ಹೈಕೋರ್ಟ್ 
ಪ್ರಧಾನ ಸುದ್ದಿ

ಕೆಪಿಎಸ್ಸಿ ಅಕ್ರಮ ನೇಮಕಾತಿ: ಆಯ್ಕೆ ಪಟ್ಟಿ ರದ್ದು ಸಾಧ್ಯವಿಲ್ಲವೆಂದು ಹೈಕೋರ್ಟ್ ತೀರ್ಪು

ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ) 1998, 1999 ಮತ್ತು 2004ನೇ ಸಾಲಿನ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ...

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ) 1998, 1999 ಮತ್ತು 2004ನೇ ಸಾಲಿನ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಅಂತಿಮ ತೀರ್ಪು ಪ್ರಕಟಿಸಿರುವ ಹೈಕೋರ್ಟ್ ವಿಭಾಗೀಯ ಪೀಠ, ಆಯ್ಕೆ ಪಟ್ಟಿ ರದ್ದುಪಡಿಸಲು ಸಾಧ್ಯವಿಲ್ಲ ಎಂದು ಹೇಳಿದೆ.
1998, 99 ಮತ್ತು 2004ನೇ ಸಾಲಿನ  ಗಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿಯಲ್ಲಿ ನಡೆದಿರುವ ಅಕ್ರಮಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ವಿವಿಧ ಅರ್ಜಿಗಳ ಸುಧಿರ್ಘ ವಿಚಾರಣೆ ನಡೆಸಿದ ವಿಭಾಗೀಯ ಪೀಠ, ಕೆಲವರ ತಪ್ಪಿಗೆ ಎಲ್ಲರಿಗೂ ಶಿಕ್ಷೆ ನೀಡಲು ಸಾಧ್ಯವಿಲ್ಲ ಎಂದಿದೆ.
ನೇಮಕಾತಿಯಲ್ಲಿ ಕೆಲವು ತಪ್ಪುಗಳು ನಡೆದಿವೆ. ಇದಕ್ಕೆ ಕೆಪಿಎಸ್ ಸಿಯೆ ಹೊಣೆಯೇ ಹೊರತು ಅಭ್ಯರ್ಥಿಗಳಲ್ಲ. ಆ ನಿಟ್ಟಿನಲ್ಲಿ 1;5 ಅನುಪಾತದಲ್ಲಿ ವ್ಯಕ್ತಿತ್ವ ಪರೀಕ್ಷೆಗೆ ಆಯ್ಕೆ ಮಾಡಬೇಕು. 2 ತಿಂಗಳಲ್ಲಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು ಎಂದು ಹೈಕೋರ್ಟ್ ಸೂಚನೆ ನೀಡಿದೆ.
ಕೆಪಿಎಸ್ಸಿ ಒಂದು ಸಾಂವಿಧಾನಿಕ ಸಂಸ್ಥೆ. ಕೇವಲ ಸಾಂವಿಧಾನಿಕ  ಮಾನ್ಯತೆ ನೀಡಿದರೆ ಸಾಕಾಗದು. ಆ ಸಂಸ್ಥೆಗೆ ದಕ್ಷ ಹಾಗೂ ಪ್ರಾಮಾಣಿಕರನ್ನು ನೇಮಕ ಮಾಡಬೇಕು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದೆ. ಅಲ್ಲದೆ ಪಿ.ಸಿ.ಹೋಟಾ ಸಮಿತಿ ನಿರ್ದೇಶನದಂತೆ ನಿಯಮಾವಳಿಗಳನ್ನು ರೂಪಿಸುವಂತೆ ಸರ್ಕಾರಕ್ಕೆ ಸೂಚಿಸಿದೆ.
ಕೆಪಿಎಸ್‌ಸಿ ನೇಮಕಾತಿ ಅಕ್ರಮಗಳ ವಿರುದ್ಧ ಖಲೀಲ್‌ ಅಹ್ಮದ್‌ ಸೇರಿದಂತೆ ಇನ್ನಿತರ ಉದ್ಯೋಗ ವಂಚಿತರು 2012 ಮತ್ತು 13ರಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸೇರಿದಂತೆ ಹಲವು ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಕಳೆದ ನಾಲ್ಕು ವರ್ಷಗಳಿಂದ ಹೈಕೋರ್ಟ್‌ ವಿಚಾರಣೆ ನಡೆಸುತ್ತಿತ್ತು. ಕಳೆದ ಕೆಲ ತಿಂಗಳಿಂದ ನ್ಯಾ.ಎನ್‌. ಕುಮಾರ್‌ ಮತ್ತು ನ್ಯಾ.ಬಿ.ವೀರಪ್ಪ ಅವರಿದ್ದ ವಿಭಾಗೀಯ ಪೀಠ, ಅರ್ಜಿಗಳ ಸಂಬಂಧ ಸುದೀರ್ಘ‌ ವಾದ-ಪ್ರತಿವಾದ ಆಲಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT