ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಗಲಭೆ ಸಂತ್ರಸ್ತೆಯನ್ನು ದಾಖಲಿಸಿಕೊಳ್ಳಲು ಆಸ್ಪತ್ರೆ ನಕಾರ; ರಸ್ತೆಯಲ್ಲೇ ಮಗುವಿಗೆ ಜನನ

2013ರ ಮುಜಫರನಗರ ಕೋಮು ಗಲಭೆಗಳಿಂದ ತನ್ನ ಮೂಲ ಗ್ರಾಮದಿಂದ ಸ್ಥಳಾಂತರಗೊಂಡಿದ್ದ 35 ವರ್ಷದ ಗರ್ಭಿಣಿ ಮಹಿಳೆಯನ್ನು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿಕೊಳ್ಳಲು

ಮುಜಫರನಗರ: 2013ರ ಮುಜಫರನಗರ ಕೋಮು ಗಲಭೆಗಳಿಂದ ತನ್ನ ಮೂಲ ಗ್ರಾಮದಿಂದ ಸ್ಥಳಾಂತರಗೊಂಡಿದ್ದ 35 ವರ್ಷದ ಗರ್ಭಿಣಿ ಮಹಿಳೆಯನ್ನು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿಕೊಳ್ಳಲು ನಿರಾಕರಿಸಿದ್ದರಿಂದ ಅವರು ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದ್ದು, ಮುಖ್ಯ ಆರೋಗ್ಯ ಅಧಿಕಾರಿ ಇದರ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ.

ಈ ಘಟನೆ ನೆನ್ನೆ ನಡೆದಿದ್ದು, ಖಾಂಡ್ಲಾ ನಗರದ ಸರ್ಕಾರಿ ಪ್ರಾಥಮಿಕ ಕೇಂದ್ರಕ್ಕೆ ಗರ್ಭಿಣಿ ಮಹಿಳೆಯನ್ನು ದಾಖಲಿಸಕೊಳ್ಳಲು ವೈದ್ಯರು ನಿರಾಕರಿಸಿದರು ಎಂದು ಅವರ ಪತಿ ದೂರಿದ್ದಾರೆ.

ಗರ್ಭಿಣಿ ಮಹಿಳೆಯ ಜನನ ನೀಡಬೇಕಿದ್ದ ದಿನಕ್ಕೆ ಇನ್ನೂ ಮೂರು ದಿನಗಳು ಬಾಕಿಯಿವೆ ಎಂದು ಮನೆಗೆ ಹಿಂದಿರುಗಲು ವೈದ್ಯರು ತಿಳಿಸಿದರು ಎಂದು ಅವರು ದೂರಿದ್ದಾರೆ.

ಮನೆಗೆ ಹಿಂದಿರುಗಬೇಕಾದರೆ ರಸ್ತೆಯಲ್ಲೇ ತಮ್ಮ ಪತ್ನಿ ಮಗುವಿಗೆ ಜನನ ನೀಡಿರುವುದಾಗಿ ಅವರು ತಿಳಿಸಿದ್ದಾರೆ.

ನಂತರ ಮುಖ್ಯ ಆರೋಗ್ಯ ಅಧಿಕಾರಿ ವಿ ಅಗ್ನಿಹೋತ್ರಿ ಅವರ ಆದೇಶದ ಮೇರೆಗೆ ಮಹಿಳೆಯನ್ನು ಶಾಮ್ಲಿ ಆಸ್ಪತ್ರೆಗೆ ಸೇರಿಸಲಾಗಿದೆ. ಹಾಗೂ ಈ ಘಟನೆಯ ಬಗ್ಗೆ ತನಿಖೆಗೆ ಆಗ್ರಹಿಸಿದ್ದಾರೆ.

ಕೋಮು ಗಲಭೆಯ ವೇಳೆಯಲ್ಲಿ ತಮ್ಮ ಮೂಲ ಗ್ರಾಮ ಫುಗಾನದಿಂದ ಖಾಂಡ್ಲಾ ಪಟ್ಟಣಕ್ಕೆ ಸ್ಥಳಾಂತರಗೊಂಡಿದ್ದಾಗಿ ಮಹಿಳೆ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT