ಯುವ ಲೇಖಕರಾದ ವಿಕ್ರಮ್ ಹತ್ವಾರ್ (ಫೋಟೋ ಕೃಪೆ: ಲೇಖಕರ ಫೇಸ್ಬುಕ್ ಖಾತೆ) 
ಪ್ರಧಾನ ಸುದ್ದಿ

ಕರ್ನಾಟಕದ ಮೂವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಕರ್ನಾಟಕದ ಮೂವರು ಲೇಖಕರಿಗೆ ೨೦೧೬ ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ನೀಡುವ ವಿವಿಧ ಪ್ರಶಸ್ತಿಗಳು ಲಭಿಸಿವೆ. ಹಿರಿಯ ಲೇಖಕ ಸುಮತೀಂದ್ರ ನಾಡಿಗ್,

ಬೆಂಗಳೂರು: ಕರ್ನಾಟಕದ ಮೂವರು ಲೇಖಕರಿಗೆ ೨೦೧೬ ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ನೀಡುವ ವಿವಿಧ ಪ್ರಶಸ್ತಿಗಳು ಲಭಿಸಿವೆ. ಹಿರಿಯ ಲೇಖಕ ಸುಮತೀಂದ್ರ ನಾಡಿಗ್, ಯುವ ಲೇಖಕರಾದ ವಿಕ್ರಮ್ ಹತ್ವಾರ್ ಮತ್ತು ರಘು ಕಾರ್ನಾಡ್ ಈ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

ಹಿರಿಯ ಕವಿ ಲೇಖಕ ಸುಮತೀಂದ್ರ ನಾಡಿಗ್ ಅವರ ಸಮಗ್ರ ಮಕ್ಕಳ ಸಾಹಿತ್ಯಕ್ಕಾಗಿ ಬಾಲ ಸಾಹಿತ್ಯ ಪುರಸ್ಕಾರ ನೀಡಲಾಗಿದೆ.

ವಿಕ್ರಮ್ ಹತ್ವಾರ್ ತಮ್ಮ 'ಜೀರೋ ಮತ್ತು ಒಂದು" ಕಥಾ ಸಂಕಲನಕ್ಕಾಗಿ 'ಯುವ ಸಾಹಿತ್ಯ ಪುರಸ್ಕಾರ' ಪಡೆದಿದ್ದಾರೆ. ೩೫ ವರ್ಷದ ಒಳಗಿನ ಬರಹಗಾರರಿಗೆ ಯುವ ಸಾಹಿತ್ಯ ಪುರಸ್ಕಾರ ನೀಡಿ ಗೌರವಿಸಲಾಗುತ್ತದೆ. ಈ ಪ್ರಶಸ್ತಿಯ ಜೊತೆಗೆ ೫೦ ಸಾವಿರ ನಗದು ಬಹುಮಾನ ಕೂಡ ನೀಡಲಾಗುತ್ತದೆ.

ಹಾಗೂ ಹಿರಿಯ ಲೇಖಕ ಗಿರೀಶ್ ಕಾರ್ನಾಡ್ ಅವರ ಪುತ್ರ ರಘು ಕಾರ್ನಾಡ್ ಅವರ ಪುಸ್ತಕ 'ಫಾರ್ದೆಸ್ಟ್ ಫೀಲ್ಡ್' ಪುಸ್ತಕಕ್ಕಾಗಿ ಇಂಗ್ಲಿಶ್ ವಿಭಾಗದಲ್ಲಿ ಜೀವನ ಚರಿತ್ರೆಗಳ ವಿಭಾಗಕ್ಕೆ ಪುರಸ್ಕಾರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!