ಡಾ.ಬಿ.ಆರ್. ಅಂಬೇಡ್ಕರ್ ಅವರ 125ನೇ ಜಯಂತಿಯನ್ನು ಉದ್ಘಾಟಿಸುತ್ತಿರುವ ಸಿದ್ದರಾಮಯ್ಯ 
ಪ್ರಧಾನ ಸುದ್ದಿ

ಮೌಢ್ಯ ಪ್ರತಿಬಂಧಕ ಕಾಯ್ದೆ ಜಾರಿಗೆ ತರಲು ಸರ್ಕಾರ ಸಿದ್ಧ: ಸಿಎಂ ಸಿದ್ದರಾಮಯ್ಯ

ಜನರನ್ನು ಶೋಷಿಸುತ್ತಿರುವ ಮೌಢ್ಯಾಚಾರಣೆಗಳನ್ನು ನಿರ್ಬಂಧಿಸಲು ಮೌಢ್ಯ ಪ್ರತಿಬಂಧಕ ಕಾಯಿದೆ ಜಾರಿಗೆ ತರಲು ಎಲ್ಲಾ ರೀತಿಯ ಸಿದ್ಧತೆಗಳನ್ನು...

ಬೆಂಗಳೂರು: ಜನರನ್ನು ಶೋಷಿಸುತ್ತಿರುವ ಮೌಢ್ಯಾಚಾರಣೆಗಳನ್ನು ನಿರ್ಬಂಧಿಸಲು ಮೌಢ್ಯ ಪ್ರತಿಬಂಧಕ ಕಾಯಿದೆ ಜಾರಿಗೆ ತರಲು ಸರ್ಕಾರ ಸಿದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ.
ಇಂದು ಅಂಬೇಡ್ಕರ್ ಭವನದಲ್ಲಿ ಪ್ರಗತಿಪರ ಮಠಾಧೀಶರ ವೇದಿಕೆ ಏರ್ಪಡಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್ ಅವರ 125ನೇ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದ ಸಿಎಂ, ಸಾವಿರಾರು ವರ್ಷಗಳಿಂದ ಉಳಿದುಕೊಂಡಿರುವ ಅಸ್ಪೃಶ್ಯತೆ ಇವತ್ತಿಗೂ ಬದಲಾಗಿಲ್ಲ. ಸರ್ಕಾರ ಇದರ ಬದಲಾವಣೆಗೆ ಪ್ರಯತ್ನಿಸಿದರೆ, ರಾಜಕೀಯ ಬಣ್ಣ ಹಚ್ಚುವವರಿದ್ದಾರೆ. ಹಾಗಾಗಿ ಪ್ರಗತಿಪರ ಮಠಾಧೀಶರೇ ಅಸ್ಪೃಶ್ಯತೆ ತೊಡೆದುಹಾಕಲು ಮುಂದಾಗಬೇಕು ಎಂದರು.
ಸಮಾಜದಲ್ಲಿ ಬದಲಾವಣೆ ತರಬೇಕಾದರೆ, ಅಸಮಾನತೆಯನ್ನು ತೊಡೆದು ಹಾಕಬೇಕಾದರೆ, ಸಂವಿಧಾನವನ್ನು ಅಕ್ಷರಶಃ ಜಾರಿಗೆ ತಂದರೆ ಸಾಕು ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.
ಇದೇ ವೇಳೆ ಕಾಗೆ ಕೂಳಿತಿದ್ದಕ್ಕೆ ನಾನು ನನ್ನ ಕಾರನ್ನು ಬದಲಾಯಿಸಲಿಲ್ಲ. ಆ ಕಾರನ್ನು ಕಳೆದ ಮೂರು ವರ್ಷಗಳಿಂದ ಬಳಸಿದ್ದೇನೆ. ಅಲ್ಲದೆ ಎರಡು ತಿಂಗಳ ಹಿಂದೆಯೇ ಹೊಸ ಕಾರು ಬುಕ್ ಮಾಡಿದ್ದೆ ಎಂದರು. 
ನಾನು ಇಂತಹ ಮೌಢ್ಯಗಳನ್ನು ನಂಬುವುದಿಲ್ಲ. ಚಾಮರಾಜನಗರಕ್ಕೆ ಹೋದರೆ ಅಧಿಕಾರ ಹೋಗುತ್ತದೆ ಎಂದು ಜನ ಹೇಳುತ್ತಾರೆ. ಆದರೆ ಇದುವರೆಗೂ ನಾನು ಅಧಿಕಾರ ಕಳೆದುಕೊಂಡಿಲ್ಲ ಮತ್ತು ಮುಂದೆ ಕಳೆದುಕೊಳ್ಳುವುದೂ ಇಲ್ಲ. ಇನ್ನೂ ಎರಡು ವರ್ಷಗಳ ಕಾಲ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ. ಅಷ್ಟೇ ಅಲ್ಲ ವಿಧಾನಸಭೆ ಚುನಾವಣೆಯ ಬಳಿಕವೂ ನಾನೇ ಮುಖ್ಯಮಂತ್ರಿಯಾಗುತ್ತೇನೆ ಎಂದರು.
ಇದಕ್ಕೂ ಮುನ್ನ ಪ್ರಾಸ್ತಾವಿಕ ಭಾಷಣ ಮಾಡಿದ್ದ ನಿಡುಮಾಮಿಡಿ ಮಹಾಸಂಸ್ಥಾನದ ಮಠಾಧ್ಯಕ್ಷ ವೀರಭದ್ರ ಚನ್ನಮಲ್ಲ ಸ್ವಾಮೀಜಿರವರು, ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಮೂಢನಂಬಿಕೆ ಪ್ರತಿಬಂಧಕಾ ಕಾಯ್ದೆಯನ್ನು ಮಂಡಿಸಬೇಕು ಎಂದು ಆಗ್ರಹಿಸದ್ದರು.
ಸಮಾರಂಭದಲ್ಲಿ ಸಚಿವರಾದ ಟಿ.ಬಿ. ಜಯಚಂದ್ರ, ಹೆಚ್.ಕೆ. ಪಾಟೀಲ್, ಕೆ.ಜೆ. ಜಾರ್ಜ್, ‌ಡಾ. ಹೆಚ್.ಸಿ. ಮಹದೇವಪ್ಪ, ರೋಷನ್ ಬೇಗ್, ಹೆಚ್. ಆಂಜನೇಯ, ರುದ್ರಪ್ಪ ಲಮಾಣಿ ಹಾಗೂ ವಿವಿಧ ಮಠಗಳ ನೂರಾರು ಮಠಾಧ್ಯಕ್ಷರು ಭಾಗವಹಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT