ಮಲ್ಲಿಕಾರ್ಜುನ ಖೂಬಾ 
ಪ್ರಧಾನ ಸುದ್ದಿ

ಮತಕ್ಕಾಗಿ ಲಂಚ: ಮಲ್ಲಿಕಾರ್ಜುನ ಖೂಬಾ ವಿರುದ್ಧ ದೂರು ದಾಖಲು

ರಾಷ್ಟ್ರೀಯ ಸುದ್ದಿ ವಾಹಿನಿಯೊಂದು ನಡೆಸಿದ ಕುಟುಕು ಕಾರ್ಯಾಚರಣೆಯಲ್ಲಿ ರಾಜ್ಯಸಭೆ ಚುನಾವಣೆಯಲ್ಲಿ ಅಭ್ಯರ್ಥಿಯೊಬ್ಬರಿಗೆ ಮತಹಾಕಲು...

ಬೆಂಗಳೂರು: ರಾಷ್ಟ್ರೀಯ ಸುದ್ದಿ ವಾಹಿನಿಯೊಂದು ನಡೆಸಿದ ಕುಟುಕು ಕಾರ್ಯಾಚರಣೆಯಲ್ಲಿ ರಾಜ್ಯಸಭೆ ಚುನಾವಣೆಯಲ್ಲಿ ಅಭ್ಯರ್ಥಿಯೊಬ್ಬರಿಗೆ ಮತಹಾಕಲು 5 ಕೋಟಿ ರುಪಾಯಿ ಲಂಚ ಕೇಳಿದೆ ಆರೋಪ ಎದುರಿಸುತ್ತಿರುವ ಜೆಡಿಎಸ್ ಶಾಸಕ ಮಲ್ಲಿಕಾರ್ಜುನ ಖೂಬಾ ಹಾಗೂ ಇತರರ ವಿರುದ್ಧ ಮಂಗಳವಾರ ದೂರು ದಾಖಲಿಸಲಾಗಿದೆ.
ವೋಟಿಗಾಗಿ ನೋಟು ಪ್ರಕರಣದ ಕುರಿತಂತೆ ಕುಟುಕು ಕಾರ್ಯಾಚರಣೆಯಲ್ಲಿ ಭಾಗಿಯಾದವರ ವಿರುದ್ಧ ತನಿಖೆ ನಡೆಸಬೇಕೆಂದು ಕೇಂದ್ರ ಚುನಾವಣಾ ಆಯೋಗ ಶಿಫಾರಸು ಮಾಡಿತ್ತು. ಈ ಹಿನ್ನೆಲೆಯಲ್ಲಿ ವಿಧಾನಸಭೆ ಕಾರ್ಯದರ್ಶಿ ಎಸ್.ಮೂರ್ತಿ ಅವರು ಇಂದು ವಿಧಾನಸಭೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕುಟುಕು ಕಾರ್ಯಾಚರಣೆಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗದಿಂದ ವರದಿ ಪಡೆದಿದ್ದ ಕೇಂದ್ರ ಚುನಾವಣಾ ಆಯೋಗ, ಈ ಬಗ್ಗೆ ತನಿಖೆಗೆ ಆದೇಶಿಸಿದೆ.
ಇಂಡಿಯಾ ಟುಡೆ ಮತ್ತು ಟೈಮ್ಸ್ ನೌ ನಡೆಸಿದ ಕುಟುಕು ಕಾರ್ಯಾಚರಣೆಯಲ್ಲಿ ರಾಜ್ಯದ ಆರು ಮಂದಿ ಶಾಸಕರು ಹಾಗೂ ಇಬ್ಬರು ರಾಜ್ಯಸಭಾ ಚುನಾವಣಾ ಅಭ್ಯರ್ಥಿಗಳು ನೋಟಿಗಾಗಿ ವೋಟು ಡೀಲ್ ಕುದುರಿಸಿರುವುದು ಬಹಿರಂಗಗೊಂಡಿತ್ತು. ಈ ಕುರಿತು ರಾಜ್ಯ ಚುನಾವಣಾ ಆಯುಕ್ತ ಅನಿಲ್ ಕುಮಾರ್ ಜಾ ಅವರು ಕೇಂದ್ರ ಚುನಾವಣಾ ಆಯೋಗಕ್ಕೆ ವರದಿ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT