ ಕಾರಣವಾಗಿದೆ. ಆಂಗ್ಲ ಪತ್ರಿಕೆಯೊಂದರ ವರದಿಯ ಪ್ರಕಾರ ಬುಲೆಟ್ ರೈಲು ಮಾರ್ಗದ ಪ್ರಮುಖ ನಿಲ್ದಾಣದ ನಿರ್ಮಾಣಕ್ಕಾಗಿ ಮುಂಬೈ ನ ಬಂದ್ರಾ-ಕುರ್ಲಾ ಕಾಂಪ್ಲೆಕ್ಸ್ ಬಳಿ ಜಾಗವನ್ನು ಗುರುತಿಸಲಾಗಿತ್ತು. ಆದರೆ ಈ ಪ್ರದೇಶದಲ್ಲಿ ಹಣಕಾಸು ಕೇಂದ್ರವನ್ನು ನಿರ್ಮಿಸುವ ಪ್ರಸ್ತಾವನೆ ಹೊಂದಲಾಗಿರುವುದರಿಂದ ಬಂದ್ರಾ- ಕುರ್ಲಾ ಬಳಿ ಗುರುತಿಸಲಾಗಿರುವ ಪ್ರದೇಶವನ್ನು ಬುಲೆಟ್ ರೈಲು ನಿಲ್ದಾಣ ನಿರ್ಮಾಣಕ್ಕೆ ನೀಡಲು ಸಾಧ್ಯವಿಲ್ಲ ಎಂದು ರೈಲ್ವೆ ಇಲಾಖೆಗೆ ಮಹಾರಾಷ್ಟ್ರ ಸರ್ಕಾರ ತಿಳಿಸಿದೆ.

ಬುಲೆಟ್ ರೈಲು ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ಜಪಾನ್ ನ ತಂಡ ಸಾಕಷ್ಟು ಸಂಶೋಧನೆ ನಡೆಸಿ ಬಿಕೆಸಿ ಬಳಿಯ ಪ್ರದೇಶವನ್ನು ಗುರುತಿಸಿತ್ತು. ಬುಲೆಟ್ ರೈಲು ನಿಲ್ದಾಣ ಸುರಂಗ ಮಾರ್ಗದಲ್ಲಿ ನಿರ್ಮಾಣವಾಗಲಿದೆ ಎಂದು ತಿಳಿದಿದ್ದರೂ ಮಹಾರಾಷ್ಟ್ರ ಸರ್ಕಾರ ನಿಲ್ದಾಣ ನಿರ್ಮಾಣಕ್ಕೆ ಜಾಗ ನೀಡಲು ನಿರಾಕರಿಸುತ್ತಿದೆ ಎಂಬ ವರದಿ ಪ್ರಕಟವಾಗಿದೆ.

ಬಿಕೆಸಿ ಬಳಿ ಬುಲೆಟ್ ರೈಲು ನಿಲ್ದಾಣ ನಿರ್ಮಾಣವಾಗುವುದರಿಂದ ಸುಮಾರು 10 ,000 ಸಾವಿರ ಕೋಟಿ ನಷ್ಟವಾಗಲಿದೆ ಎಂದು ಮಹಾರಾಷ್ಟ್ರ ಸರ್ಕಾರ ಅಂದಾಜಿಸಿದೆ. ಈ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೊಂದಿಗೆ ರೈಲ್ವೆ ಇಲಾಖೆ ಅಧಿಕಾರಿಗಳು ಚರ್ಚೆ ನಡೆಸಿದ್ದಾರೆ ಆದರೂ ಯಾವುದೇ ಉಪಯೋಗವಾಗಿಲ್ಲ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; 'ಆ' ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT