ಕಾಗೆ ಕುಳಿತಿದ್ದ ಸಿಎಂ ಹಳೆ ಕಾರು, ಬಲಚಿತ್ರದಲ್ಲಿ ಸಿಎಂ ಹೊಸ ಕಾರು 
ಪ್ರಧಾನ ಸುದ್ದಿ

ಕಾಗೆ ಕಾಟದಿಂದ ಕಾರು ಬದಲಾಯಿಸಿಲ್ಲ: ಸಿಎಂ ಸಿದ್ದರಾಮಯ್ಯ

ಮೂಢ ನಂಬಿಕೆಗಳನ್ನು ನಂಬುವುದಿಲ್ಲ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತಾವು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಕಾಗೆ ಕೂತಿದ್ದಕ್ಕಾಗಿ ಕಾರು...

ಬೆಂಗಳೂರು: ಮೂಢ ನಂಬಿಕೆಗಳನ್ನು ನಂಬುವುದಿಲ್ಲ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತಾವು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಕಾಗೆ ಕೂತಿದ್ದಕ್ಕಾಗಿ ಕಾರು ಬದಲಾವಣೆ ಮಾಡಿಲ್ಲ ಎಂದು ಮಂಗಳವಾರ ಸ್ಪಷ್ಟಪಡಿಸಿದ್ದಾರೆ. 
ಇಂದು ಬೆಳಗ್ಗೆ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ, ತಮ್ಮ ಕಾರು ಬದಲಿಸುವ ವಿಚಾರ ಎರಡು ತಿಂಗಳ ಹಿಂದಿನಿಂದ ನಡೆಯುತ್ತಿದೆ. ಆದರೆ ಈಗ ಕಾರಿಗೂ ಕಾಗೆಗೂ ಸಂಬಂಧ ಕಲ್ಪಿಸಲಾಗುತ್ತಿದೆ ಎಂದು ಹೇಳಿದರು.
ನಾನು ಬಳಸುವ ಸರ್ಕಾರಿ ಕಾರು ಈಗಾಗಲೇ ಎರಡು ಲಕ್ಷ ಕಿ.ಮೀ.ಗೂ ಹೆಚ್ಚು ಸಂಚರಿಸಿದೆ. ಜೊತೆಗೆ ಸ್ವಲ್ಪ ಮಟ್ಟಿನಲ್ಲಿ ತಾಂತ್ರಿಕ ಸಮಸ್ಯೆ ಇದ್ದುದರಿಂದ ಕಾರು ಬದಲಾವಣೆ ಮಾಡಬೇಕಾಯಿತು ಎಂದು ಸಿಎಂ ತಿಳಿಸಿದರು.
ನಾನು ಮೌಢ್ಯಗಳನ್ನು ನಂಬುವುದಿಲ್ಲ. ಒಂದು ವೇಳೆ ನಂಬುತ್ತಿದ್ದರೆ ಮುಖ್ಯಮಂತ್ರಿ ಸ್ಥಾನ ಹೋಗುತ್ತದೆ ಎಂಬ ಕಾರಣಕ್ಕೆ ಚಾಮರಾಜನಗರಕ್ಕೆ ಆರು ಬಾರಿ ಹೋಗುತ್ತಿರಲಿಲ್ಲ. ರಾಹುಕಾಲದಲ್ಲಿ ಬಜೆಟ್ ಮಂಡನೆಗೆ ಮುಂದಾಗುತ್ತಿರಲಿಲ್ಲ. ಅಷ್ಟೇ ಏಕೆ? ಅಮಾವಾಸ್ಯೆ ದಿನದಂದು (ಜುಲೈ 4) ವಿಧಾನ ಮಂಡಲ ಅಧಿವೇಶನಕ್ಕೆ ದಿನಾಂಕ ನಿಗದಿ ಮಾಡುತ್ತಿರಲಿಲ್ಲ ಎಂದರು. 
ಇದೇ ವೇಳೆ, ಸರ್ಕಾರ ಇನ್ನಾದರೂ ಜನರ ಬಳಿಗೆ ಹೋಗಲಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ಬರಗಾಗಲಕ್ಕೆ ತುತ್ತಾಗಿರುವ 16 ಜಿಲ್ಲೆಗಳಿಗೆ ಭೇಟಿ ನೀಡಿ  ಸಾರ್ವಜನಿಕರ ಅಹವಾಲು ಆಲಿಸಿದ್ದೇನೆ. ಯಾವ ಸಿಎಂ ಕೂಡ ಬರಗಾಲದ ಸಂದರ್ಭದಲ್ಲಿ ಇಷ್ಟು ಜಿಲ್ಲೆಗಳಿಗೆ ಹೋದ ಇತಿಹಾಸವಿಲ್ಲ. ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT